ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

Published : Aug 03, 2023, 01:56 PM IST

ಸುಮಾರು ಎರಡು ಎಕರೆಯಲ್ಲಿ ಬಂಗಾರದ ಬೆಲೆ ಇರುವ ಟೊಮೆಟೊ ಬೆಳೆದು ರೈತ ಇನ್ನೇನು ಫಲವನ್ನು ಕಟಾವು ಮಾಡಬೇಕು ಎನ್ನುವಷ್ಟರಲ್ಲೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡಸಮೇತ ಕತ್ತರಿಸಿ ಹಾಕಿದ್ದಾರೆ.

ಚಾಮರಾಜನಗರ (ಆ.03) ದೇಶದಲ್ಲಿ ಬಂಗಾರದ ಬೆಲೆಯನ್ನು ಹೊಂದಿರುವ ಟೊಮೆಟೊವನ್ನು ಎರಡು ಎಕರೆಯಲ್ಲಿ ಹುಲುಸಾಗಿ ಬೆಳೆದಿದ್ದ ರೈತ, ಇನ್ನೊಂದು ವಾರದಲ್ಲಿ ಹಣ್ಣುಗಳನ್ನು ಕಿತ್ತು ಮಾರುಕಟ್ಟೆಗೆ ಮಾರಾಟ ಮಾಡಬೇಕು ಎನ್ನುವಷ್ಟರಲ್ಲಿಯೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿದ್ದಾರೆ.
ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮಂಜು ಎನ್ನುವ ರೈತ ಎರಡು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು. ಲಕ್ಷಾಂತರ ರೂ. ಹಣವನ್ನು ಖರ್ಚು ಮಾಡಿದ್ದ ರೈತನಿಗೆ, ಹುಲುಸಾಗಿ ಬೆಳೆದಿದ್ದ ಟೊಮೆಟೊ ಬೆಳೆಯಿಂದ ತನ್ನ ಎಲ್ಲ ಕಷ್ಟವೂ ಪರಿಹಾರ ಆಗಬಹುದು ಎಂದು ನಿರೀಕ್ಷೆ ಮಾಡಿದ್ದನು. ಆದರೆ, ರೈತನೊಬ್ಬ ಉದ್ಧಾರ ಆಗಬಾರದು ಎನ್ನುವ ಉದ್ದೇಶದಿಂದ ಹುಲುಸಾಗಿ ಬೆಳೆದು ಇನ್ನೇನು ಕಟಾವಿಗೆ ಬಂದಿದ್ದ ಎರಡು ಎಕರೆ ಟೊಮೆಟೊ ಬೆಳೆಯನ್ನು ಬುಡ ಸಮೇತವೇ ಕತ್ತರಿಸಿ ಹಾಕಿದ್ದಾರೆ. ಕಿಡಿಗೇಡಿಗಳ ಕುಕೃತ್ಯದಿಂದ ರೈತನ ಬೆಳೆ ಸಂಪೂರ್ಣ ಹಾನಿಯಾಗಿದ್ದು, ರೈತ ಜಮೀನಿನಲ್ಲಿ ಮಲಗಿ ಹೊರಳಾಡಿ ಕಣ್ಣೀರು‌ ಹಾಕಿದ್ದಾನೆ. ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊ ನಾಶದ ಹಿನ್ನೆಲೆಯಲ್ಲಿ ರೈತ ಮಂಜು ಅವರು, ಬೇಗೂರು ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ. ಇದಕ್ಕೆ ಪೊಲೀಸರು ನ್ಯಾಯ ಕೊಡಿಸುವುದು ಅಗತ್ಯವಾಗಿದೆ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more