ಮೈಕ್ರೋ ಫೈನಾನ್ಸ್‌ ಕಿರುಕುಳ ತಾಳಲಾರದೇ ಗ್ರಾಮವನ್ನೇ ತೊರೆದ 100ಕ್ಕೂ ಹೆಚ್ಚು ಕುಟುಂಬಗಳು!

ಮೈಕ್ರೋ ಫೈನಾನ್ಸ್‌ ಕಿರುಕುಳ ತಾಳಲಾರದೇ ಗ್ರಾಮವನ್ನೇ ತೊರೆದ 100ಕ್ಕೂ ಹೆಚ್ಚು ಕುಟುಂಬಗಳು!

Published : Jan 10, 2025, 08:25 PM IST

ಖಾಸಗಿ ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಚಾಮರಾಜನಗರ ಜಿಲ್ಲೆಯ ನೂರಾರು ಕುಟುಂಬಗಳು ತಮ್ಮ ಗ್ರಾಮಗಳನ್ನು ತೊರೆದಿವೆ. ಸಾಲದ ಹೊರೆ ತಾಳಲಾರದೆ ಕೆಲವರು ಮಕ್ಕಳ ವಿದ್ಯಾಭ್ಯಾಸವನ್ನೂ ಮೊಟಕುಗೊಳಿಸಿ ಊರು ಬಿಟ್ಟಿದ್ದಾರೆ. ಕಿಡ್ನಿ ಮಾರಿ ಸಾಲ ತೀರಿಸುವ ಆಲೋಚನೆ ಮಾಡುತ್ತಿರುವ ಬಾಲಕನೊಬ್ಬನ ಅಳಲು ಮೈಕ್ರೋಫೈನಾನ್ಸ್ ಕಿರುಕುಳದ ಭೀಕರತೆಯನ್ನು ಎತ್ತಿ ತೋರಿಸುತ್ತದೆ.

ಚಾಮರಾಜನಗರ (ಜ.10): ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ  ಖಾಸಗಿ  ಮೈಕ್ರೋ  ಫೈನಾನ್ಸ್ ಕಂಪನಿಗಳ ಹಾವಳಿ ಮೇರೆ ಮೀರಿದೆ. ಇವರ ಕಿರುಕುಳ ತಾಳಲಾರದೆ ಚಾಮರಾಜನಗರ ಜಿಲ್ಲೆಯ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ತಮ್ಮ ಸ್ವಗ್ರಾಮವನ್ನೇ ತೊರೆದಿವೆ.

ಅದರಲ್ಲಿಯೂ ಒಬ್ಬ ಬಾಲಕ ನಮ್ಮಮ್ಮನನ್ನು ಚಾಪೆ ಹಾಸಿ ಕುಳಿತುಕೊಂಡು ನಿಂತಲ್ಲಿಯೇ ಸಾಲ ಕಟ್ಟು ಅಂತಾರೆ ಸಾರ್. ನಾನು ಅವರಿಗೆ ಮತ್ತು ಸರ್ಕಾರಕ್ಕೆ ಕೈ ಮುಗಿದು ಕೇಳ್ಕೊಳ್ತೀನಿ. ನನ್ನ ಒಂದು ಕಿಡ್ನಿ ಮಾರಾಟ ಮಾಡೋದಕ್ಕೆ ಪರ್ಮಿಷನ್ ಕೊಡ್ಲಿ, ನಾನೇ ನನ್ನ ಕಿಡ್ನಿ ಮಾರಿ  ಅಪ್ಪ ಅಮ್ಮನ ಸಾಲ ತೀರಿಸಿ ಹೆಂಗೋ ಬದುಕೊಂಡು ಹೋಗ್ತೀವಿ ಎಂದು ಅಳಲು ತೋಡಿಕೊಂಡಿದ್ದಾನೆ. ಹಾಗದರೆ, ಇವರ ಟಾರ್ಚರ್ ಯಾವ ರೀತಿ ಇದೆ ಅಂತ ನೀವೇ ಸುಲಭವಾಗಿ ಊಹಿಸಬಹುದು.

ಕೆಲವು ಮೈಕ್ರೋಫೈನಾನ್ಸ್ ಕಂಪನಿಗಳು ಬಡ ಜನರ ರಕ್ತ ಹೀರುತ್ತಿವೆ. ಯಾವುದೇ ಭದ್ರತೆ ಇಲ್ಲದೆ ಕೇವಲ ಒಂದು ಆಧಾರ್ ಕಾರ್ಡ್ ಜೆರಾಕ್ಸ್ ಪಡೆದು  ಸುಲಭವಾಗಿ ಸಾಲ ನೀಡುತ್ತಿವೆ. ಸುಲಭವಾಗಿ ಸಾಲ ಸಿಗುತ್ತೆ ಎಂಬ ಕಾರಣಕ್ಕೆ ಕೂಲಿ ಕಾರ್ಮಿಕರು, ಮಹಿಳೆಯರು ತಮ್ಮ  ಇವರ ಸಾಲದ ಜಾಲಕ್ಕೆ  ಬಿದ್ದು ದೈನಂದಿನ ವ್ಯವಹಾರಗಳಿಗೆ ಸಾಲ ಪಡೆಯುತ್ತಿದ್ದಾರೆ. ಬಡ್ಡಿಯೊಂದಿಗೆ  ವಾರದ ಕಂತು ತಿಂಗಳ ಕಂತು ಹೀಗೆ ಸಾಲ ತೀರಿಸುತ್ತಾರೆ.

ಆದರೆ,  ಸಾಲ ಮರುಪಾವತಿ ಮಾಡುವುದು ಒಂದು ದಿನ ತಡವಾದರೂ ಹೊತ್ತಲ್ಲದ ಹೊತ್ತಿನಲ್ಲಿ ಕಿರುಕುಳ ನೀಡುತ್ತಿದ್ದಾರೆ. ಬಡ್ಡಿಗೆ ಬಡ್ಡಿ ಸೇರಿಸಿ ಸಾಲ ಜಾಸ್ತಿಯಾಗಿ ಇವರ ಕಿರುಕುಳ ತಡೆಯಲಾರದೆ ಚಾಮರಾಜನಗರ ಜಿಲ್ಲೆಯ ಹಲವು ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿವೆ. ಸಾಲ ತೀರಿಸಲಾಗದೆ ಮನೆಗೆ ಬೀಗ ಹಾಕಿ ಊರು ಖಾಲಿ ತಲೆಮರೆಸಿಕೊಂಡಿವೆ ಹಲವೆಡೆ ಮಕ್ಕಳನ್ನು ಶಾಲೆ ಬಿಡಿಸಿ ತಮ್ಮ ಜೊತೆ ಕರೆದೊಯ್ದಿವೆ ಸಾಲದ ಹೊಡೆತಕ್ಕೆ ಮಕ್ಕಳ ವಿದ್ಯಾಭ್ಯಾಸವೇ ಮೊಟಕಾಗುತ್ತಿದೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!