ಬರಡು ಭೂಮಿಯಲ್ಲಿ ಹಿಮಾಚಲ ಸೇಬು ಬೆಳೆದು  ಸೈ ಎನಿಸಿಕೊಂಡ ಕೋಟೆನಾಡಿನ ಕೃಷಿಕ

ಬರಡು ಭೂಮಿಯಲ್ಲಿ ಹಿಮಾಚಲ ಸೇಬು ಬೆಳೆದು ಸೈ ಎನಿಸಿಕೊಂಡ ಕೋಟೆನಾಡಿನ ಕೃಷಿಕ

Published : Apr 18, 2022, 04:50 PM ISTUpdated : Apr 18, 2022, 05:51 PM IST

 ಕೋಟೆನಾಡು ಚಿತ್ರದುರ್ಗ (Chitradurga) ಅಂದ್ರೆ ಎಲ್ರಿಗೂ ನೆನಪಾಗೋದೆ ಅದೊಂದು ಬರದನಾಡು ಅಂತ. ಕೃಷಿಗೆ ಅದೆಷ್ಟು ಬಂಡವಾಳ ಹಾಕಿದ್ರು ಲಾಭ ಸಿಗಲ್ಲ ಅನ್ನೋದು ಅಲ್ಲಿನ ಹಲವು ರೈತರ ಕೂಗು, ಆದ್ರೆ ಅಲ್ಲೋಬ್ಬ ರೈತ ಬಂಜರು ಭೂಮಿಯಲ್ಲಿ ಬಂಗಾರದಂಥ ಹಿಮಾಚಲದ ಸೇಬು (Himachal Apple)ಬೆಳೆದು ಸೈ ಎನಿಸಿಕೊಂಡಿದ್ದಾನೆ.
 

ಚಿತ್ರದುರ್ಗ  (ಏ. 18): ಕೋಟೆನಾಡು ಚಿತ್ರದುರ್ಗ (Chitradurga) ಅಂದ್ರೆ ಎಲ್ರಿಗೂ ನೆನಪಾಗೋದೆ ಅದೊಂದು ಬರದನಾಡು ಅಂತ. ಕೃಷಿಗೆ ಅದೆಷ್ಟು ಬಂಡವಾಳ ಹಾಕಿದ್ರು ಲಾಭ ಸಿಗಲ್ಲ ಅನ್ನೋದು ಅಲ್ಲಿನ ಹಲವು ರೈತರ ಕೂಗು, ಆದ್ರೆ ಅಲ್ಲೋಬ್ಬ ರೈತ ಬಂಜರು ಭೂಮಿಯಲ್ಲಿ ಬಂಗಾರದಂಥ ಹಿಮಾಚಲದ ಸೇಬು (Himachal Apple)ಬೆಳೆದು ಸೈ ಎನಿಸಿಕೊಂಡಿದ್ದಾನೆ.

ಈ ಸೇಬಿನ ತೋಟ ನೋಡಿ, ಇದ್ಯಾವುದೋ ಹಿಮಾಚಲದ್ದೋ ಅಥವಾ ಕಾಶ್ಮಿರದ್ದೋ ಅನ್ಕೋಬೇಡಿ. ಯಾಕಂದ್ರೆ ಇದು ನಮ್ಮದೇ ರಾಜ್ಯದ ಕೋಟೆ ನಾಡು  ಚಿತ್ರದುರ್ಗ (Chitradurga) ತಾಲ್ಲೂಕಿನ ಗೊಡಬನಾಳ್ ಗ್ರಾಮದ ರೈತ ಜ್ಯೋತಿಪ್ರಕಾಶ್ ಜಮೀನಿನದ್ದು. ವಂಶಪಾರಂಪರ್ಯವಾಗಿ ನಮ್ಮ ಪೂರ್ವಜರು ಅಡಿಕೆ ಬೆಳೆಯನ್ನು ನಂಬಿಕೊಂಡು ಬೆಳೆಯುತ್ತಿದ್ದರು. ಆದ್ರೆ ಇತ್ತೀಚೆಗೆ ಪ್ರತಿಯೊಂದು ಭಾಗದಲ್ಲೂ ಅಡಿಕೆ ಬೆಳೆದಿರೋದ್ರಿಂದ ಮುಂದೆ ಅದಕ್ಕೆ ಭವಿಷ್ಯವಿಲ್ಲವೆಂಬ ಉದ್ದೇಶದಿಂದ ತಮ್ಮದೇ ಜಮೀನಿನಲ್ಲಿ ಸೇಬು ಕೃಷಿ ಮಾಡುವ ಮೂಲಕ ಜಿಲ್ಲೆಯ ರೈತರಲ್ಲಿ ಅಚ್ಚರಿ ಮೂಡಿಸಿದ್ದಾರೆ. 

ತಮ್ಮ 4 ಎಕರೆ ಬರಡು ಭೂಮಿಯಲ್ಲಿ ಬಾಳೆ ಮಧ್ಯೆ ಹಿಮಾಚಲ ಮೂಲದ ಪ್ರಸಿದ್ದ ಅರ್ಬನ್, ಡಾರ್ಸೆಟ್ ಗೋಲ್ಡನ್ ಹಾಗೂ ಅನ್ನಾ ತಳಿಗಳು ಮಾತ್ರ ಎಲ್ಲಾ ಪ್ರದೇಶಗಳಲ್ಲೂ ಬೆಳೆದು ನಿಂತಿವೆ.  ಹಳೆ ಸಾಂಪ್ರದಾಯಿಕ ಬೆಳೆಗಳನ್ನು ಬೆಳೆದು ಕೈ ಸುಟ್ಟುಕೊಂಡಿದ್ದ ಈ ರೈತರು ಸದ್ದಿಲ್ಲದೆ ಹೊಸ ಪ್ರಯೋಗಕ್ಕೆ ಮುಂದಾದ ಪರಿಣಾಮ ಬರದನಾಡು ಚಿತ್ರದುರ್ಗದಲ್ಲೂ ಸೇಬನ್ನು ಬೆಳೆಯಬಹುದು ಎನ್ನುವ ಹೊಸ ಭರವಸೆ ಮೂಡಿಸಿದ್ದಾರೆ.

ಇನ್ನೂ ಗೊಡಬನಾಳ್ ರೈತನ ಈ ಯಶೋಗಾಥೆಯನ್ನು ಕಂಡಂತಹ ಅನೇಕ ರೈತರು ಉತ್ಪ್ರೇಕ್ಷೆಗೆ ಒಳಗಾಗಿದ್ದಾರೆ. ಬಯಲು ಸೀಮೆಯಲ್ಲಿ ಈ ರೀತಿಯ ಬೆಳೆಗಳನ್ನು ಬೆಳೆಯುವುದು ಕಷ್ಟ ಎಂದುಕೊಂಡು ಸುಮ್ಮನಾಗಿದ್ವಿ, ಆದ್ರೆ ನಮ್ಮವರ ಈ ಸಾಧನೆಯನ್ನು ಕಂಡು ಇಂದು ನಾವು ಸೇಬು ಬೆಳೆಯೋದಕ್ಕೆ ಮುಂದಾಗಿದ್ದೇವೆ. ಸದ್ಯಕ್ಕೆ ಉತ್ತಮ ಬೆಳೆ ಬಂದಿದೆ ಅದ್ರಿಂದ ಲಾಭದ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವೆ. ನಮ್ನ ಜಿಲ್ಲೆಯ ರೈತರಲ್ಲಿ ಮನವಿ ಮಾಡ್ಕೊಳ್ಳೋದ್ ಏನಂದ್ರೆ, ಈ ರೀತಿಯ ಬೆಳೆಗಳನ್ನು ನಮ್ಮ ಜಿಲ್ಲೆಯಲ್ಲಿ ಬೆಳಯಲು ನಾವು ಯೋಗ್ಯರಾಗಿದ್ದೀವಿ ನೀವು ಸಹ ಸೇಬು ಬೆಳೆದು ಅನುಕೂಲ ಪಡೆದುಕೊಳ್ಳಿ ಅಂತಾರೆ ರೈತರೊಬ್ಬರು. ಒಟ್ಟಾರೆ  ಬರದನಾಡು ಕೋಟೆನಾಡಿನ ರೈತರು ಹಿಮಾಚಲದ ಸಿಹಿ ಸೇಬನ್ನು ಬೆಳೆದು ಮನಸೊಂದಿದ್ದರೆ ಮಾರ್ಗ ಎಂಬುದನ್ನು ಸಾಧಿಸಿದ್ದಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more