ಮೈಸೂರಿನಲ್ಲಿ ಯುವ ದಸರಾ ಸಂಭ್ರಮ: ಮಕ್ಕಳ ದಸರಾದಲ್ಲಿ ಕಳೆಗಟ್ಟಿದ ಕಲರವ

ಮೈಸೂರಿನಲ್ಲಿ ಯುವ ದಸರಾ ಸಂಭ್ರಮ: ಮಕ್ಕಳ ದಸರಾದಲ್ಲಿ ಕಳೆಗಟ್ಟಿದ ಕಲರವ

Published : Oct 19, 2023, 11:07 AM IST

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಾಲ್ಕನೇ ದಿನ ವರ್ಣ ರಂಜಿತವಾಗಿ ಕೊನೆಗೊಂಡಿದೆ. ಹತ್ತುಹಲವು ಕಾರ್ಯಕ್ರಮಗಳ ಮೂಲಕ ನಾಡಹಬ್ಬಕ್ಕೆ‌ ಮೆರಗು ಸಿಕ್ಕಿದೆ. ಮಹಿಳಾ ದಸರಾದಲ್ಲಿ ರಾಗಿ ಬೀಸಿ, ಭತ್ತಕುಟ್ಟಿ ಮಹಿಳೆಯರು ಸಂಭ್ರಮಿಸಿದ್ರೆ, ಮಕ್ಕಳ ದಸರಾದಲ್ಲಿ ಚಿಣ್ಣರ ಕಲರವ ಜೋರಾಗಿತ್ತು.
 

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಅರಮನೆ ನಗರಿಯಲ್ಲಿ ಸಂಭ್ರಮ ಮನೆ ಮಾಡಿದ್ದು, ಅರಮನೆಯಂತೂ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ನಾಲ್ಕನೇ ದಿನದ ಯುವ ದಸರಾದಲ್ಲಿ(Yuva dasara)  ವಿವಿಧ ಶಾಲೆಯ ಮಕ್ಕಳು ಕರಕುಶಲ ಕಲೆ, ಸಾಹಿತ್ಯ, ಸಂಸ್ಕೃತಿ, ವಿಜ್ಞಾನ, ಶೈಕ್ಷಣಿಕ, ತಂತ್ರಜ್ಞಾನ ವಿಷಯಗಳ  ವಸ್ತು ಪ್ರದರ್ಶನಗಳನ್ನು ಮಾಡಿ ನೋಡುಗರ ಕಣ್ಮನ ಸೆಳೆಯಿತು. ಮಕ್ಕಳ ದಸರಾ ಉದ್ಘಾಟಿಸಿದ ಶಿಕ್ಷಣ ಸಚಿವ ಮಧುಬಂಗಾರಪ್ಪ(Madhubangarappa )  ಕಾರ್ಯಕ್ರಮಗಳನ್ನು ನೋಡಿ ಹರ್ಷ ವ್ಯಕ್ತಪಡಿಸಿದ್ರು.. ಜೆ.ಕೆ.ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ದಸರಾ(women dasara) ಕೂಡಾ ಹಲವು ಗ್ರಾಮೀಣ ಕ್ರೀಡೆಗಳಿಂದ ಗಮನ ಸೆಳೆಯಿತು. ರಾಗಿ ಬೀಸುವ ಸ್ಪರ್ಧೆ, ಭತ್ತ ಕುಟ್ಟುವ ಸ್ಪರ್ಧೆ, ಹೂ ಕಟ್ಟುವ ಸ್ಪರ್ಧೆ, ಒಲೆರಹಿತ ಅಡಿಗೆ ಸ್ಪರ್ಧೆ ಹಾಗೂ ವೇಗದ ನಡಿಗೆ ಸ್ಪರ್ಧೆ ಮಹಿಳೆಯರು ಎಂಜಾಯ್ ಮಾಡುವಂತೆ ಮಾಡಿತ್ತು. ಯುವ ದಸರಾಗೆ  ಸ್ಯಾಂಡಲ್‌ವುಡ್ ನಟ, ನಟಿಯರು ಭಾಗವಹಿಸಿ ಮೆರುಗು ನೀಡಿದ್ರು. ಸಾಧು ಕೋಕಿಲ ಅಂಡ್ ಟೀಂ ಯುವ ಮನಸುಗಳನ್ನು ರಂಜಿಸಿದ್ರು. ಇತ್ತ ದಾಸರಾ ಆನೆಗಳ ಮಾವುತರ ಜೊತೆ ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕಾಲ ಕಳೆದ್ರು.. ತಮ್ಮ ಹಳೆಯ ದಿನಗಳ ದಸರಾ ನೆನಪುಗಳನ್ನು ಮೆಲುಕು ಹಾಕಿದ್ರು.

ಇದನ್ನೂ ವೀಕ್ಷಿಸಿ:  ಯುವ ಸಿನಿಮಾಗಾಗಿ ಕಾದು ಕುಂತ ದೊಡ್ಮನೆ ಫ್ಯಾನ್ಸ್! ಸಲಾರ್‌ಗಾಗಿ ಯುವ ರಿಲೀಸ್ ತಡವಾಗುತ್ತಾ..?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ