Chikkamagaluru: ಕಾಡಾನೆ ಹಾವಳಿ ತಡೆಯಲು ರೈತರ ಹೊಸ ಪ್ರಯೋಗ ಸಕ್ಸಸ್..!

Chikkamagaluru: ಕಾಡಾನೆ ಹಾವಳಿ ತಡೆಯಲು ರೈತರ ಹೊಸ ಪ್ರಯೋಗ ಸಕ್ಸಸ್..!

Published : Mar 04, 2022, 05:16 PM ISTUpdated : Mar 04, 2022, 05:48 PM IST

- ಕಾಡಾನೆ ದಾಳಿ ತಡೆಯಲು ಡಿಜೆ ಸೌಂಡ್ ಮೊರೆ ಹೋದ ಜನ

- ತೋಟ, ಗದ್ದೆಗಳಿಗೆ ಮೂವತ್ತಕ್ಕೂ ಹೆಚ್ಚು ಮೈಕ್‌ಗಳ ಅಳವಡಿಕೆ 

- ಮೈಕ್‌ನಲ್ಲಿ ಜನ್ರು ಮಾತನಾಡೋ, ಪ್ರಾಣಿಗಳ ಕೂಗಿನ ಸೌಂಡ್
 

ಚಿಕ್ಕಮಗಳೂರು (ಮಾ.04):  ಕಾಡಾನೆ ಹಾವಳಿಯಿಂದ ಕಾಫಿನಾಡಿಗರು ಕಂಗಾಲಾಗಿ, ಕಂಗೆಟ್ಟಿದ್ದರು. ಇವತ್ ಓಡ್ಸಿದ್ ಆನೆಗಳ ಹಿಂಡು ಒಂದೇ ವಾರ ಮತ್ತದೇ ಜಾಗದಲ್ಲಿ ಪ್ರತ್ಯಕ್ಷ. ಅತ್ತ ಅಧಿಕಾರಿಗಳು ರೈತರ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಇತ್ತ ಕಾಡಾನೆಗಳ ಹಾವಳಿಯೂ ಕಡಿಮೆಯಾಗ್ತಿಲ್ಲ. ರೈತರಿಗೆ ಪ್ರಕೃತಿಯಿಂದ ಬೆಳೆ ಉಳಿಸಿಕೊಳ್ಳುವುದಕ್ಕಿಂತ ಕಾಡಾನೆ, ಕಾಡುಪ್ರಾಣಿಗಳಿಂದ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿತ್ತು. ಅಧಿಕಾರಿಗಳಿಗೆ ಪತ್ರ ಮೇಲೆ ಪತ್ರ ಬರೆದ ರೈತರೇ ಇದೀಗ ಆನೆ ಹಾವಳಿಗೆ ಬ್ರೇಕ್ ಹಾಕೋದಕ್ಕೆ ಹೊಸ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಆನೆ ಹಾವಳಿಯೂ ತಕ್ಕಮಟ್ಟಿಗೆ ಕಡಿಮೆಯಾಗಿದೆ. 

 ಕಾಫಿನಾಡಲ್ಲಿ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಅಬ್ಬರ ಜೋರಿತ್ತು. ಹಲವು ವರ್ಷಗಳಿಂದ ಇದೆ. ಈಗಲೂ ಇದೆ. ಹಳ್ಳಿಗಳಲ್ಲಿ ರೈತರಂತೆ ಠಿಕಾಣಿ ಹೂಡಿವೆ. ಆನೆಯಿಂದ ನಾಲ್ಕೈದು ಜನ ಪ್ರಾಣ ಕೂಡ ಕಳೆದುಕೊಂಡಿದ್ದಾರೆ. ಈಗ ಚಿಕ್ಕಮಗಳೂರಿನ ಹಂಪಾಪುರ, ಬೀಕನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲೂ ಆನೆ ಹಾವಳಿ ಮಿತಿ ಮೀರ್ತಿದೆ. ವಾರಕ್ಕೆರಡು ಬಾರಿ ಫ್ಯಾಮಿಲಿ ಸಮೇತ ಬಂದೋಗೋದು ಫಿಕ್ಸ್ ಆಗಿದೆ. ಹಾಗಾಗಿ, ಗುಡ್ಡಗಳ ಪಕ್ಕದಲ್ಲಿರೋ ಜಮೀನುಗಳಲ್ಲಿ ಕಾಡಾನೆಗಳ ದಾಳಿಯಾಗದಂತೆ ರೈತರು ಡಿಜೆ ಸೌಂಡ್ ಮೊರೆ ಹೋಗಿದ್ದಾರೆ. ಸುತ್ತಮುತ್ತಲಿನ ಹೊಲ-ಗದ್ದೆ-ತೋಟಗಳಲ್ಲಿ ಮೂವತ್ತಕ್ಕೂ ಹೆಚ್ಚು ಮೈಕ್‌ಗಳನ್ನ ಹಾಕಿದ್ದಾರೆ. ಕೆಲವೆಡೆ ಸಂಜೆ 6 ಗಂಟೆಯಾಗುತ್ತಿದ್ದಂತೆ ಡಿಜೆ ಸೌಂಡ್ ಅನ್ ಆಗುತ್ತೆ. ಮೈಕಿನಲ್ಲಿ ಜನ ಮಾತನಾಡುವ ಹಾಗೆ, ಪ್ರಾಣಿಗಳು ಕೂಗುವ ಹಾಗೆ, ಪಟಾಕಿ ಸಿಡಿಯುವಂತೆ ನಿರಂತರ ಸೌಂಡ್ ಬರುತ್ತಿರುತ್ತೆ. ಶಬ್ಧಕ್ಕೆ ಹೆದರುವ ಕಾಡಾನೆಗಳು ಜಮೀನಿನತ್ತ ಬರಲ್ಲ ಅನ್ನೋದು ರೈತರೇ ಕಂಡುಕೊಂಡ ಮಾಸ್ಟರ್ ಪ್ಲಾನ್. 

ಒಟ್ಟಾರೆ, ಕಾಡಾನೆಗಳಿಂದ ನಲುಗಿ ಹೋಗಿರೋ ರೈತರು ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡರು ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆ ಈ ತಾತ್ಕಾಲಿಕ ಐಡಿಯಾಕೆ ಮೊರೆ ಹೋಗಿದ್ದಾರೆ. ಆದ್ರೆ, ಆನೆಗಳಿಗೂ ಬುದ್ಧಿ ಇರುತ್ತೆ. ಆನೆಗಳಿಗೆ ಈ ಮೈಕ್ ನಮ್ಮನ್ನ ಯಾಮಾರಿಸೋಕೆ ಹಾಕಿರೋದು ಎಂದು ಗೊತ್ತಾದರೆ ಮೊದ್ಲು ಕಿತ್ತಾಕೋದು ಮೈಕ್ಗಳನ್ನ. ಆಗ ಮತ್ತೆ ಆನೆ ಹಾವಳಿ ಹೆಚ್ಚಾಗೋದ್ರಲ್ಲಿ ನೋ ಡೌಟ್. ಹಾಗಾಗಿ, ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಕಾಡುಪ್ರಾಣಿಗಳು, ಆನೆಗಳಿಂದ ಜನರ ಜೀವ ಹಾಗೂ ಬೆಳೆ ಎರಡನ್ನೂ ಉಳಿಸೋದಕ್ಕೆ ಮುಂದಾಗಬೇಕೆಂಬುದು ಸ್ಥಳಿಯರ ಆಗ್ರಹವಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more