Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!

Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!

Suvarna News   | Asianet News
Published : Nov 15, 2021, 04:16 PM IST

ಮಳೆಗಾಲ ಮುಗಿದು, ಚಳಿಗಾಲ ಆರಂಭವಾಗಿದೆ. ಆದರೆ ಮಳೆರಾಯ ಮಾತ್ರ ಇನ್ನೂ ಸುರಿಯುತ್ತಲೇ ಇದ್ದಾನೆ. ಅಕಾಲಿಕ ಮಳೆಯಿಂದ ರೈತಾಪಿ ವರ್ಗ ಕಂಗಾಲಾಗಿದೆ. ಮಲೆನಾಡಿಗರು ಕೊಯ್ದಿರೋ ಕಾಫಿ ಒಣಗಿಸಲು ಆಗದೇ, ಅಡಿಕೆ ಕೊಯ್ಲು ಮಾಡಲಾಗದೇ ಪರದಾಡುವಂತಾಗಿದೆ. 

ಬೆಂಗಳೂರು (ನ. 15): ಮಳೆಗಾಲ ಮುಗಿದು, ಚಳಿಗಾಲ ಆರಂಭವಾಗಿದೆ. ಆದರೆ ಮಳೆರಾಯ (Rain)  ಮಾತ್ರ ಇನ್ನೂ ಸುರಿಯುತ್ತಲೇ ಇದ್ದಾನೆ. ಅಕಾಲಿಕ ಮಳೆಯಿಂದ ರೈತಾಪಿ ವರ್ಗ ಕಂಗಾಲಾಗಿದೆ. ಮಲೆನಾಡಿಗರು ಕೊಯ್ದಿರೋ ಕಾಫಿ (Coffee) ಒಣಗಿಸಲು ಆಗದೇ, ಅಡಿಕೆ ಕೊಯ್ಲು (Areca Nut) ಮಾಡಲಾಗದೇ ಪರದಾಡುವಂತಾಗಿದೆ. ಮನೆಯಂಗಳದಲ್ಲಿ ಬೆಳೆದ ಬೆಳೆ ಕೊಳೆಯುತ್ತಿದೆ.

 

ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದಲ್ಲಿ ವೃದ್ಧ ಗಜೇಂದ್ರ ಹೆಬ್ಬಾರ್ ಪ್ರಕೃತಿಯಿಂದ ಅಸಹಾಯಕರಾಗಿ ಮನೆಯಲ್ಲಿ ಮಲಗುವ ಮಂಚದ ಮೇಲೆ ಅಡಿಕೆ ಒಣಗಿಸುತ್ತಿದ್ದಾರೆ. ಮಲೆನಾಡಲ್ಲಿ ಕಳೆದ ಒಂದೆರಡು ತಿಂಗಳಿಂದಲೂ ಒಂದೆರಡು ದಿನ ಬಿಡುವ ನೀಡುವ ವರುಣದೇವ ಮತ್ತೆ ಧಾರಾಕಾರವಾಗಿ ಸುರಿಯುತ್ತಿದ್ದಾನೆ. ಯಾವಾಗಂದರೆ ಆವಾಗ ಮಳೆ, ಬಿಸಿಲು, ಮೋಡದ ಪರಿಸ್ಥಿತಿ ನಿರ್ಮಾಣವಾಗಿದೆ. ಅಡಿಕೆ-ಕಾಫಿ ಮಲೆನಾಡಿಗರ ಜೀವ. ಸಣ್ಣ-ಸಣ್ಣ ಹಿಡುವಳಿ ಮೂಲಕ ಬದುಕು ಕಟ್ಟಿಕೊಂಡಿವರೇ ಹೆಚ್ಚು. ಸಿಕ್ಕ-ಸಿಕ್ಕ ದಾರಿಯಲ್ಲಿ ಬೆಳೆಗಳನ್ನ ಉಳಿಸಿಕೊಂಡು ವರ್ಷದ ಬದುಕು ದೂಡಲು ಮುಂದಾಗಿದ್ದಾರೆ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more