ಪ್ರಿಯಾಂಕ್ ಖರ್ಗೆ ನೋಡಿದ್ರೆ ಪಾಪ ಅನಿಸುತ್ತೆ, ಮಂತ್ರಿಯಾದ್ರೂ ಎದುರಿಸಲು ತಾಕತ್ತಿಲ್ಲ: ಚಕ್ರವರ್ತಿ ಸೂಲಿಬೆಲೆ

ಪ್ರಿಯಾಂಕ್ ಖರ್ಗೆ ನೋಡಿದ್ರೆ ಪಾಪ ಅನಿಸುತ್ತೆ, ಮಂತ್ರಿಯಾದ್ರೂ ಎದುರಿಸಲು ತಾಕತ್ತಿಲ್ಲ: ಚಕ್ರವರ್ತಿ ಸೂಲಿಬೆಲೆ

Published : Feb 29, 2024, 02:24 PM ISTUpdated : Feb 29, 2024, 02:42 PM IST

‘ಅವರು ಹೀಗೇ ಮಾಡುತ್ತಾರೆಂದು ನನಗೆ ಗೊತ್ತಿತ್ತು’
‘ಅವರ ಮನಸ್ಸಿನಲ್ಲಿ ಹೆದರಿಕೆ ಇರೋದು ಗೊತ್ತಿದೆ’
ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ ವಾಗ್ದಾಳಿ

ಕಲಬುರಗಿ: ಜಿಲ್ಲೆಗೆ ಪ್ರವೇಶಿಸದಂತೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆಗೆ(Chakravarti Sulibele) ನಿರ್ಬಂಧ ಹೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ. ರಾತ್ರಿ 11 ಗಂಟೆಗೆ ಕಾರ್ಯಕ್ರಮದ ನಿಷೇಧಿಸಿದ್ದು ಹಾಸ್ಯಾಸ್ಪದವಾಗಿದೆ. ಅವರು ಹೀಗೆ ಮಾಡುತ್ತಾರೆಂದು ನನಗೆ ಗೊತ್ತಿತ್ತು. ಪ್ರಿಯಾಂಕ್ ಖರ್ಗೆಗೆ ಯಾವ ರೀತಿಯ ಹೆದರಿಕೆ ಇರಬಹುದು. ಅವರ ಮನಸ್ಸಿನಲ್ಲಿ ಹೆದರಿಕೆ ಇರೋದು ಗೊತ್ತಿದೆ. ಪ್ರಿಯಾಂಕ್ ಖರ್ಗೆ ನೋಡಿದರೆ ಪಾಪ ಅನಿಸುತ್ತೆ. ಮಂತ್ರಿಯಾಗಿದ್ರೂ ಎದುರಿಸಲು ತಾಕತ್ತು ಇಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದರು. ಕಲಬುರಗಿ(Kalaburagi) ಪೊಲೀಸರ ಬಗ್ಗೆ ಅನುಕಂಪ ಹುಟ್ಟುತ್ತದೆ. ಇಡೀ ರಾಜ್ಯದಲ್ಲಿ ಎಲ್ಲೂ ಶಾಂತಿ ಭಂಗ ಆಗಿಲ್ಲ. ಚಿತ್ತಾಪುರದಲ್ಲಿ ಮಾತ್ರ ಯಾಕೆ ಶಾಂತಿ ಭಂಗ ಆಗುತ್ತದೆ?. ಪ್ರಿಯಾಂಕ್ ಖರ್ಗೆಗೆ ಕ್ಷೇತ್ರದಲ್ಲಿ ಸತ್ಯ ಎದುರಿಸಲು ಆಗಿಲ್ಲ. ಹೇಡಿತನದಿಂದ ಮುಖಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಯಾವತ್ತೂ ಎದುರಿಗೆ ಬರಲ್ಲ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ  ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಮಹಿಳೆ ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ !

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more