Chikkamagaluru: ಹಾವು ಕಡಿತದ ಚುಚ್ಚುಮದ್ದು ಇಲ್ಲದೇ ಕಾಫಿನಾಡಿನಲ್ಲಿ ಮಹಿಳೆ ಸಾವು!

Chikkamagaluru: ಹಾವು ಕಡಿತದ ಚುಚ್ಚುಮದ್ದು ಇಲ್ಲದೇ ಕಾಫಿನಾಡಿನಲ್ಲಿ ಮಹಿಳೆ ಸಾವು!

Published : Jan 31, 2022, 11:43 AM ISTUpdated : Jan 31, 2022, 11:45 AM IST

*ನಾಗರಹಾವು ಕಚ್ಚಿದ ಮಹಿಳೆಗೆ  ಚುಚ್ಚುಮದ್ದು ಸಿಗದೇ ಸಾವು 
*3 ಗಂಟೆ ಆಸ್ಪತ್ರೆಗಳಿಂದ ಆಸ್ಪತ್ರೆಗೆ ಅಲೆದಾಡಿದರೂ ಸಿಗದ ಚಿಕಿತ್ಸೆ
*ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿಲ್ಲ ಹಾವು ಕಡಿತದ ಚುಚ್ಚುಮದ್ದು
*ಸೋಶಿಯಲ್‌ ಮೀಡಿಯಾದಲ್ಲಿಆರೋಗ್ಯ ಇಲಾಖೆ ವಿರುದ್ದ ಜನರ ಆಕ್ರೋಶ 
*ಎಎಸ್ ವಿ ಚುಚ್ಚುಮದ್ದು ಕಾಫಿನಾಡಿನಲ್ಲಿ ನೋ ಸ್ಟಾಕ್ ! 
 

ಚಿಕ್ಕಮಗಳೂರು (ಜ. 31): ವೈದ್ಯಕೀಯ ಕಾಲೇಜ್ ಆಗುವ ಹಣೆಪಟ್ಟಿ ಹೊತ್ತಿರುವ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ (Chikkamagalur)  ದಾರುಣ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಆರೋಗ್ಯ ಇಲಾಖೆಯ ದಿವ್ಯ ನಿರ್ಲಕ್ಷಕ್ಕೆ ಮಹಿಳೆ ಮೃತಪಟ್ಟಿದ್ದು ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಸಕಾಲದಲ್ಲಿ ಚುಚ್ಚುಮದ್ದು (Injection) ದೊರೆಯದೆ ಮಹಿಳೆ ಮೃತಪಟ್ಟಿದ್ದು ಸಾಮಾಜಿಕ ಜಾಲತಾಣದಲ್ಲಿ ಆರೋಗ್ಯ ಇಲಾಖೆಯ ವಿರುದ್ದ ಜನರು ಕಿಡಿಕಾರುತ್ತಿದ್ದಾರೆ.

ಹೀಗೆ ಆರೋಗ್ಯ ಇಲಾಖೆ ವಿರುದ್ದ ಸಾಮಾಜಿಕ ತಾಣದಲ್ಲಿ ಆಕ್ರೋಶದ ಕಿಡಿ ಹೊತ್ತಿರುವುದು ಕಾಫಿನಾಡು ಚಿಕ್ಕಮಗಳೂರಿನಲ್ಲಿ. ಹೌದು ಹಾವು ಕಚ್ಚಿದ ಮಹಿಳೆಗೆ ಸಕಾಲದಲ್ಲಿ   ಚುಚ್ಚುಮದ್ದು ಸಿಗದೆ ಮತಪಟ್ಟಿರುವ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ . ಮೂಡಿಗೆರೆ ತಾಲೂಕು ಗೋಣಿಬೀಡು ಹೋಬಳಿ  ಸಾಲುಮರಹಳ್ಳಿಯ ನಿವಾಸಿ ಶ್ರೀಮತಿ ಶಾರದಮ್ಮ  ಮನೆಯ ಹಿತ್ತಲಿನಲ್ಲಿ ಕೆಲಸ ಮಾಡುತ್ತಿರುವಾಗ  ವಿಷನಾಗರ ಕಚ್ಚಿದೆ. ತಕ್ಷಣವೇ ಅವರನ್ನು ಮೂಡಿಗೆರೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. 

ಇದನ್ನೂ ಓದಿ: Chikkamagaluru Crime: ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್‌: ಕಾರು ಚಾಲಕ ನಿಗೂಢ ಆತ್ಮಹತ್ಯೆ

ಆದರೆ  ಅಲ್ಲಿ ಹಾವಿನ ಕಡಿತಕ್ಕೆ ಚುಚ್ಚುಮದ್ದು ಸಿಕ್ಕಿಲ್ಲ. ತಕ್ಷಣ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ  ಕರೆದುಕೊಂಡು ಹೋಗಿದ್ದು  ಅಲ್ಲಿಯೂ  ಚುಚ್ಚುಮದ್ದು ಸಿಕ್ಕಿಲ್ಲ , ಸರ್ಕಾರಿ ಆಸ್ಪತ್ರೆ ಮಾತ್ರವಲ್ಲದೆ 3 ಖಾಸಗಿ ಆಸ್ಪತ್ರೆಗಳಲ್ಲೂ ಹೋಗಿ ಚುಚ್ಚುಮದ್ದಿಗೆ ಹೆಣಗಾಡಿದ್ದಾರೆ .ಆದರೆ ಎಲ್ಲಿಯೂ ಸಿಕ್ಕಿಲ್ಲ. ಸುಮಾರು 3 ಗಂಟೆಗಳ  ಜೀವನ್ಮರಣ ಹೋರಾಟ ನಡೆಸಿದ ಶಾರದಮ್ಮ  ಇಹಲೋಕ ತ್ಯಜಿಸಿದ್ದಾರೆ.

 ವೈದ್ಯಕೀಯ ಕಾಲೇಜು ಆಗುವ ಹಣೆಪಟ್ಟಿ ಹೊತ್ತಿರುವ ಜಿಲ್ಲೆಯಲ್ಲೇ ಹಾವು ಕಡಿತಕ್ಕೆ ಚುಚ್ಚುಮದ್ದು  ಇಲ್ಲದೆ ಇರುವುದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅಸಡ್ಡೆ , ಜಡ್ಡುಗಟ್ಟಿದ ವೈದ್ಯಕೀಯ ವ್ಯವಸ್ಥೆಗೆ ಹಿಡಿದ ಕನ್ನಡಿ ಎಂದು  ಸಾರ್ವಜನಿಕರು ಆರೋಪಿಸಿದ್ದಾರೆ . ಸಂಬಂಧಪಟ್ಟ ಅಧಿಕಾರಿಗಳು, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಘಟನೆಯ ತನಿಖೆ ನಡೆಸಿ, ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು  ಜನರು  ಒತ್ತಾಯಿಸಿದ್ದಾರೆ. 

ಇದನ್ನೂ ಓದಿChikkamagaluru: ಈ ಬಾರಿ ಇಲ್ಲ ವೈದ್ಯಕೀಯ ಕಾಲೇಜಿನ ಶೈಕ್ಷಣಿಕ ವರ್ಷ!

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್ ಈಶ್ವರಪ್ಪ ಈಗ ತಾನೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಜಿಲ್ಲೆಗೆ ಬಂದಿದ್ದೇನೆ , ಪ್ರಕರಣವನ್ನು ಗಮನಿಸುತ್ತೇನೆ ಸೂಕ್ತ ತನಿಖೆಗೆ ಆದೇಶ ಮಾಡುತ್ತೇನೆ ಎಂದು ಉತ್ತರಿಸಿದ್ದಾರೆ, ಇನ್ನು ಡಿ ಎಚ್ ಓ ಉಮೇಶ್ ಪ್ರತಿಕ್ರಿಯೆ ನೀಡಿ ಜಿಲ್ಲಾಸ್ಪತ್ರೆ ಸೇರಿದಂತೆ ತಾಲ್ಲೂಕ್ ಆಸ್ಪತ್ರೆಗಳಲ್ಲಿ ಹಾವು ಕಡಿತದ ಚುಚ್ಚುಮದ್ದುಗಳು ಲಭ್ಯವಿದೆ. ಮೂಡಿಗೆರೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

 ಹಾವು ಕಡಿತದ ಚುಚ್ಚುಮದ್ದುಗಳು ಅಲಭ್ಯತೆಯೂ ಅಥವಾ ವೈದ್ಯರ ನಿರ್ಲಕ್ಷವೂ ಗೊತ್ತಿಲ್ಲ ,ಆದ್ರೆ ಮುಗ್ಗ ಜೀವವೊಂದು ಕೊನೆಯುಸಿರೆಳೆದಿದೆ. ಈ ಬಗ್ಗೆ ಸಂಬಂಧಪಟ್ಟವರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹಾವು ಕಡಿತದ ಎಎಸ್ ವಿ ಚುಚ್ಚುಮದ್ದು ಕಾಫಿ ನಾಡಿನಲ್ಲಿ ಇದ್ದಯೂ ಇಲ್ಲವೂ ಎನ್ನವುದರ ಬಗ್ಗೆಯೂ ಸತ್ಯಾಂಶ ಹೊರಬರಬೇಕಾಗಿದೆ.

24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
Read more