ಅನ್ನದಾತರಿಗೆ ಕಂಟಕವಾಗಿವೆ ಕೆಮಿಕಲ್ ಫ್ಯಾಕ್ಟರಿ! ಕೆಮಿಕಲ್ ತ್ಯಾಜ್ಯದಿಂದ ರೈತರ ಬದುಕೇ ಬರ್ಬಾದ್

ಅನ್ನದಾತರಿಗೆ ಕಂಟಕವಾಗಿವೆ ಕೆಮಿಕಲ್ ಫ್ಯಾಕ್ಟರಿ! ಕೆಮಿಕಲ್ ತ್ಯಾಜ್ಯದಿಂದ ರೈತರ ಬದುಕೇ ಬರ್ಬಾದ್

Published : Sep 14, 2023, 10:04 AM IST

ಆ ಫ್ಯಾಕ್ಟರಿಯಲ್ಲಿ ನಿತ್ಯ ಲಕ್ಷಾಂತರ ರೂಪಾಯಿ ಕೆಮಿಕಲ್ ಉತ್ಪಾದನೆ ಮಾಡುತ್ತಾರೆ. ರಾಯಚೂರಿನಲ್ಲಿ ಉತ್ಪಾದನೆ ಆಗುವ ಕೆಮಿಕಲ್ ದೇಶ-ವಿದೇಶಗಳಿಗೆ ಸರಭರಾಜು ಆಗುತ್ತೆ. ಆದ್ರೆ ಕೆಮಿಕಲ್ ಉತ್ಪಾದನೆ ಆಗುವ ವೇಳೆ ಸಂಗ್ರಹಣೆ ಆಗುವ ವೆಸ್ಟ್ ನೀರು ಈಗ ಬಡ ರೈತರ ಜಮೀನು ಸೇರುತ್ತಿದೆ. 
 

ಹೊಲ ಗದ್ದೆಗಳಲ್ಲಿ ಕೆಮಿಕಲ್ ನೀರು. ವಿಷ ಜಲ (poisonous water) ಸೇವಿಸಿ ಜೀವ ಬಿಟ್ಟ ಕುರಿಗಳು. ಕೆಮಿಕಲ್ ಪವರ್‌ಗೆ ಒಣಗಿ ನಿಂತ ಬೆಳೆ. ಆತಂಕದಲ್ಲಿ ಬದುಕುತ್ತಿರುವ ರೈತ ಕುಟುಂಬ. ಇದು ರಾಯಚೂರು(Raichur) ತಾಲೂಕಿನ ಬಹುತೇಕ ಗ್ರಾಮಗಳ ಪರಿಸ್ಥಿತಿ. ರಾಯಚೂರು ಹೊರವಲಯದ ವಡ್ಡೂರು ಗ್ರಾಮದ ಬಳಿ 30ಕ್ಕೂ ಹೆಚ್ಚು ಕೆಮಿಕಲ್ ಫ್ಯಾಕ್ಟರಿಗಳಿವೆ(Chemical factory). ನಿಯಮದ ಪ್ರಕಾರ, ಕಂಪನಿಗಳು ಕೆಮಿಕಲ್ ವೆಸ್ಟ್ ತ್ಯಾಜ್ಯವನ್ನು ಸಂಸ್ಕರಿಸಿ ಜನವಸತಿ ಪ್ರದೇಶದಿಂದ ದೂರದಲ್ಲಿ ವಿಲೇವಾರಿ ಮಾಡ್ಬೇಕು. ಆದ್ರಿಲ್ಲಿ ಟೆಂಡರ್ ಪಡೆದ ಗುತ್ತಿಗೆದಾರರು ಮನಬಂದಂತೆ ಕೆಮಿಕಲ್ ವೆಸ್ಟ್ ಡಂಪ್ ಮಾಡುತ್ತಿದ್ದಾರೆ. ರಾತ್ರೋ ರಾತ್ರಿ ರೈತರ(Farmer) ಜಮೀನು, ಪಾಳು ಬಿದ್ದ ಬಾವಿ ಹೀಗೆ ಸಿಕ್ಕ ಸಿಕ್ಕಲ್ಲಿ ಕಳ್ಳರಂತೆ ಬಂದು ವೇಸ್ಏಜ್ ಸುರಿಯುತ್ತಿದ್ದಾರೆ. ಏಗನೂರು ಗ್ರಾಮದಲ್ಲಿ ದೇವರಾಜ್ ಎಂಬುವರ ಜಮೀನಿನ ಬಳಿ ರಾತ್ರಿ ವೇಳೆ ಕೆಮಿಕಲ್ ಮಿಶ್ರಿತ ವಿಷಕಾರಿ ನೀರು ಸುರಿದು ಹೋಗಿದ್ದಾರೆ. ಈ ನೀರು ಸೇವಿಸಿದ ಕುರಿಗಳು ಸಾವಿಗೀಡಾಗಿವೆ. ಎಷ್ಟು ಡೇಂಜರ್ ಅಂದ್ರೆ ಒಂದು ಹಾವು ಕೂಡ ಸತ್ತುಬಿದ್ದಿದೆ. ವಿಷ ಜಂತುಗಳೇ ಕೆಮಿಕಲ್ ನೀರಿಗೆ ಬದುಕುಳಿಯುತ್ತಿಲ್ಲ. ಇನ್ನು ರೈತರ ಬೆಳೆಗಳು ಹೇಗೆ ಉಳಿಯೋಕೆ ಸಾಧ್ಯ. ತೊಗರಿ ಬೆಳೆ ಸಹ ಒಣಗಿ ನಿಂತಿವೆ. ರಾಯಚೂರು ಸುತ್ತಾಮುತ್ತಲಿನ ಹತ್ತಾರು ಹಳ್ಳಿಗಳಲ್ಲೂ ಇದೇ ಪರಿಸ್ಥಿತಿಯಿದೆ. ದೂರು ನೀಡಿದಾಗ ಹೆಸರಿಗೆ ಮಾತ್ರ ಪರಿಸರ ಇಲಾಖೆಯ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿ ಸ್ಯಾಂಪಲ್ ಸಂಗ್ರಹಿಸಿಕೊಂಡು ಹೋಗ್ತಿದ್ದಾರೆ. ಕೆಮಿಕಲ್ ಫ್ಯಾಕ್ಟರಿಗಳ ವಿರುದ್ಧ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದು ರೈತರು ಆಕ್ರೋಶ ಹೊರಹಾಕಿದ್ರು. ಕೆಮಿಕಲ್ ಕಂಪನಿಗಳ ಈ ಕಳ್ಳಾಟ  ನಡೆಯುತ್ತಲೇ ಇದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನಿಯಮ ಉಲ್ಲಂಘಿಸಿದ ಕಂಪನಿಗಳ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ, ಕಂಪನಿಗೆ ಬೀಗ ಜಡಿಯಬೇಕಾಗಿದೆ.

ಇದನ್ನೂ ವೀಕ್ಷಿಸಿ:  ಡ್ರಗ್ ಸ್ಮಗ್ಲಿಂಗ್ ಕಥೆಗೆ ಮಾಲೆಯಾಳಂ ಬ್ಯೂಟಿ ನಾಯಕಿ! ಡಿಸೆಂಬರ್‌ನಿಂದ ಶುರುವಾಗುತ್ತಾ ಯಶ್19 ಶೂಟಿಂಗ್ ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more