Dusty Roads Upset Residents: ಚಿಕ್ಕಮಗಳೂರಿನ ಕೊಟ್ಟಿಗೆಹಾರ ಜನರಿಗೆ ಉಚಿತ ಧೂಳುಭಾಗ್ಯ!

Dusty Roads Upset Residents: ಚಿಕ್ಕಮಗಳೂರಿನ ಕೊಟ್ಟಿಗೆಹಾರ ಜನರಿಗೆ ಉಚಿತ ಧೂಳುಭಾಗ್ಯ!

Published : Jan 24, 2022, 11:56 AM IST

*ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ!
*ಆಮೆಗತಿಯಲ್ಲಿ ಕಾಮಗಾರಿ, ಹಳ್ಳಿ ಜನರಿಂದ ಸರ್ಕಾರಕ್ಕೆ ಹಿಡಿಶಾಪ 
*ಹೆದ್ದಾರಿಯಲ್ಲಿ ಧೂಳು...ಬರೇ ಧೂಳು, 10 ಹಳ್ಳಿಗಳು ಧೂಳುಮಯ
*ನೀರನ್ನೂ ಹಾಕಲ್ಲ, ಡಾಂಬರ್ ಕೂಡ ಹಾಕಲ್ಲ, ನರಕಮಯ ಜೀವನ
*ಧೂಳಿನಿಂದ ಹತ್ತಾರು ಕಾಯಿಲೆಗೆ ತುತ್ತಾಗುತ್ತಿರುವ ಗ್ರಾಮಸ್ಥರು

ಚಿಕ್ಕಮಗಳೂರು(ಜ. 24): ಕೆಮ್ಮ, ಜ್ವರ, ಶೀತ ಬಂದ್ರೆ  ಕೊರೋನಾ ಅನ್ನೋ ಕಾಲವಿದು. ಇಂತಹ ಕಾಲದಲ್ಲಿ ಧೂಳುಭರಿತ ರಸ್ತೆಯಲ್ಲಿ ಸಂಚಾರ ಮಾಡಿದ್ರೆ, ವಾಹನಗಳ ಅತೀ ವೇಗದಲ್ಲಿ ಸಂಚಾರಿಸಿದ್ರೆ ಪ್ರಯಾಣಿಕರ ಹಾದಿಯಾಗಿ ಸ್ಥಳೀಯರು ಕಾಯಿಲೆಗೆ ತುತ್ತಾಗುವುದು ಗ್ಯಾರಂಟಿ ಎನ್ನುವಂತಾಗಿದೆ. ಚಿಕ್ಕಮಗಳೂರಿನ (Chikkamagaluru) ಕೊಟ್ಟಿಗೆ ಹಾರದಲ್ಲಿ ಸುಮಾರು 10ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಜನರು ವಿವಿಧ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಇದಕ್ಕೆ ಕಾರಣ ಈ ರಸ್ತೆಯಲ್ಲಿನ ಧೂಳು. ಈ ರಸ್ತೆಯಲ್ಲಿ ಜನರು , ವಾಹನಗಳು ಸಂಚರಿಸುವಾಗ  ಬರುವ ಧೂಳಿನಿಂದಾಗಿ ಜನರು ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇಲ್ಲಿನ 10ಕ್ಕೂ ಹೆಚ್ಚು ಹಳ್ಳಿಗಳ ಜನರು ನರಕದಲ್ಲಿ ಜೀವನ ನಡೆಸುವಂತಹ ಸ್ಥಿತಿ ಬಂದೊದಗಿದೆ. 

ಇದನ್ನೂ ಓದಿ: ಕಾಫಿ ನಾಡಲ್ಲಿ ಮರೆಯಾದ ಬೆಲ್ಲದ ವಾಸನೆ, ಅಳಿವಿನ ಅಂಚಿನಲ್ಲಿದೆ ಅಲೆಮನೆಗಳು!

ಮಾಡೋ ಕೆಲಸವನ್ನ ಸರಿಯಾಗಿ ಮಾಡದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಯ ಜನರನ್ನ ಕೆಮ್ಮುತ್ತ ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ. ಜಿಲ್ಲೆಯ ಮೂಡಿಗೆರೆಯಿಂದ ಕೊಟ್ಟಿಗೆಹಾರದವರೆಗೂ ಹೆದ್ದಾರಿ ರಸ್ತೆ ಅಗಲೀಕರಣದ ಕಾಮಗಾರಿ ನಡೆಯುತ್ತಿದೆ. ರಸ್ತೆ ಕಾಮಗಾರಿಗೆ ರಸ್ತೆ ಅಗೆದಿರೋ ಅಧಿಕಾರಿಗಳು ರಸ್ತೆಗೆ ಡಾಂಬರ್ ಹಾಕಿಲ್ಲ. ಪ್ರವಾಸಿತಾಣ, ಧಾರ್ಮಿಕ ಕ್ಷೇತ್ರಕ್ಕಾಗಿ ನಿತ್ಯ ನೂರಾರು ವಾಹನಗಳು ಓಡಾಡುವ ಈ ಮಾರ್ಗದಲ್ಲಿ 10ಕ್ಕೂ ಹೆಚ್ಚು ಹಳ್ಳಿಗಳು ಇವೆ. ಹೆಚ್ಚಾಗಿ ಟೂರಿಸ್ಟ್ ವಾಹನಗಳೇ ಓಡಾಡುವ ಈ ಮಾರ್ಗದಲ್ಲಿ ವಾಹನ ಚಾಲಕರು ಬೇಕಾಬಿಟ್ಟಿ ವೇಗವಾಗಿ ಓಡಾಡುವುದರಿಂದ ನಿತ್ಯ 10ಕ್ಕೂ ಹೆಚ್ಚಿನ ಹಳ್ಳಿಗಳು ಸಂಪೂರ್ಣ ಧೂಳಿನಲ್ಲಿ ಮುಳುಗಿವೆ. ಈ ಕುರಿತು ಒಂದು ವರದಿ ಇಲ್ಲಿದೆ!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more