ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

Published : Aug 02, 2023, 10:47 AM IST

ಟೊಮ್ಯಾಟೋಗೆ ಒಳ್ಳೆ ಬೆಲೆ ಇದೆ. ಅದೃಷ್ ಇದ್ದವರು ಬಂಪರ್ ಲಾಭ ಪಡೀತಿದ್ದಾರೆ. ಆದ್ರೆ, ಕೆಲವರ ದುರಾದೃಷ್ಟಕ್ಕೆ ಮಳೆ ಬಂದು ಬಂಗಾರದ ಬೆಳೆ ಕೊಚ್ಚಿಕೊಂಡು ಹೋಗ್ತಿದೆ.

ಮಾರ್ಕೆಟ್‌ನಲ್ಲಿ ಟೊಮ್ಯಾಟೋಗೆ (tomato) ಬಂಗಾರದ ಬೆಲೆ ಬಂದಿದೆ. ಟೊಮ್ಯಾಟೋ ಬೆಳೆದ ರೈತರು (Farmer) ಕೊಟ್ಯಾಧೀಶರಾಗುತ್ತಿದ್ದಾರೆ. ‌ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಟೊಮ್ಯಾಟೋ ಬೆಳೆದ ರೈತರಿಗೆ ಶುಕ್ರದಸೆ ಆರಂಭವಾಗಿದೆ. ಚಿಕ್ಕಮಗಳೂರಿನ(Chikkamagalur) ರೈತ ಕುಮಾರ್ 3 ಲಕ್ಷ ಬಂಡಾವಳ ಹಾಕಿ ಬರೋಬ್ಬರಿ 30 ಲಕ್ಷಗಳಿಸಿದ್ದಾನೆ. ಸದ್ಯ ಮಾರ್ಕೆಟ್‌ನಲ್ಲಿ ಟೊಮ್ಯಾಟೋ ಕೆಜಿಗೆ 160 ರಿಂದ 180 ರೂಪಾಯಿ  ರೇಟ್ ನಡಿಯುತ್ತಿದೆ. ಈಗ ಚಿಕ್ಕಮಗಳೂರಿನ ಟೊಮ್ಯಾಟೊ ಹೊರ ರಾಜ್ಯಗಳಿಗೆ ಸರಬರಾಜು ಆಗುತ್ತಿದೆ. ದೆಹಲಿ, ರಾಜಸ್ಥಾನ, ಗುಜರಾತ್ , ಪಶ್ಚಿಮ ಬಂಗಾಳದಲ್ಲಿ ಫುಲ್ ಡಿಮ್ಯಾಂಡ್ ಬರುತ್ತಿದೆ. ಕಳೆದ 20 ವರ್ಷಗಳಿಂದ ಟೊಮ್ಯಾಟೋ ಬೆಳೆದು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದ ರೈತರಿಗೆ ಈಗ ಬಂಪರ್ ಬೆಲೆ ಸಿಕ್ಕಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ 25 ಕೆಜೆ ಬಾಕ್ಸ್ ಟೊಮ್ಯಾಟೋ 2500 ರಿಂದ 4600 ಬಿಕರಿಯಾಗಿದೆ. ಒಂದೆಡೆ ಟೊಮ್ಯಾಟೊಗೆ ಭರ್ಜರಿ ರೇಟು ಸಿಕ್ಕ ಖೂಷಿಯಲ್ಲಿದ್ದರೆ. ಮತ್ತೆ ಕೆಲವೆಡೆ ರೈತರು ಮಳೆಯಿಂದ ಬೆಳೆ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಹಾವೇರಿ (Haveri)ತಾಲೂಕಿನ ದೇವಗಿರಿ ಗ್ರಾಮದ ದುರಗಪ್ಪ 2 ಲಕ್ಷ ಖರ್ಚು ಮಾಡಿ , ನಾಲ್ಕು ಎಕರೆ ಜಮಿನಿನಲ್ಲಿ ಟೊಮ್ಯಾಟೋ ಬೆಳೆದಿದ್ದ. ಇನ್ನೇನು ಟೊಮ್ಯಾಟೋ  ಕೀಳಬೇಕು ಎನ್ನುವಷ್ಟರಲ್ಲಿ ಮಳೆ ಅಬ್ಬರಿಸಿದ್ದು, ಸಂಪೂರ್ಣ ಬೆಳೆ ಹಾನಿಯಾಗಿದೆ.

ಇದನ್ನೂ ವೀಕ್ಷಿಸಿ:  ಮತ್ತೊಂದು ಬಾಂಬ್ ಸಿಡಿಸಿದ ಕಂಗನಾ: ಶಾಕಿಂಗ್ ಹೇಳಿಕೆ ಕೊಟ್ಟ ನಟಿ ಪೋಸ್ಟ್ ವೈರಲ್..!

15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
Read more