Chikkamagaluru: ಕಾಡಾನೆ ಹಾವಳಿ ತಡೆಯಲು ರೈತರ ಹೊಸ ಪ್ರಯೋಗ ಸಕ್ಸಸ್..!

Chikkamagaluru: ಕಾಡಾನೆ ಹಾವಳಿ ತಡೆಯಲು ರೈತರ ಹೊಸ ಪ್ರಯೋಗ ಸಕ್ಸಸ್..!

Published : Mar 04, 2022, 05:16 PM ISTUpdated : Mar 04, 2022, 05:48 PM IST

- ಕಾಡಾನೆ ದಾಳಿ ತಡೆಯಲು ಡಿಜೆ ಸೌಂಡ್ ಮೊರೆ ಹೋದ ಜನ

- ತೋಟ, ಗದ್ದೆಗಳಿಗೆ ಮೂವತ್ತಕ್ಕೂ ಹೆಚ್ಚು ಮೈಕ್‌ಗಳ ಅಳವಡಿಕೆ 

- ಮೈಕ್‌ನಲ್ಲಿ ಜನ್ರು ಮಾತನಾಡೋ, ಪ್ರಾಣಿಗಳ ಕೂಗಿನ ಸೌಂಡ್
 

ಚಿಕ್ಕಮಗಳೂರು (ಮಾ.04):  ಕಾಡಾನೆ ಹಾವಳಿಯಿಂದ ಕಾಫಿನಾಡಿಗರು ಕಂಗಾಲಾಗಿ, ಕಂಗೆಟ್ಟಿದ್ದರು. ಇವತ್ ಓಡ್ಸಿದ್ ಆನೆಗಳ ಹಿಂಡು ಒಂದೇ ವಾರ ಮತ್ತದೇ ಜಾಗದಲ್ಲಿ ಪ್ರತ್ಯಕ್ಷ. ಅತ್ತ ಅಧಿಕಾರಿಗಳು ರೈತರ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಇತ್ತ ಕಾಡಾನೆಗಳ ಹಾವಳಿಯೂ ಕಡಿಮೆಯಾಗ್ತಿಲ್ಲ. ರೈತರಿಗೆ ಪ್ರಕೃತಿಯಿಂದ ಬೆಳೆ ಉಳಿಸಿಕೊಳ್ಳುವುದಕ್ಕಿಂತ ಕಾಡಾನೆ, ಕಾಡುಪ್ರಾಣಿಗಳಿಂದ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿತ್ತು. ಅಧಿಕಾರಿಗಳಿಗೆ ಪತ್ರ ಮೇಲೆ ಪತ್ರ ಬರೆದ ರೈತರೇ ಇದೀಗ ಆನೆ ಹಾವಳಿಗೆ ಬ್ರೇಕ್ ಹಾಕೋದಕ್ಕೆ ಹೊಸ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಆನೆ ಹಾವಳಿಯೂ ತಕ್ಕಮಟ್ಟಿಗೆ ಕಡಿಮೆಯಾಗಿದೆ. 

 ಕಾಫಿನಾಡಲ್ಲಿ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಅಬ್ಬರ ಜೋರಿತ್ತು. ಹಲವು ವರ್ಷಗಳಿಂದ ಇದೆ. ಈಗಲೂ ಇದೆ. ಹಳ್ಳಿಗಳಲ್ಲಿ ರೈತರಂತೆ ಠಿಕಾಣಿ ಹೂಡಿವೆ. ಆನೆಯಿಂದ ನಾಲ್ಕೈದು ಜನ ಪ್ರಾಣ ಕೂಡ ಕಳೆದುಕೊಂಡಿದ್ದಾರೆ. ಈಗ ಚಿಕ್ಕಮಗಳೂರಿನ ಹಂಪಾಪುರ, ಬೀಕನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲೂ ಆನೆ ಹಾವಳಿ ಮಿತಿ ಮೀರ್ತಿದೆ. ವಾರಕ್ಕೆರಡು ಬಾರಿ ಫ್ಯಾಮಿಲಿ ಸಮೇತ ಬಂದೋಗೋದು ಫಿಕ್ಸ್ ಆಗಿದೆ. ಹಾಗಾಗಿ, ಗುಡ್ಡಗಳ ಪಕ್ಕದಲ್ಲಿರೋ ಜಮೀನುಗಳಲ್ಲಿ ಕಾಡಾನೆಗಳ ದಾಳಿಯಾಗದಂತೆ ರೈತರು ಡಿಜೆ ಸೌಂಡ್ ಮೊರೆ ಹೋಗಿದ್ದಾರೆ. ಸುತ್ತಮುತ್ತಲಿನ ಹೊಲ-ಗದ್ದೆ-ತೋಟಗಳಲ್ಲಿ ಮೂವತ್ತಕ್ಕೂ ಹೆಚ್ಚು ಮೈಕ್‌ಗಳನ್ನ ಹಾಕಿದ್ದಾರೆ. ಕೆಲವೆಡೆ ಸಂಜೆ 6 ಗಂಟೆಯಾಗುತ್ತಿದ್ದಂತೆ ಡಿಜೆ ಸೌಂಡ್ ಅನ್ ಆಗುತ್ತೆ. ಮೈಕಿನಲ್ಲಿ ಜನ ಮಾತನಾಡುವ ಹಾಗೆ, ಪ್ರಾಣಿಗಳು ಕೂಗುವ ಹಾಗೆ, ಪಟಾಕಿ ಸಿಡಿಯುವಂತೆ ನಿರಂತರ ಸೌಂಡ್ ಬರುತ್ತಿರುತ್ತೆ. ಶಬ್ಧಕ್ಕೆ ಹೆದರುವ ಕಾಡಾನೆಗಳು ಜಮೀನಿನತ್ತ ಬರಲ್ಲ ಅನ್ನೋದು ರೈತರೇ ಕಂಡುಕೊಂಡ ಮಾಸ್ಟರ್ ಪ್ಲಾನ್. 

ಒಟ್ಟಾರೆ, ಕಾಡಾನೆಗಳಿಂದ ನಲುಗಿ ಹೋಗಿರೋ ರೈತರು ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡರು ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆ ಈ ತಾತ್ಕಾಲಿಕ ಐಡಿಯಾಕೆ ಮೊರೆ ಹೋಗಿದ್ದಾರೆ. ಆದ್ರೆ, ಆನೆಗಳಿಗೂ ಬುದ್ಧಿ ಇರುತ್ತೆ. ಆನೆಗಳಿಗೆ ಈ ಮೈಕ್ ನಮ್ಮನ್ನ ಯಾಮಾರಿಸೋಕೆ ಹಾಕಿರೋದು ಎಂದು ಗೊತ್ತಾದರೆ ಮೊದ್ಲು ಕಿತ್ತಾಕೋದು ಮೈಕ್ಗಳನ್ನ. ಆಗ ಮತ್ತೆ ಆನೆ ಹಾವಳಿ ಹೆಚ್ಚಾಗೋದ್ರಲ್ಲಿ ನೋ ಡೌಟ್. ಹಾಗಾಗಿ, ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಕಾಡುಪ್ರಾಣಿಗಳು, ಆನೆಗಳಿಂದ ಜನರ ಜೀವ ಹಾಗೂ ಬೆಳೆ ಎರಡನ್ನೂ ಉಳಿಸೋದಕ್ಕೆ ಮುಂದಾಗಬೇಕೆಂಬುದು ಸ್ಥಳಿಯರ ಆಗ್ರಹವಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more