ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

Published : Aug 02, 2023, 10:47 AM IST

ಟೊಮ್ಯಾಟೋಗೆ ಒಳ್ಳೆ ಬೆಲೆ ಇದೆ. ಅದೃಷ್ ಇದ್ದವರು ಬಂಪರ್ ಲಾಭ ಪಡೀತಿದ್ದಾರೆ. ಆದ್ರೆ, ಕೆಲವರ ದುರಾದೃಷ್ಟಕ್ಕೆ ಮಳೆ ಬಂದು ಬಂಗಾರದ ಬೆಳೆ ಕೊಚ್ಚಿಕೊಂಡು ಹೋಗ್ತಿದೆ.

ಮಾರ್ಕೆಟ್‌ನಲ್ಲಿ ಟೊಮ್ಯಾಟೋಗೆ (tomato) ಬಂಗಾರದ ಬೆಲೆ ಬಂದಿದೆ. ಟೊಮ್ಯಾಟೋ ಬೆಳೆದ ರೈತರು (Farmer) ಕೊಟ್ಯಾಧೀಶರಾಗುತ್ತಿದ್ದಾರೆ. ‌ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಟೊಮ್ಯಾಟೋ ಬೆಳೆದ ರೈತರಿಗೆ ಶುಕ್ರದಸೆ ಆರಂಭವಾಗಿದೆ. ಚಿಕ್ಕಮಗಳೂರಿನ(Chikkamagalur) ರೈತ ಕುಮಾರ್ 3 ಲಕ್ಷ ಬಂಡಾವಳ ಹಾಕಿ ಬರೋಬ್ಬರಿ 30 ಲಕ್ಷಗಳಿಸಿದ್ದಾನೆ. ಸದ್ಯ ಮಾರ್ಕೆಟ್‌ನಲ್ಲಿ ಟೊಮ್ಯಾಟೋ ಕೆಜಿಗೆ 160 ರಿಂದ 180 ರೂಪಾಯಿ  ರೇಟ್ ನಡಿಯುತ್ತಿದೆ. ಈಗ ಚಿಕ್ಕಮಗಳೂರಿನ ಟೊಮ್ಯಾಟೊ ಹೊರ ರಾಜ್ಯಗಳಿಗೆ ಸರಬರಾಜು ಆಗುತ್ತಿದೆ. ದೆಹಲಿ, ರಾಜಸ್ಥಾನ, ಗುಜರಾತ್ , ಪಶ್ಚಿಮ ಬಂಗಾಳದಲ್ಲಿ ಫುಲ್ ಡಿಮ್ಯಾಂಡ್ ಬರುತ್ತಿದೆ. ಕಳೆದ 20 ವರ್ಷಗಳಿಂದ ಟೊಮ್ಯಾಟೋ ಬೆಳೆದು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದ ರೈತರಿಗೆ ಈಗ ಬಂಪರ್ ಬೆಲೆ ಸಿಕ್ಕಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ 25 ಕೆಜೆ ಬಾಕ್ಸ್ ಟೊಮ್ಯಾಟೋ 2500 ರಿಂದ 4600 ಬಿಕರಿಯಾಗಿದೆ. ಒಂದೆಡೆ ಟೊಮ್ಯಾಟೊಗೆ ಭರ್ಜರಿ ರೇಟು ಸಿಕ್ಕ ಖೂಷಿಯಲ್ಲಿದ್ದರೆ. ಮತ್ತೆ ಕೆಲವೆಡೆ ರೈತರು ಮಳೆಯಿಂದ ಬೆಳೆ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಹಾವೇರಿ (Haveri)ತಾಲೂಕಿನ ದೇವಗಿರಿ ಗ್ರಾಮದ ದುರಗಪ್ಪ 2 ಲಕ್ಷ ಖರ್ಚು ಮಾಡಿ , ನಾಲ್ಕು ಎಕರೆ ಜಮಿನಿನಲ್ಲಿ ಟೊಮ್ಯಾಟೋ ಬೆಳೆದಿದ್ದ. ಇನ್ನೇನು ಟೊಮ್ಯಾಟೋ  ಕೀಳಬೇಕು ಎನ್ನುವಷ್ಟರಲ್ಲಿ ಮಳೆ ಅಬ್ಬರಿಸಿದ್ದು, ಸಂಪೂರ್ಣ ಬೆಳೆ ಹಾನಿಯಾಗಿದೆ.

ಇದನ್ನೂ ವೀಕ್ಷಿಸಿ:  ಮತ್ತೊಂದು ಬಾಂಬ್ ಸಿಡಿಸಿದ ಕಂಗನಾ: ಶಾಕಿಂಗ್ ಹೇಳಿಕೆ ಕೊಟ್ಟ ನಟಿ ಪೋಸ್ಟ್ ವೈರಲ್..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more