ವಕ್ಫ್ ಆದಾಯದಲ್ಲಿ ಕೋಟಿ ಕೋಟಿ ಗೋಲ್‌ಮಾಲ್ ? ಸುಲ್ತಾನಿ, ಮದೀನಾ ಮಸೀದಿಗೆ ಮಹಾ ಮೋಸ..?

ವಕ್ಫ್ ಆದಾಯದಲ್ಲಿ ಕೋಟಿ ಕೋಟಿ ಗೋಲ್‌ಮಾಲ್ ? ಸುಲ್ತಾನಿ, ಮದೀನಾ ಮಸೀದಿಗೆ ಮಹಾ ಮೋಸ..?

Published : Aug 17, 2023, 11:12 AM IST

ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಇರುವ ವಕ್ಫ್ ಬೋರ್ಡ್‌ನಲೇ ಮೋಸದಾಟ ಶುರುವಾಗಿದೆ. ಬಡ ಮುಸ್ಲಿಮರ ಏಳಿಗೆಗಾಗಿ ಬಳಸಬೇಕಾದ ಆದಾಯದಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ. 

ವಕ್ಫ್ ಬೊರ್ಡ್ ಅಂದ್ರೆನೇ ಚಿನ್ನದ ಮೊಟ್ಟೆ. ದೇಶದಲ್ಲಿ ಅತೀ ಹೆಚ್ಚು ಆದಾಯಗಳಿಕೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಮುಸ್ಲಿಂ ಸಮುದಾಯದ ಅಭಿವೃದ್ಧಿಯೇ ವಕ್ಫ್ ಮೂಲ ಉದ್ದೇಶವಾಗಿದೆ. ಆದ್ರೆ, ಉತ್ತರಕನ್ನಡ ಜಿಲ್ಲೆಯ ಶಿರಸಿ ವಕ್ಫ್ ಬೋರ್ಡ್‌ ಮಾತ್ರ ಇದಕ್ಕೆ ತದ್ವಿರುದ್ಧವಾಗಿದೆ. ಮಸೀದಿ ಆಸ್ತಿ ಹಾಗೂ ಆದಾಯದಲ್ಲೇ ಭಾರೀ ಗೋಲ್‌ಮಾಲ್ ಮಾಡಿರುವ ಆರೋಪ ಕೇಳಿಬಂದಿದೆ. ವಕ್ಫ್‌ ಬೋರ್ಡ್‌ನಡಿ (waqf borad)ಸುಮಾರು 11 ಎಕರೆಗಿಂತಲೂ ಹೆಚ್ಚು ಜಾಗ ಸೇರಿ ಸುಮಾರು 250ಕೋಟಿ ರೂ. ಮೌಲ್ಯದ ಆಸ್ತಿಯಿದೆ. ಇದರಲ್ಲಿ 64 ಅಂಗಡಿಗಳು, 26 ಮನೆಗಳು ಹಾಗೂ ಮೂರು ಖಾಲಿ ಜಾಗಗಳು ಈ ಬೋರ್ಡ್‌ಗೆ ಸೇರಿಕೊಂಡಿದೆ. ಇದೇ ವಕ್ಫ್‌ನಡಿ ಶಿರಸಿ(shirasi) ಪಟ್ಟಣದ ಸುಲ್ತಾನಿ ಮತ್ತು ಮದೀನಾ ಮಸೀದಿ(Medina Mosque) ಕೂಡಾ ಸೇರಿದೆ. ಆದ್ರೆ, ಈ ಮಸೀದಿಗೆ ದೊರೆಯಬೇಕಾಗಿದ್ದ ಆದಾಯದಲ್ಲೇ ಗೋಲ್‌ಮಾಲ್ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಶಿರಸಿಯಲ್ಲಿ ವಕ್ಫ್ ಆಸ್ತಿ ಮೇಲೆ ಮರ್ಕಝ್ ಎಂಬ ಸ್ವಯಂ ಘೋಷಿತ ಸಮಿತಿ ಅಧಿಕಾರ  ಚಲಾಯಿಸ್ತಿದೆ. ವಕ್ಫ್ ಜಾಗದಲ್ಲಿ ಅಂಗಡಿ, ಹೋಟೆಲ್‌ಗಳನ್ನು  ಕೇವಲ 40ರಿಂದ 500 ರೂಪಾಯಿವರೆಗೆ ಬಾಡಿಗೆಗೆ ನೀಡಿದ್ದಾರೆ. ಹೀಗೆ ಕಡಿಮೆ ಬಾಡಿಗೆಗೆ ಪಡೆದ ಕೆಲ ಅಂಗಡಿ ಮಾಲೀಕರು 35,000 ದಿಂದ 40,000ರೂಪಾಯಿವರೆಗೆ ಸಬ್ ಲೀಸ್‌ಗೆ ನೀಡಿ ಬಾಡಿಗೆ ಪಡೆದು ಭರ್ಜರಿ ಜೇಬು ತುಂಬಿಸಿಕೊಳ್ಳುತ್ತಿದ್ದಾರಂತೆ.  ವಕ್ಫ್ ಬೋರ್ಡ್ ಚೇರ್‌ಮ್ಯಾನ್ ಹಾಗೂ ಸದಸ್ಯರೆ ಈ ಮಹಾ ಮೋಸದ ಜಾಲದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಳೆ ಕೊರತೆ ಮಧ್ಯೆ ತಮಿಳುನಾಡಿಗೆ ನೀರು ರಿಲೀಸ್: ಸಿಟ್ಟಿಗೆದ್ದ ಕಾವೇರಿ ಕೊಳ್ಳದ ರೈತರಿಂದ ನೀರಿಗಿಳಿದು ಪ್ರೊಟೆಸ್ಟ್..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?