Chikkamagalur Tourism: ಎತ್ತಿನ ಭುಜಕ್ಕೆ ಹೋಗುವ ಪ್ರವಾಸಿರಿಗೆ ಶಾಕ್..!

Chikkamagalur Tourism: ಎತ್ತಿನ ಭುಜಕ್ಕೆ ಹೋಗುವ ಪ್ರವಾಸಿರಿಗೆ ಶಾಕ್..!

Published : Dec 04, 2021, 01:21 PM ISTUpdated : Dec 04, 2021, 01:45 PM IST

ಈ ಭೂಲೋಕದ ಸ್ವರ್ಗದಂತಿರುವ ಎತ್ತಿನಭುಜದ ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಏಕಾಏಕಿ ಶಾಕ್ ನೀಡಿದೆ. ತಾತ್ಕಲಿಕವಾಗಿ ಪ್ರವಾಸಿಗರಿಗೆ ಪುಲ್ ಬ್ರೇಕ್ ಹಾಕಿದೆ.

ಚಿಕ್ಕಮಗಳೂರು (ಡಿ. 04):  ಈ ಭೂಲೋಕದ ಸ್ವರ್ಗದಂತಿರುವ ಎತ್ತಿನಭುಜದ (Yettinabhuja) ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ (Tourists)  ಅರಣ್ಯ ಇಲಾಖೆ ಏಕಾಏಕಿ ಶಾಕ್ ನೀಡಿದೆ. ತಾತ್ಕಲಿಕವಾಗಿ ಪ್ರವಾಸಿಗರಿಗೆ ಪುಲ್ ಬ್ರೇಕ್ ಹಾಕಿದೆ. ಬೆಂಗಳೂರಿನ ಖಾಸಗಿ ಸಂಸ್ಥೆಯೊಂದು ಎತ್ತಿನಭುಜದ ಸಮೀಪ ಮ್ಯಾರಥಾನ್ (Marathon) ಆಯೋಜಿಸಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ವಿರೋಧಿಸಿದರು.  ಹೀಗಾಗಿಯೇ ಎತ್ತಿನಭುಜಕ್ಕೆ ಹೋಗುವ ಮಾರ್ಗವನ್ನು ಅರಣ್ಯ ಇಲಾಖೆ ಬಂದ್ ಮಾಡಿದೆ. ಇನ್ಮುಂದೆ ಹೊಸ ರೂಲ್ಸ್ ಮಾಡಿದ ಮೇಲೆಯೇ ಓಪನ್ ಅಂತಾ ಹೇಳಿದೆ. 

ಇನ್ನೂ ಖಾಸಗಿ ಸಂಸ್ಥೆಯವರು ನಡೆಸುವ ಮ್ಯಾರಥಾನ್ ಎತ್ತಿನಭುಜದ ಸೂಕ್ಷ್ಮ ಜಾಗದಲ್ಲೆಲ್ಲ ನೂರಾರು ಮಂದಿ ಹೋಗ್ತಾರೆ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ ಅನ್ನುವ ದೂರು ಅರಣ್ಯ ಇಲಾಖೆಗೆ ಹೋಗಿತ್ತು. ಇಲಾಖೆಯಿಂದ ಬ್ರೇಕ್ ಹಾಕಿದ್ರಿಂದ ಎತ್ತಿನಭುಜದ ಸುತ್ತಮುತ್ತಲಿನ ಅರಣ್ಯ ಪ್ರದೇಶವನ್ನು ಬಿಟ್ಟು ಬೇರೆಡೆ ಮ್ಯಾರಥಾನ್ ನಡೆಯಿತು.  ಇದ್ರ ನಡುವೆ ಅರಣ್ಯ ಇಲಾಖೆ ತಾತ್ಕಲಿಕವಾಗಿ ಶಿಶಿಲ ಬೈರಾಪುರದಲ್ಲಿ ಹೋಗುವ ಟ್ರಕ್ಕಿಂಗ್‌ಗೆ ಬ್ರೇಕ್ ಹಾಕಿದೆ. ಇದರಿಂದ ಪ್ರವಾಸಿಗರಿಗಂತೂ ಬೇಸರ ತರಿಸಿದೆ. ಶಾಶ್ವತವಾಗಿ ಪ್ರವಾಸಿಗರನ್ನು ನಿಷೇಧಿಸಿ ಆನೆ, ಮನುಷ್ಯನ ನಡುವೆ ನಡೆಯೋ ಸಂಘರ್ಷಕ್ಕೆ ಬ್ರೇಕ್ ಹಾಕಿ ಎಂದು ಪರಿಸರವಾದಿಗಳು ಮತ್ತೊಂದು ಅಗ್ರಹ ಮುಂದಿಟ್ಟಿದ್ದಾರೆ.  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more