ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

Published : Aug 03, 2023, 01:56 PM IST

ಸುಮಾರು ಎರಡು ಎಕರೆಯಲ್ಲಿ ಬಂಗಾರದ ಬೆಲೆ ಇರುವ ಟೊಮೆಟೊ ಬೆಳೆದು ರೈತ ಇನ್ನೇನು ಫಲವನ್ನು ಕಟಾವು ಮಾಡಬೇಕು ಎನ್ನುವಷ್ಟರಲ್ಲೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡಸಮೇತ ಕತ್ತರಿಸಿ ಹಾಕಿದ್ದಾರೆ.

ಚಾಮರಾಜನಗರ (ಆ.03) ದೇಶದಲ್ಲಿ ಬಂಗಾರದ ಬೆಲೆಯನ್ನು ಹೊಂದಿರುವ ಟೊಮೆಟೊವನ್ನು ಎರಡು ಎಕರೆಯಲ್ಲಿ ಹುಲುಸಾಗಿ ಬೆಳೆದಿದ್ದ ರೈತ, ಇನ್ನೊಂದು ವಾರದಲ್ಲಿ ಹಣ್ಣುಗಳನ್ನು ಕಿತ್ತು ಮಾರುಕಟ್ಟೆಗೆ ಮಾರಾಟ ಮಾಡಬೇಕು ಎನ್ನುವಷ್ಟರಲ್ಲಿಯೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿದ್ದಾರೆ.
ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮಂಜು ಎನ್ನುವ ರೈತ ಎರಡು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು. ಲಕ್ಷಾಂತರ ರೂ. ಹಣವನ್ನು ಖರ್ಚು ಮಾಡಿದ್ದ ರೈತನಿಗೆ, ಹುಲುಸಾಗಿ ಬೆಳೆದಿದ್ದ ಟೊಮೆಟೊ ಬೆಳೆಯಿಂದ ತನ್ನ ಎಲ್ಲ ಕಷ್ಟವೂ ಪರಿಹಾರ ಆಗಬಹುದು ಎಂದು ನಿರೀಕ್ಷೆ ಮಾಡಿದ್ದನು. ಆದರೆ, ರೈತನೊಬ್ಬ ಉದ್ಧಾರ ಆಗಬಾರದು ಎನ್ನುವ ಉದ್ದೇಶದಿಂದ ಹುಲುಸಾಗಿ ಬೆಳೆದು ಇನ್ನೇನು ಕಟಾವಿಗೆ ಬಂದಿದ್ದ ಎರಡು ಎಕರೆ ಟೊಮೆಟೊ ಬೆಳೆಯನ್ನು ಬುಡ ಸಮೇತವೇ ಕತ್ತರಿಸಿ ಹಾಕಿದ್ದಾರೆ. ಕಿಡಿಗೇಡಿಗಳ ಕುಕೃತ್ಯದಿಂದ ರೈತನ ಬೆಳೆ ಸಂಪೂರ್ಣ ಹಾನಿಯಾಗಿದ್ದು, ರೈತ ಜಮೀನಿನಲ್ಲಿ ಮಲಗಿ ಹೊರಳಾಡಿ ಕಣ್ಣೀರು‌ ಹಾಕಿದ್ದಾನೆ. ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊ ನಾಶದ ಹಿನ್ನೆಲೆಯಲ್ಲಿ ರೈತ ಮಂಜು ಅವರು, ಬೇಗೂರು ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ. ಇದಕ್ಕೆ ಪೊಲೀಸರು ನ್ಯಾಯ ಕೊಡಿಸುವುದು ಅಗತ್ಯವಾಗಿದೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more