ಪೊಲೀಸರಿಂದ ಬಿಡಾಡಿ ದನಗಳ ಹಿಡಿಯುವ ಕಾರ್ಯಾಚರಣೆ! ರಾಸುಗಳನ್ನು ರಸ್ತೆಗೆ ಬಿಟ್ಟರೆ ಕೇಸ್‌ ಹಾಕುವುದಾಗಿ ಮಾಲೀಕರಿಗೆ ಎಚ್ಚರಿಕೆ

ಪೊಲೀಸರಿಂದ ಬಿಡಾಡಿ ದನಗಳ ಹಿಡಿಯುವ ಕಾರ್ಯಾಚರಣೆ! ರಾಸುಗಳನ್ನು ರಸ್ತೆಗೆ ಬಿಟ್ಟರೆ ಕೇಸ್‌ ಹಾಕುವುದಾಗಿ ಮಾಲೀಕರಿಗೆ ಎಚ್ಚರಿಕೆ

Published : Jul 14, 2024, 05:50 PM IST

ಖುದ್ದು ರಸ್ತೆಗೆ ಇಳಿದು ಬಿಡಾಡಿ ದನಗಳನ್ನು ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಅಮಟೆ ಹಿಡಿದಿದ್ದು, ಒಟ್ಟು 4 ಹಸುಗಳನ್ನ ಹಿಡಿದು ಗೋ ಶಾಲೆಗೆ ಪೊಲೀಸರು ಬಿಟ್ಟಿದ್ದಾರೆ. 

ಚಿಕ್ಕಮಗಳೂರು: ದನ ಹಿಡಿಯಲು ಚಿಕ್ಕಮಗಳೂರು (Chikkamagaluru) ಎಸ್‌ಪಿ ವಿಕ್ರಂ ಅಮಟೆ(SP Vikram Amate) ರಸ್ತೆಗಿಳಿದಿದ್ದರು. ಪೊಲೀಸರಿಂದ ರಸ್ತೆಯಲ್ಲಿ ಓಡಾಡುತ್ತಿದ್ದ ಬಿಡಾಡಿ ದನಗಳ (Cattle) ಹಿಡಿಯುವ ಕಾರ್ಯಾಚರಣೆ ನಡೆಯಿತು. ನಗರದಲ್ಲಿ ಹಗಲಿರುಳೆನ್ನದೇ ದನಗಳ ಓಡಾಟದಿಂದ ಸಾಕಷ್ಟು ವಾಹನಗಳ ಅಪಘಾತವಾಗಿತ್ತು. ಖುದ್ದು ರಸ್ತೆಗೆ ಇಳಿದು ಬಿಡಾಡಿ ದನಗಳನ್ನು ಎಸ್‌ಪಿ ವಿಕ್ರಮ್ ಅಮಟೆ ಹಿಡಿದರು. ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್, ಕೆ.ಎಂ.ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಒಟ್ಟು 4 ಹಸುಗಳನ್ನ ಹಿಡಿದು ಗೋ ಶಾಲೆಗೆ ಪೊಲೀಸರು(Police) ಬಿಟ್ಟಿದ್ದಾರೆ. ರಸ್ತೆಯಲ್ಲಿ ಹಸು ಅಡ್ಡ ಬಂದ ಕಾರಣ ಇಬ್ಬರ ಸಾವಾಗಿತ್ತು. ಬೈಕಿನಿಂದ 60ಕ್ಕೂ ಹೆಚ್ಚು ಬೈಕ್ ಸವಾರರು ಬಿದ್ದಿದ್ದಾರೆ. ಪೊಲೀಸರಿಗೆ ಅಗ್ನಿಶಾಮಕ ದಳ, ಪಶುಸಂಗೋಪನಾ ಇಲಾಖೆ ಸಾಥ್ ನೀಡಿದೆ. ದಂಡ ಕಟ್ಟಿ ದನಗಳನ್ನು ಬಿಡಿಸಿಕೊಂಡು ಹೋಗಲು ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ರಾಸುಗಳನ್ನ ರಸ್ತೆಗೆ ಬಿಟ್ಟರೆ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಹತ್ತಾರು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. 

ಇದನ್ನೂ ವೀಕ್ಷಿಸಿ:  ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more