ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

Published : Aug 03, 2023, 01:56 PM IST

ಸುಮಾರು ಎರಡು ಎಕರೆಯಲ್ಲಿ ಬಂಗಾರದ ಬೆಲೆ ಇರುವ ಟೊಮೆಟೊ ಬೆಳೆದು ರೈತ ಇನ್ನೇನು ಫಲವನ್ನು ಕಟಾವು ಮಾಡಬೇಕು ಎನ್ನುವಷ್ಟರಲ್ಲೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡಸಮೇತ ಕತ್ತರಿಸಿ ಹಾಕಿದ್ದಾರೆ.

ಚಾಮರಾಜನಗರ (ಆ.03) ದೇಶದಲ್ಲಿ ಬಂಗಾರದ ಬೆಲೆಯನ್ನು ಹೊಂದಿರುವ ಟೊಮೆಟೊವನ್ನು ಎರಡು ಎಕರೆಯಲ್ಲಿ ಹುಲುಸಾಗಿ ಬೆಳೆದಿದ್ದ ರೈತ, ಇನ್ನೊಂದು ವಾರದಲ್ಲಿ ಹಣ್ಣುಗಳನ್ನು ಕಿತ್ತು ಮಾರುಕಟ್ಟೆಗೆ ಮಾರಾಟ ಮಾಡಬೇಕು ಎನ್ನುವಷ್ಟರಲ್ಲಿಯೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿದ್ದಾರೆ.
ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮಂಜು ಎನ್ನುವ ರೈತ ಎರಡು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು. ಲಕ್ಷಾಂತರ ರೂ. ಹಣವನ್ನು ಖರ್ಚು ಮಾಡಿದ್ದ ರೈತನಿಗೆ, ಹುಲುಸಾಗಿ ಬೆಳೆದಿದ್ದ ಟೊಮೆಟೊ ಬೆಳೆಯಿಂದ ತನ್ನ ಎಲ್ಲ ಕಷ್ಟವೂ ಪರಿಹಾರ ಆಗಬಹುದು ಎಂದು ನಿರೀಕ್ಷೆ ಮಾಡಿದ್ದನು. ಆದರೆ, ರೈತನೊಬ್ಬ ಉದ್ಧಾರ ಆಗಬಾರದು ಎನ್ನುವ ಉದ್ದೇಶದಿಂದ ಹುಲುಸಾಗಿ ಬೆಳೆದು ಇನ್ನೇನು ಕಟಾವಿಗೆ ಬಂದಿದ್ದ ಎರಡು ಎಕರೆ ಟೊಮೆಟೊ ಬೆಳೆಯನ್ನು ಬುಡ ಸಮೇತವೇ ಕತ್ತರಿಸಿ ಹಾಕಿದ್ದಾರೆ. ಕಿಡಿಗೇಡಿಗಳ ಕುಕೃತ್ಯದಿಂದ ರೈತನ ಬೆಳೆ ಸಂಪೂರ್ಣ ಹಾನಿಯಾಗಿದ್ದು, ರೈತ ಜಮೀನಿನಲ್ಲಿ ಮಲಗಿ ಹೊರಳಾಡಿ ಕಣ್ಣೀರು‌ ಹಾಕಿದ್ದಾನೆ. ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊ ನಾಶದ ಹಿನ್ನೆಲೆಯಲ್ಲಿ ರೈತ ಮಂಜು ಅವರು, ಬೇಗೂರು ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ. ಇದಕ್ಕೆ ಪೊಲೀಸರು ನ್ಯಾಯ ಕೊಡಿಸುವುದು ಅಗತ್ಯವಾಗಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more