ಹಿಂದಿನ ದಿನ ಕೊಲೆ ಪ್ರಕರಣ ಭೇದಿಸಿದ PSI ಮನೆಯಲ್ಲಿ ಆತ್ಮಹತ್ಯೆ

Jul 31, 2020, 1:40 PM IST

ಹಾಸನ(ಜು.31): ಚನ್ನರಾಯಪಟ್ಟಣ ನಗರ ಠಾಣೆಯ ಪಿಎಸ್ಐ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಪಿಎಸ್ಐ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಿಎಸ್ಐ ಕಿರಣ್ ಗುರುವಾರವಷ್ಟೇ ಕೊಲೆ ಪ್ರಕರಣವನ್ನು ಭೇದಿಸಿದ್ದರು. ಮಧ್ಯ ರಾತ್ರಿ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಿದ್ದರು. ಕಾನೂನು ಪ್ರಕ್ರಿಯೆ ಮುಗಿಸಿ ಬೆಳಗ್ಗೆ ಮನೆಗೆ ಬಂದಿದ್ದರು.

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ: ಬಿಎಸ್‌ವೈ ಸರ್ಕಾರದ ವಿರುದ್ಧ ಹೆಚ್‌ಡಿಕೆ ಗರಂ

ಮನೆಗೆ ಬಂದ ಮೇಲೆ ಪಿಎಸ್‌ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿರಂತರವಾಗಿ ನಿನ್ನೆ ಹಾಗೂ ಮೊನ್ನೆ ನಡೆದ ಕೊಲೆ ಪ್ರಕರಣವನ್ನೂ ಇವರು ಭೇದಿಸಿದ್ದರು. ಪಿಎಸ್‌ಐ ಆತ್ಮಹತ್ಯೆ ಪ್ರಕರಣ ಹಲವು ಸಂಶಯಗಳಿಗೆ ದಾರಿ ಮಾಡಿಕೊಟ್ಟಿದೆ.

ರಾತ್ರಿ ಎಣ್ಣೆ ಪಾರ್ಟಿ: ಸಿಟ್ಟಿಗೆದ್ದು ಸ್ನೇಹಿತನನ್ನೇ ಕೊಂದ

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]