Chikkamagaluru: ಕಾಡಾನೆ ಹಾವಳಿ ತಡೆಯಲು ರೈತರ ಹೊಸ ಪ್ರಯೋಗ ಸಕ್ಸಸ್..!

Chikkamagaluru: ಕಾಡಾನೆ ಹಾವಳಿ ತಡೆಯಲು ರೈತರ ಹೊಸ ಪ್ರಯೋಗ ಸಕ್ಸಸ್..!

Published : Mar 04, 2022, 05:16 PM ISTUpdated : Mar 04, 2022, 05:48 PM IST

- ಕಾಡಾನೆ ದಾಳಿ ತಡೆಯಲು ಡಿಜೆ ಸೌಂಡ್ ಮೊರೆ ಹೋದ ಜನ

- ತೋಟ, ಗದ್ದೆಗಳಿಗೆ ಮೂವತ್ತಕ್ಕೂ ಹೆಚ್ಚು ಮೈಕ್‌ಗಳ ಅಳವಡಿಕೆ 

- ಮೈಕ್‌ನಲ್ಲಿ ಜನ್ರು ಮಾತನಾಡೋ, ಪ್ರಾಣಿಗಳ ಕೂಗಿನ ಸೌಂಡ್
 

ಚಿಕ್ಕಮಗಳೂರು (ಮಾ.04):  ಕಾಡಾನೆ ಹಾವಳಿಯಿಂದ ಕಾಫಿನಾಡಿಗರು ಕಂಗಾಲಾಗಿ, ಕಂಗೆಟ್ಟಿದ್ದರು. ಇವತ್ ಓಡ್ಸಿದ್ ಆನೆಗಳ ಹಿಂಡು ಒಂದೇ ವಾರ ಮತ್ತದೇ ಜಾಗದಲ್ಲಿ ಪ್ರತ್ಯಕ್ಷ. ಅತ್ತ ಅಧಿಕಾರಿಗಳು ರೈತರ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಇತ್ತ ಕಾಡಾನೆಗಳ ಹಾವಳಿಯೂ ಕಡಿಮೆಯಾಗ್ತಿಲ್ಲ. ರೈತರಿಗೆ ಪ್ರಕೃತಿಯಿಂದ ಬೆಳೆ ಉಳಿಸಿಕೊಳ್ಳುವುದಕ್ಕಿಂತ ಕಾಡಾನೆ, ಕಾಡುಪ್ರಾಣಿಗಳಿಂದ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿತ್ತು. ಅಧಿಕಾರಿಗಳಿಗೆ ಪತ್ರ ಮೇಲೆ ಪತ್ರ ಬರೆದ ರೈತರೇ ಇದೀಗ ಆನೆ ಹಾವಳಿಗೆ ಬ್ರೇಕ್ ಹಾಕೋದಕ್ಕೆ ಹೊಸ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಆನೆ ಹಾವಳಿಯೂ ತಕ್ಕಮಟ್ಟಿಗೆ ಕಡಿಮೆಯಾಗಿದೆ. 

 ಕಾಫಿನಾಡಲ್ಲಿ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಅಬ್ಬರ ಜೋರಿತ್ತು. ಹಲವು ವರ್ಷಗಳಿಂದ ಇದೆ. ಈಗಲೂ ಇದೆ. ಹಳ್ಳಿಗಳಲ್ಲಿ ರೈತರಂತೆ ಠಿಕಾಣಿ ಹೂಡಿವೆ. ಆನೆಯಿಂದ ನಾಲ್ಕೈದು ಜನ ಪ್ರಾಣ ಕೂಡ ಕಳೆದುಕೊಂಡಿದ್ದಾರೆ. ಈಗ ಚಿಕ್ಕಮಗಳೂರಿನ ಹಂಪಾಪುರ, ಬೀಕನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲೂ ಆನೆ ಹಾವಳಿ ಮಿತಿ ಮೀರ್ತಿದೆ. ವಾರಕ್ಕೆರಡು ಬಾರಿ ಫ್ಯಾಮಿಲಿ ಸಮೇತ ಬಂದೋಗೋದು ಫಿಕ್ಸ್ ಆಗಿದೆ. ಹಾಗಾಗಿ, ಗುಡ್ಡಗಳ ಪಕ್ಕದಲ್ಲಿರೋ ಜಮೀನುಗಳಲ್ಲಿ ಕಾಡಾನೆಗಳ ದಾಳಿಯಾಗದಂತೆ ರೈತರು ಡಿಜೆ ಸೌಂಡ್ ಮೊರೆ ಹೋಗಿದ್ದಾರೆ. ಸುತ್ತಮುತ್ತಲಿನ ಹೊಲ-ಗದ್ದೆ-ತೋಟಗಳಲ್ಲಿ ಮೂವತ್ತಕ್ಕೂ ಹೆಚ್ಚು ಮೈಕ್‌ಗಳನ್ನ ಹಾಕಿದ್ದಾರೆ. ಕೆಲವೆಡೆ ಸಂಜೆ 6 ಗಂಟೆಯಾಗುತ್ತಿದ್ದಂತೆ ಡಿಜೆ ಸೌಂಡ್ ಅನ್ ಆಗುತ್ತೆ. ಮೈಕಿನಲ್ಲಿ ಜನ ಮಾತನಾಡುವ ಹಾಗೆ, ಪ್ರಾಣಿಗಳು ಕೂಗುವ ಹಾಗೆ, ಪಟಾಕಿ ಸಿಡಿಯುವಂತೆ ನಿರಂತರ ಸೌಂಡ್ ಬರುತ್ತಿರುತ್ತೆ. ಶಬ್ಧಕ್ಕೆ ಹೆದರುವ ಕಾಡಾನೆಗಳು ಜಮೀನಿನತ್ತ ಬರಲ್ಲ ಅನ್ನೋದು ರೈತರೇ ಕಂಡುಕೊಂಡ ಮಾಸ್ಟರ್ ಪ್ಲಾನ್. 

ಒಟ್ಟಾರೆ, ಕಾಡಾನೆಗಳಿಂದ ನಲುಗಿ ಹೋಗಿರೋ ರೈತರು ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡರು ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆ ಈ ತಾತ್ಕಾಲಿಕ ಐಡಿಯಾಕೆ ಮೊರೆ ಹೋಗಿದ್ದಾರೆ. ಆದ್ರೆ, ಆನೆಗಳಿಗೂ ಬುದ್ಧಿ ಇರುತ್ತೆ. ಆನೆಗಳಿಗೆ ಈ ಮೈಕ್ ನಮ್ಮನ್ನ ಯಾಮಾರಿಸೋಕೆ ಹಾಕಿರೋದು ಎಂದು ಗೊತ್ತಾದರೆ ಮೊದ್ಲು ಕಿತ್ತಾಕೋದು ಮೈಕ್ಗಳನ್ನ. ಆಗ ಮತ್ತೆ ಆನೆ ಹಾವಳಿ ಹೆಚ್ಚಾಗೋದ್ರಲ್ಲಿ ನೋ ಡೌಟ್. ಹಾಗಾಗಿ, ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಕಾಡುಪ್ರಾಣಿಗಳು, ಆನೆಗಳಿಂದ ಜನರ ಜೀವ ಹಾಗೂ ಬೆಳೆ ಎರಡನ್ನೂ ಉಳಿಸೋದಕ್ಕೆ ಮುಂದಾಗಬೇಕೆಂಬುದು ಸ್ಥಳಿಯರ ಆಗ್ರಹವಾಗಿದೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more