Dusty Roads Upset Residents: ಚಿಕ್ಕಮಗಳೂರಿನ ಕೊಟ್ಟಿಗೆಹಾರ ಜನರಿಗೆ ಉಚಿತ ಧೂಳುಭಾಗ್ಯ!

Dusty Roads Upset Residents: ಚಿಕ್ಕಮಗಳೂರಿನ ಕೊಟ್ಟಿಗೆಹಾರ ಜನರಿಗೆ ಉಚಿತ ಧೂಳುಭಾಗ್ಯ!

Published : Jan 24, 2022, 11:56 AM IST

*ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ!
*ಆಮೆಗತಿಯಲ್ಲಿ ಕಾಮಗಾರಿ, ಹಳ್ಳಿ ಜನರಿಂದ ಸರ್ಕಾರಕ್ಕೆ ಹಿಡಿಶಾಪ 
*ಹೆದ್ದಾರಿಯಲ್ಲಿ ಧೂಳು...ಬರೇ ಧೂಳು, 10 ಹಳ್ಳಿಗಳು ಧೂಳುಮಯ
*ನೀರನ್ನೂ ಹಾಕಲ್ಲ, ಡಾಂಬರ್ ಕೂಡ ಹಾಕಲ್ಲ, ನರಕಮಯ ಜೀವನ
*ಧೂಳಿನಿಂದ ಹತ್ತಾರು ಕಾಯಿಲೆಗೆ ತುತ್ತಾಗುತ್ತಿರುವ ಗ್ರಾಮಸ್ಥರು

ಚಿಕ್ಕಮಗಳೂರು(ಜ. 24): ಕೆಮ್ಮ, ಜ್ವರ, ಶೀತ ಬಂದ್ರೆ  ಕೊರೋನಾ ಅನ್ನೋ ಕಾಲವಿದು. ಇಂತಹ ಕಾಲದಲ್ಲಿ ಧೂಳುಭರಿತ ರಸ್ತೆಯಲ್ಲಿ ಸಂಚಾರ ಮಾಡಿದ್ರೆ, ವಾಹನಗಳ ಅತೀ ವೇಗದಲ್ಲಿ ಸಂಚಾರಿಸಿದ್ರೆ ಪ್ರಯಾಣಿಕರ ಹಾದಿಯಾಗಿ ಸ್ಥಳೀಯರು ಕಾಯಿಲೆಗೆ ತುತ್ತಾಗುವುದು ಗ್ಯಾರಂಟಿ ಎನ್ನುವಂತಾಗಿದೆ. ಚಿಕ್ಕಮಗಳೂರಿನ (Chikkamagaluru) ಕೊಟ್ಟಿಗೆ ಹಾರದಲ್ಲಿ ಸುಮಾರು 10ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಜನರು ವಿವಿಧ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಇದಕ್ಕೆ ಕಾರಣ ಈ ರಸ್ತೆಯಲ್ಲಿನ ಧೂಳು. ಈ ರಸ್ತೆಯಲ್ಲಿ ಜನರು , ವಾಹನಗಳು ಸಂಚರಿಸುವಾಗ  ಬರುವ ಧೂಳಿನಿಂದಾಗಿ ಜನರು ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇಲ್ಲಿನ 10ಕ್ಕೂ ಹೆಚ್ಚು ಹಳ್ಳಿಗಳ ಜನರು ನರಕದಲ್ಲಿ ಜೀವನ ನಡೆಸುವಂತಹ ಸ್ಥಿತಿ ಬಂದೊದಗಿದೆ. 

ಇದನ್ನೂ ಓದಿ: ಕಾಫಿ ನಾಡಲ್ಲಿ ಮರೆಯಾದ ಬೆಲ್ಲದ ವಾಸನೆ, ಅಳಿವಿನ ಅಂಚಿನಲ್ಲಿದೆ ಅಲೆಮನೆಗಳು!

ಮಾಡೋ ಕೆಲಸವನ್ನ ಸರಿಯಾಗಿ ಮಾಡದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಯ ಜನರನ್ನ ಕೆಮ್ಮುತ್ತ ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ. ಜಿಲ್ಲೆಯ ಮೂಡಿಗೆರೆಯಿಂದ ಕೊಟ್ಟಿಗೆಹಾರದವರೆಗೂ ಹೆದ್ದಾರಿ ರಸ್ತೆ ಅಗಲೀಕರಣದ ಕಾಮಗಾರಿ ನಡೆಯುತ್ತಿದೆ. ರಸ್ತೆ ಕಾಮಗಾರಿಗೆ ರಸ್ತೆ ಅಗೆದಿರೋ ಅಧಿಕಾರಿಗಳು ರಸ್ತೆಗೆ ಡಾಂಬರ್ ಹಾಕಿಲ್ಲ. ಪ್ರವಾಸಿತಾಣ, ಧಾರ್ಮಿಕ ಕ್ಷೇತ್ರಕ್ಕಾಗಿ ನಿತ್ಯ ನೂರಾರು ವಾಹನಗಳು ಓಡಾಡುವ ಈ ಮಾರ್ಗದಲ್ಲಿ 10ಕ್ಕೂ ಹೆಚ್ಚು ಹಳ್ಳಿಗಳು ಇವೆ. ಹೆಚ್ಚಾಗಿ ಟೂರಿಸ್ಟ್ ವಾಹನಗಳೇ ಓಡಾಡುವ ಈ ಮಾರ್ಗದಲ್ಲಿ ವಾಹನ ಚಾಲಕರು ಬೇಕಾಬಿಟ್ಟಿ ವೇಗವಾಗಿ ಓಡಾಡುವುದರಿಂದ ನಿತ್ಯ 10ಕ್ಕೂ ಹೆಚ್ಚಿನ ಹಳ್ಳಿಗಳು ಸಂಪೂರ್ಣ ಧೂಳಿನಲ್ಲಿ ಮುಳುಗಿವೆ. ಈ ಕುರಿತು ಒಂದು ವರದಿ ಇಲ್ಲಿದೆ!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more