ಪೊಲೀಸರಿಂದ ಬಿಡಾಡಿ ದನಗಳ ಹಿಡಿಯುವ ಕಾರ್ಯಾಚರಣೆ! ರಾಸುಗಳನ್ನು ರಸ್ತೆಗೆ ಬಿಟ್ಟರೆ ಕೇಸ್‌ ಹಾಕುವುದಾಗಿ ಮಾಲೀಕರಿಗೆ ಎಚ್ಚರಿಕೆ

ಪೊಲೀಸರಿಂದ ಬಿಡಾಡಿ ದನಗಳ ಹಿಡಿಯುವ ಕಾರ್ಯಾಚರಣೆ! ರಾಸುಗಳನ್ನು ರಸ್ತೆಗೆ ಬಿಟ್ಟರೆ ಕೇಸ್‌ ಹಾಕುವುದಾಗಿ ಮಾಲೀಕರಿಗೆ ಎಚ್ಚರಿಕೆ

Published : Jul 14, 2024, 05:50 PM IST

ಖುದ್ದು ರಸ್ತೆಗೆ ಇಳಿದು ಬಿಡಾಡಿ ದನಗಳನ್ನು ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಅಮಟೆ ಹಿಡಿದಿದ್ದು, ಒಟ್ಟು 4 ಹಸುಗಳನ್ನ ಹಿಡಿದು ಗೋ ಶಾಲೆಗೆ ಪೊಲೀಸರು ಬಿಟ್ಟಿದ್ದಾರೆ. 

ಚಿಕ್ಕಮಗಳೂರು: ದನ ಹಿಡಿಯಲು ಚಿಕ್ಕಮಗಳೂರು (Chikkamagaluru) ಎಸ್‌ಪಿ ವಿಕ್ರಂ ಅಮಟೆ(SP Vikram Amate) ರಸ್ತೆಗಿಳಿದಿದ್ದರು. ಪೊಲೀಸರಿಂದ ರಸ್ತೆಯಲ್ಲಿ ಓಡಾಡುತ್ತಿದ್ದ ಬಿಡಾಡಿ ದನಗಳ (Cattle) ಹಿಡಿಯುವ ಕಾರ್ಯಾಚರಣೆ ನಡೆಯಿತು. ನಗರದಲ್ಲಿ ಹಗಲಿರುಳೆನ್ನದೇ ದನಗಳ ಓಡಾಟದಿಂದ ಸಾಕಷ್ಟು ವಾಹನಗಳ ಅಪಘಾತವಾಗಿತ್ತು. ಖುದ್ದು ರಸ್ತೆಗೆ ಇಳಿದು ಬಿಡಾಡಿ ದನಗಳನ್ನು ಎಸ್‌ಪಿ ವಿಕ್ರಮ್ ಅಮಟೆ ಹಿಡಿದರು. ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್, ಕೆ.ಎಂ.ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಒಟ್ಟು 4 ಹಸುಗಳನ್ನ ಹಿಡಿದು ಗೋ ಶಾಲೆಗೆ ಪೊಲೀಸರು(Police) ಬಿಟ್ಟಿದ್ದಾರೆ. ರಸ್ತೆಯಲ್ಲಿ ಹಸು ಅಡ್ಡ ಬಂದ ಕಾರಣ ಇಬ್ಬರ ಸಾವಾಗಿತ್ತು. ಬೈಕಿನಿಂದ 60ಕ್ಕೂ ಹೆಚ್ಚು ಬೈಕ್ ಸವಾರರು ಬಿದ್ದಿದ್ದಾರೆ. ಪೊಲೀಸರಿಗೆ ಅಗ್ನಿಶಾಮಕ ದಳ, ಪಶುಸಂಗೋಪನಾ ಇಲಾಖೆ ಸಾಥ್ ನೀಡಿದೆ. ದಂಡ ಕಟ್ಟಿ ದನಗಳನ್ನು ಬಿಡಿಸಿಕೊಂಡು ಹೋಗಲು ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ರಾಸುಗಳನ್ನ ರಸ್ತೆಗೆ ಬಿಟ್ಟರೆ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಹತ್ತಾರು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. 

ಇದನ್ನೂ ವೀಕ್ಷಿಸಿ:  ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more