Chikkamagalur Tourism: ಎತ್ತಿನ ಭುಜಕ್ಕೆ ಹೋಗುವ ಪ್ರವಾಸಿರಿಗೆ ಶಾಕ್..!

Chikkamagalur Tourism: ಎತ್ತಿನ ಭುಜಕ್ಕೆ ಹೋಗುವ ಪ್ರವಾಸಿರಿಗೆ ಶಾಕ್..!

Published : Dec 04, 2021, 01:21 PM ISTUpdated : Dec 04, 2021, 01:45 PM IST

ಈ ಭೂಲೋಕದ ಸ್ವರ್ಗದಂತಿರುವ ಎತ್ತಿನಭುಜದ ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಏಕಾಏಕಿ ಶಾಕ್ ನೀಡಿದೆ. ತಾತ್ಕಲಿಕವಾಗಿ ಪ್ರವಾಸಿಗರಿಗೆ ಪುಲ್ ಬ್ರೇಕ್ ಹಾಕಿದೆ.

ಚಿಕ್ಕಮಗಳೂರು (ಡಿ. 04):  ಈ ಭೂಲೋಕದ ಸ್ವರ್ಗದಂತಿರುವ ಎತ್ತಿನಭುಜದ (Yettinabhuja) ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ (Tourists)  ಅರಣ್ಯ ಇಲಾಖೆ ಏಕಾಏಕಿ ಶಾಕ್ ನೀಡಿದೆ. ತಾತ್ಕಲಿಕವಾಗಿ ಪ್ರವಾಸಿಗರಿಗೆ ಪುಲ್ ಬ್ರೇಕ್ ಹಾಕಿದೆ. ಬೆಂಗಳೂರಿನ ಖಾಸಗಿ ಸಂಸ್ಥೆಯೊಂದು ಎತ್ತಿನಭುಜದ ಸಮೀಪ ಮ್ಯಾರಥಾನ್ (Marathon) ಆಯೋಜಿಸಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ವಿರೋಧಿಸಿದರು.  ಹೀಗಾಗಿಯೇ ಎತ್ತಿನಭುಜಕ್ಕೆ ಹೋಗುವ ಮಾರ್ಗವನ್ನು ಅರಣ್ಯ ಇಲಾಖೆ ಬಂದ್ ಮಾಡಿದೆ. ಇನ್ಮುಂದೆ ಹೊಸ ರೂಲ್ಸ್ ಮಾಡಿದ ಮೇಲೆಯೇ ಓಪನ್ ಅಂತಾ ಹೇಳಿದೆ. 

ಇನ್ನೂ ಖಾಸಗಿ ಸಂಸ್ಥೆಯವರು ನಡೆಸುವ ಮ್ಯಾರಥಾನ್ ಎತ್ತಿನಭುಜದ ಸೂಕ್ಷ್ಮ ಜಾಗದಲ್ಲೆಲ್ಲ ನೂರಾರು ಮಂದಿ ಹೋಗ್ತಾರೆ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ ಅನ್ನುವ ದೂರು ಅರಣ್ಯ ಇಲಾಖೆಗೆ ಹೋಗಿತ್ತು. ಇಲಾಖೆಯಿಂದ ಬ್ರೇಕ್ ಹಾಕಿದ್ರಿಂದ ಎತ್ತಿನಭುಜದ ಸುತ್ತಮುತ್ತಲಿನ ಅರಣ್ಯ ಪ್ರದೇಶವನ್ನು ಬಿಟ್ಟು ಬೇರೆಡೆ ಮ್ಯಾರಥಾನ್ ನಡೆಯಿತು.  ಇದ್ರ ನಡುವೆ ಅರಣ್ಯ ಇಲಾಖೆ ತಾತ್ಕಲಿಕವಾಗಿ ಶಿಶಿಲ ಬೈರಾಪುರದಲ್ಲಿ ಹೋಗುವ ಟ್ರಕ್ಕಿಂಗ್‌ಗೆ ಬ್ರೇಕ್ ಹಾಕಿದೆ. ಇದರಿಂದ ಪ್ರವಾಸಿಗರಿಗಂತೂ ಬೇಸರ ತರಿಸಿದೆ. ಶಾಶ್ವತವಾಗಿ ಪ್ರವಾಸಿಗರನ್ನು ನಿಷೇಧಿಸಿ ಆನೆ, ಮನುಷ್ಯನ ನಡುವೆ ನಡೆಯೋ ಸಂಘರ್ಷಕ್ಕೆ ಬ್ರೇಕ್ ಹಾಕಿ ಎಂದು ಪರಿಸರವಾದಿಗಳು ಮತ್ತೊಂದು ಅಗ್ರಹ ಮುಂದಿಟ್ಟಿದ್ದಾರೆ.  

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more