ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

Published : Aug 03, 2023, 01:56 PM IST

ಸುಮಾರು ಎರಡು ಎಕರೆಯಲ್ಲಿ ಬಂಗಾರದ ಬೆಲೆ ಇರುವ ಟೊಮೆಟೊ ಬೆಳೆದು ರೈತ ಇನ್ನೇನು ಫಲವನ್ನು ಕಟಾವು ಮಾಡಬೇಕು ಎನ್ನುವಷ್ಟರಲ್ಲೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡಸಮೇತ ಕತ್ತರಿಸಿ ಹಾಕಿದ್ದಾರೆ.

ಚಾಮರಾಜನಗರ (ಆ.03) ದೇಶದಲ್ಲಿ ಬಂಗಾರದ ಬೆಲೆಯನ್ನು ಹೊಂದಿರುವ ಟೊಮೆಟೊವನ್ನು ಎರಡು ಎಕರೆಯಲ್ಲಿ ಹುಲುಸಾಗಿ ಬೆಳೆದಿದ್ದ ರೈತ, ಇನ್ನೊಂದು ವಾರದಲ್ಲಿ ಹಣ್ಣುಗಳನ್ನು ಕಿತ್ತು ಮಾರುಕಟ್ಟೆಗೆ ಮಾರಾಟ ಮಾಡಬೇಕು ಎನ್ನುವಷ್ಟರಲ್ಲಿಯೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿದ್ದಾರೆ.
ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮಂಜು ಎನ್ನುವ ರೈತ ಎರಡು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು. ಲಕ್ಷಾಂತರ ರೂ. ಹಣವನ್ನು ಖರ್ಚು ಮಾಡಿದ್ದ ರೈತನಿಗೆ, ಹುಲುಸಾಗಿ ಬೆಳೆದಿದ್ದ ಟೊಮೆಟೊ ಬೆಳೆಯಿಂದ ತನ್ನ ಎಲ್ಲ ಕಷ್ಟವೂ ಪರಿಹಾರ ಆಗಬಹುದು ಎಂದು ನಿರೀಕ್ಷೆ ಮಾಡಿದ್ದನು. ಆದರೆ, ರೈತನೊಬ್ಬ ಉದ್ಧಾರ ಆಗಬಾರದು ಎನ್ನುವ ಉದ್ದೇಶದಿಂದ ಹುಲುಸಾಗಿ ಬೆಳೆದು ಇನ್ನೇನು ಕಟಾವಿಗೆ ಬಂದಿದ್ದ ಎರಡು ಎಕರೆ ಟೊಮೆಟೊ ಬೆಳೆಯನ್ನು ಬುಡ ಸಮೇತವೇ ಕತ್ತರಿಸಿ ಹಾಕಿದ್ದಾರೆ. ಕಿಡಿಗೇಡಿಗಳ ಕುಕೃತ್ಯದಿಂದ ರೈತನ ಬೆಳೆ ಸಂಪೂರ್ಣ ಹಾನಿಯಾಗಿದ್ದು, ರೈತ ಜಮೀನಿನಲ್ಲಿ ಮಲಗಿ ಹೊರಳಾಡಿ ಕಣ್ಣೀರು‌ ಹಾಕಿದ್ದಾನೆ. ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊ ನಾಶದ ಹಿನ್ನೆಲೆಯಲ್ಲಿ ರೈತ ಮಂಜು ಅವರು, ಬೇಗೂರು ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ. ಇದಕ್ಕೆ ಪೊಲೀಸರು ನ್ಯಾಯ ಕೊಡಿಸುವುದು ಅಗತ್ಯವಾಗಿದೆ.

45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
Read more