ಪೊಲೀಸರಿಂದ ಬಿಡಾಡಿ ದನಗಳ ಹಿಡಿಯುವ ಕಾರ್ಯಾಚರಣೆ! ರಾಸುಗಳನ್ನು ರಸ್ತೆಗೆ ಬಿಟ್ಟರೆ ಕೇಸ್‌ ಹಾಕುವುದಾಗಿ ಮಾಲೀಕರಿಗೆ ಎಚ್ಚರಿಕೆ

ಪೊಲೀಸರಿಂದ ಬಿಡಾಡಿ ದನಗಳ ಹಿಡಿಯುವ ಕಾರ್ಯಾಚರಣೆ! ರಾಸುಗಳನ್ನು ರಸ್ತೆಗೆ ಬಿಟ್ಟರೆ ಕೇಸ್‌ ಹಾಕುವುದಾಗಿ ಮಾಲೀಕರಿಗೆ ಎಚ್ಚರಿಕೆ

Published : Jul 14, 2024, 05:50 PM IST

ಖುದ್ದು ರಸ್ತೆಗೆ ಇಳಿದು ಬಿಡಾಡಿ ದನಗಳನ್ನು ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಅಮಟೆ ಹಿಡಿದಿದ್ದು, ಒಟ್ಟು 4 ಹಸುಗಳನ್ನ ಹಿಡಿದು ಗೋ ಶಾಲೆಗೆ ಪೊಲೀಸರು ಬಿಟ್ಟಿದ್ದಾರೆ. 

ಚಿಕ್ಕಮಗಳೂರು: ದನ ಹಿಡಿಯಲು ಚಿಕ್ಕಮಗಳೂರು (Chikkamagaluru) ಎಸ್‌ಪಿ ವಿಕ್ರಂ ಅಮಟೆ(SP Vikram Amate) ರಸ್ತೆಗಿಳಿದಿದ್ದರು. ಪೊಲೀಸರಿಂದ ರಸ್ತೆಯಲ್ಲಿ ಓಡಾಡುತ್ತಿದ್ದ ಬಿಡಾಡಿ ದನಗಳ (Cattle) ಹಿಡಿಯುವ ಕಾರ್ಯಾಚರಣೆ ನಡೆಯಿತು. ನಗರದಲ್ಲಿ ಹಗಲಿರುಳೆನ್ನದೇ ದನಗಳ ಓಡಾಟದಿಂದ ಸಾಕಷ್ಟು ವಾಹನಗಳ ಅಪಘಾತವಾಗಿತ್ತು. ಖುದ್ದು ರಸ್ತೆಗೆ ಇಳಿದು ಬಿಡಾಡಿ ದನಗಳನ್ನು ಎಸ್‌ಪಿ ವಿಕ್ರಮ್ ಅಮಟೆ ಹಿಡಿದರು. ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್, ಕೆ.ಎಂ.ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಒಟ್ಟು 4 ಹಸುಗಳನ್ನ ಹಿಡಿದು ಗೋ ಶಾಲೆಗೆ ಪೊಲೀಸರು(Police) ಬಿಟ್ಟಿದ್ದಾರೆ. ರಸ್ತೆಯಲ್ಲಿ ಹಸು ಅಡ್ಡ ಬಂದ ಕಾರಣ ಇಬ್ಬರ ಸಾವಾಗಿತ್ತು. ಬೈಕಿನಿಂದ 60ಕ್ಕೂ ಹೆಚ್ಚು ಬೈಕ್ ಸವಾರರು ಬಿದ್ದಿದ್ದಾರೆ. ಪೊಲೀಸರಿಗೆ ಅಗ್ನಿಶಾಮಕ ದಳ, ಪಶುಸಂಗೋಪನಾ ಇಲಾಖೆ ಸಾಥ್ ನೀಡಿದೆ. ದಂಡ ಕಟ್ಟಿ ದನಗಳನ್ನು ಬಿಡಿಸಿಕೊಂಡು ಹೋಗಲು ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ರಾಸುಗಳನ್ನ ರಸ್ತೆಗೆ ಬಿಟ್ಟರೆ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಹತ್ತಾರು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. 

ಇದನ್ನೂ ವೀಕ್ಷಿಸಿ:  ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more