ಮೈಸೂರಲ್ಲಿ ಎಂಪಿಗಳಿಗೊಂದು ಕಾನೂನು, ಸಾಮಾನ್ಯರಿಗೆ ಮತ್ತೊಂದು ಕಾನೂನಾ..?

ಮೈಸೂರಲ್ಲಿ ಎಂಪಿಗಳಿಗೊಂದು ಕಾನೂನು, ಸಾಮಾನ್ಯರಿಗೆ ಮತ್ತೊಂದು ಕಾನೂನಾ..?

Suvarna News   | Asianet News
Published : Jul 17, 2020, 01:58 PM IST

ಚಾಮುಂಡೇಶ್ವರಿ ಭಕ್ತರು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕಾರಣ ಕೊರೋನಾದಿಂದಾಗಿ ಚಾಮುಂಡಿ ಬೆಟ್ಟಕ್ಕೆ ಜನ ಸಾಮಾನ್ಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇಂತಹ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟ ಏರಿದ್ದಾರೆ.

ಮೈಸೂರು(ಜು.17): ಚಾಮುಂಡಿ ಬೆಟ್ಟ ಏರುವ ವಿಚಾರದಲ್ಲಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಸಂಸದರಿಗೊಂದು ಕಾನೂನು, ಜನ ಸಾಮಾನ್ಯರಿಗೊಂದು ಕಾನೂನಾ? ಎನ್ನುವ ಪ್ರಶ್ನೆ ಎದ್ದಿದೆ. 

ಇದೀಗ ಚಾಮುಂಡೇಶ್ವರಿ ಭಕ್ತರು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕಾರಣ ಕೊರೋನಾದಿಂದಾಗಿ ಚಾಮುಂಡಿ ಬೆಟ್ಟಕ್ಕೆ ಜನ ಸಾಮಾನ್ಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇಂತಹ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟ ಏರಿದ್ದಾರೆ.

ನಮಗೆ ಅವಕಾಶ ನೀಡಿಲ್ಲ, ಹೀಗಿರುವಾಗ ಶೋಭಾ ಕರಂದ್ಲಾಜೆ ಅವರಿಗೆ ಹೇಗೆ ಚಾಮುಂಡಿ ಬೆಟ್ಟ ಪ್ರವೇಶಿಸಲು ಅವಕಾಶ ನೀಡಿದ್ರಿ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವಾರ ಸಂಸದ ಪ್ರತಾಪ್ ಸಿಂಹ ಕೂಡಾ ಚಾಮುಂಡಿ ಬೆಟ್ಟಕ್ಕೆ ಎಂಟ್ರಿ ಕೊಟ್ಟಿದ್ದರು. ನಮಗ್ಯಾಕೆ ಈ ತಾರತಮ್ಯ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!