ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

Published : Aug 03, 2023, 01:56 PM IST

ಸುಮಾರು ಎರಡು ಎಕರೆಯಲ್ಲಿ ಬಂಗಾರದ ಬೆಲೆ ಇರುವ ಟೊಮೆಟೊ ಬೆಳೆದು ರೈತ ಇನ್ನೇನು ಫಲವನ್ನು ಕಟಾವು ಮಾಡಬೇಕು ಎನ್ನುವಷ್ಟರಲ್ಲೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡಸಮೇತ ಕತ್ತರಿಸಿ ಹಾಕಿದ್ದಾರೆ.

ಚಾಮರಾಜನಗರ (ಆ.03) ದೇಶದಲ್ಲಿ ಬಂಗಾರದ ಬೆಲೆಯನ್ನು ಹೊಂದಿರುವ ಟೊಮೆಟೊವನ್ನು ಎರಡು ಎಕರೆಯಲ್ಲಿ ಹುಲುಸಾಗಿ ಬೆಳೆದಿದ್ದ ರೈತ, ಇನ್ನೊಂದು ವಾರದಲ್ಲಿ ಹಣ್ಣುಗಳನ್ನು ಕಿತ್ತು ಮಾರುಕಟ್ಟೆಗೆ ಮಾರಾಟ ಮಾಡಬೇಕು ಎನ್ನುವಷ್ಟರಲ್ಲಿಯೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿದ್ದಾರೆ.
ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮಂಜು ಎನ್ನುವ ರೈತ ಎರಡು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು. ಲಕ್ಷಾಂತರ ರೂ. ಹಣವನ್ನು ಖರ್ಚು ಮಾಡಿದ್ದ ರೈತನಿಗೆ, ಹುಲುಸಾಗಿ ಬೆಳೆದಿದ್ದ ಟೊಮೆಟೊ ಬೆಳೆಯಿಂದ ತನ್ನ ಎಲ್ಲ ಕಷ್ಟವೂ ಪರಿಹಾರ ಆಗಬಹುದು ಎಂದು ನಿರೀಕ್ಷೆ ಮಾಡಿದ್ದನು. ಆದರೆ, ರೈತನೊಬ್ಬ ಉದ್ಧಾರ ಆಗಬಾರದು ಎನ್ನುವ ಉದ್ದೇಶದಿಂದ ಹುಲುಸಾಗಿ ಬೆಳೆದು ಇನ್ನೇನು ಕಟಾವಿಗೆ ಬಂದಿದ್ದ ಎರಡು ಎಕರೆ ಟೊಮೆಟೊ ಬೆಳೆಯನ್ನು ಬುಡ ಸಮೇತವೇ ಕತ್ತರಿಸಿ ಹಾಕಿದ್ದಾರೆ. ಕಿಡಿಗೇಡಿಗಳ ಕುಕೃತ್ಯದಿಂದ ರೈತನ ಬೆಳೆ ಸಂಪೂರ್ಣ ಹಾನಿಯಾಗಿದ್ದು, ರೈತ ಜಮೀನಿನಲ್ಲಿ ಮಲಗಿ ಹೊರಳಾಡಿ ಕಣ್ಣೀರು‌ ಹಾಕಿದ್ದಾನೆ. ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊ ನಾಶದ ಹಿನ್ನೆಲೆಯಲ್ಲಿ ರೈತ ಮಂಜು ಅವರು, ಬೇಗೂರು ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ. ಇದಕ್ಕೆ ಪೊಲೀಸರು ನ್ಯಾಯ ಕೊಡಿಸುವುದು ಅಗತ್ಯವಾಗಿದೆ.

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more