ಮೈಸೂರಿನಲ್ಲಿ ಯುವ ದಸರಾ ಸಂಭ್ರಮ: ಮಕ್ಕಳ ದಸರಾದಲ್ಲಿ ಕಳೆಗಟ್ಟಿದ ಕಲರವ

ಮೈಸೂರಿನಲ್ಲಿ ಯುವ ದಸರಾ ಸಂಭ್ರಮ: ಮಕ್ಕಳ ದಸರಾದಲ್ಲಿ ಕಳೆಗಟ್ಟಿದ ಕಲರವ

Published : Oct 19, 2023, 11:07 AM IST

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಾಲ್ಕನೇ ದಿನ ವರ್ಣ ರಂಜಿತವಾಗಿ ಕೊನೆಗೊಂಡಿದೆ. ಹತ್ತುಹಲವು ಕಾರ್ಯಕ್ರಮಗಳ ಮೂಲಕ ನಾಡಹಬ್ಬಕ್ಕೆ‌ ಮೆರಗು ಸಿಕ್ಕಿದೆ. ಮಹಿಳಾ ದಸರಾದಲ್ಲಿ ರಾಗಿ ಬೀಸಿ, ಭತ್ತಕುಟ್ಟಿ ಮಹಿಳೆಯರು ಸಂಭ್ರಮಿಸಿದ್ರೆ, ಮಕ್ಕಳ ದಸರಾದಲ್ಲಿ ಚಿಣ್ಣರ ಕಲರವ ಜೋರಾಗಿತ್ತು.
 

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಅರಮನೆ ನಗರಿಯಲ್ಲಿ ಸಂಭ್ರಮ ಮನೆ ಮಾಡಿದ್ದು, ಅರಮನೆಯಂತೂ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ನಾಲ್ಕನೇ ದಿನದ ಯುವ ದಸರಾದಲ್ಲಿ(Yuva dasara)  ವಿವಿಧ ಶಾಲೆಯ ಮಕ್ಕಳು ಕರಕುಶಲ ಕಲೆ, ಸಾಹಿತ್ಯ, ಸಂಸ್ಕೃತಿ, ವಿಜ್ಞಾನ, ಶೈಕ್ಷಣಿಕ, ತಂತ್ರಜ್ಞಾನ ವಿಷಯಗಳ  ವಸ್ತು ಪ್ರದರ್ಶನಗಳನ್ನು ಮಾಡಿ ನೋಡುಗರ ಕಣ್ಮನ ಸೆಳೆಯಿತು. ಮಕ್ಕಳ ದಸರಾ ಉದ್ಘಾಟಿಸಿದ ಶಿಕ್ಷಣ ಸಚಿವ ಮಧುಬಂಗಾರಪ್ಪ(Madhubangarappa )  ಕಾರ್ಯಕ್ರಮಗಳನ್ನು ನೋಡಿ ಹರ್ಷ ವ್ಯಕ್ತಪಡಿಸಿದ್ರು.. ಜೆ.ಕೆ.ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ದಸರಾ(women dasara) ಕೂಡಾ ಹಲವು ಗ್ರಾಮೀಣ ಕ್ರೀಡೆಗಳಿಂದ ಗಮನ ಸೆಳೆಯಿತು. ರಾಗಿ ಬೀಸುವ ಸ್ಪರ್ಧೆ, ಭತ್ತ ಕುಟ್ಟುವ ಸ್ಪರ್ಧೆ, ಹೂ ಕಟ್ಟುವ ಸ್ಪರ್ಧೆ, ಒಲೆರಹಿತ ಅಡಿಗೆ ಸ್ಪರ್ಧೆ ಹಾಗೂ ವೇಗದ ನಡಿಗೆ ಸ್ಪರ್ಧೆ ಮಹಿಳೆಯರು ಎಂಜಾಯ್ ಮಾಡುವಂತೆ ಮಾಡಿತ್ತು. ಯುವ ದಸರಾಗೆ  ಸ್ಯಾಂಡಲ್‌ವುಡ್ ನಟ, ನಟಿಯರು ಭಾಗವಹಿಸಿ ಮೆರುಗು ನೀಡಿದ್ರು. ಸಾಧು ಕೋಕಿಲ ಅಂಡ್ ಟೀಂ ಯುವ ಮನಸುಗಳನ್ನು ರಂಜಿಸಿದ್ರು. ಇತ್ತ ದಾಸರಾ ಆನೆಗಳ ಮಾವುತರ ಜೊತೆ ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕಾಲ ಕಳೆದ್ರು.. ತಮ್ಮ ಹಳೆಯ ದಿನಗಳ ದಸರಾ ನೆನಪುಗಳನ್ನು ಮೆಲುಕು ಹಾಕಿದ್ರು.

ಇದನ್ನೂ ವೀಕ್ಷಿಸಿ:  ಯುವ ಸಿನಿಮಾಗಾಗಿ ಕಾದು ಕುಂತ ದೊಡ್ಮನೆ ಫ್ಯಾನ್ಸ್! ಸಲಾರ್‌ಗಾಗಿ ಯುವ ರಿಲೀಸ್ ತಡವಾಗುತ್ತಾ..?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?