ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

Published : Aug 03, 2023, 01:56 PM IST

ಸುಮಾರು ಎರಡು ಎಕರೆಯಲ್ಲಿ ಬಂಗಾರದ ಬೆಲೆ ಇರುವ ಟೊಮೆಟೊ ಬೆಳೆದು ರೈತ ಇನ್ನೇನು ಫಲವನ್ನು ಕಟಾವು ಮಾಡಬೇಕು ಎನ್ನುವಷ್ಟರಲ್ಲೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡಸಮೇತ ಕತ್ತರಿಸಿ ಹಾಕಿದ್ದಾರೆ.

ಚಾಮರಾಜನಗರ (ಆ.03) ದೇಶದಲ್ಲಿ ಬಂಗಾರದ ಬೆಲೆಯನ್ನು ಹೊಂದಿರುವ ಟೊಮೆಟೊವನ್ನು ಎರಡು ಎಕರೆಯಲ್ಲಿ ಹುಲುಸಾಗಿ ಬೆಳೆದಿದ್ದ ರೈತ, ಇನ್ನೊಂದು ವಾರದಲ್ಲಿ ಹಣ್ಣುಗಳನ್ನು ಕಿತ್ತು ಮಾರುಕಟ್ಟೆಗೆ ಮಾರಾಟ ಮಾಡಬೇಕು ಎನ್ನುವಷ್ಟರಲ್ಲಿಯೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿದ್ದಾರೆ.
ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮಂಜು ಎನ್ನುವ ರೈತ ಎರಡು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು. ಲಕ್ಷಾಂತರ ರೂ. ಹಣವನ್ನು ಖರ್ಚು ಮಾಡಿದ್ದ ರೈತನಿಗೆ, ಹುಲುಸಾಗಿ ಬೆಳೆದಿದ್ದ ಟೊಮೆಟೊ ಬೆಳೆಯಿಂದ ತನ್ನ ಎಲ್ಲ ಕಷ್ಟವೂ ಪರಿಹಾರ ಆಗಬಹುದು ಎಂದು ನಿರೀಕ್ಷೆ ಮಾಡಿದ್ದನು. ಆದರೆ, ರೈತನೊಬ್ಬ ಉದ್ಧಾರ ಆಗಬಾರದು ಎನ್ನುವ ಉದ್ದೇಶದಿಂದ ಹುಲುಸಾಗಿ ಬೆಳೆದು ಇನ್ನೇನು ಕಟಾವಿಗೆ ಬಂದಿದ್ದ ಎರಡು ಎಕರೆ ಟೊಮೆಟೊ ಬೆಳೆಯನ್ನು ಬುಡ ಸಮೇತವೇ ಕತ್ತರಿಸಿ ಹಾಕಿದ್ದಾರೆ. ಕಿಡಿಗೇಡಿಗಳ ಕುಕೃತ್ಯದಿಂದ ರೈತನ ಬೆಳೆ ಸಂಪೂರ್ಣ ಹಾನಿಯಾಗಿದ್ದು, ರೈತ ಜಮೀನಿನಲ್ಲಿ ಮಲಗಿ ಹೊರಳಾಡಿ ಕಣ್ಣೀರು‌ ಹಾಕಿದ್ದಾನೆ. ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊ ನಾಶದ ಹಿನ್ನೆಲೆಯಲ್ಲಿ ರೈತ ಮಂಜು ಅವರು, ಬೇಗೂರು ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ. ಇದಕ್ಕೆ ಪೊಲೀಸರು ನ್ಯಾಯ ಕೊಡಿಸುವುದು ಅಗತ್ಯವಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more