ಬರ ಘೋಷಣೆಯಾದ್ರೂ ಸಿಕ್ಕಿಲ್ಲ ಪರಿಹಾರ: ಜಾನುವಾರುಗಳೊಂದಿಗೆ ಗುಳೆ ಹೊರಟ ಜನ

ಬರ ಘೋಷಣೆಯಾದ್ರೂ ಸಿಕ್ಕಿಲ್ಲ ಪರಿಹಾರ: ಜಾನುವಾರುಗಳೊಂದಿಗೆ ಗುಳೆ ಹೊರಟ ಜನ

Published : Oct 30, 2023, 11:11 AM IST

ಬರಗಾಲ ಎಂಬುದು ರಾಜ್ಯಾದ್ಯಂತ ತಾಂಡವವಾಡ್ತಿದೆ. ಅದ್ರಲ್ಲಂತೂ ಬರಪೀಡಿತ ಜಿಲ್ಲೆ ಎಂಬ ಕುಖ್ಯಾತಿ ಪಡೆದಿರೋ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರು ಬರಕ್ಕೆ ತತ್ತರಿಸಿ ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋಗುವುದಕ್ಕೆ ಶುರು ಮಾಡಿದ್ದಾರೆ.
 

ಮಳೆಯಿಲ್ಲ.. ಬೆಳೆಯಿಲ್ಲ.. ಜಾನುವಾರುಗಲಿಗೆ ಮೇವೂ ಸಿಕ್ತಿಲ್ಲ.. ಸರ್ಕಾರ ಬರ ಘೋಷಣೆಮಾಡಿದ್ರೂ ಪರಿಹಾರ ಕೊಟ್ಟಿಲ್ಲ.. ಏನ್ ಮಾಡೋದು ಎಂದು ಯೋಚಿಸಿದ ಜನ ಈಗ ಊರನ್ನೇ ತೊರೆಯುತ್ತಿದ್ದಾರೆ.. ಜಾನುವಾರುಗಳ ಸಮೇತ ಜನ ಗುಳೆ ಹೊರಟಿದ್ದಾರೆ. ಇದು ಚಿತ್ರದುರ್ಗದಲ್ಲಿ ಕಂಡು ಬಂದ ದೃಶ್ಯ.. ಜಾನುವಾರುಗಳಿಗೆ ಮೇವಿಲ್ಲ.. ನೀರು ಸಿಗುತ್ತಿಲ್ಲ.. ಹೀಗಾಗಿ ಕುರಿ, ಮೇಕೆಗಳ ಜತೆ ಜನ ಊರು ತೊರೆಯುತ್ತಿದ್ದಾರೆ. ಮೊಳಕಾಲ್ಮೂರು, ಚಳ್ಳಕೆರೆ ತಾಲೂಕಿನ ಗಡಿ ಭಾಗದ ಗ್ರಾಮಗಳಲ್ಲಿ ಊರಿಗೆ ಊರೇ ಖಾಲಿಯಾಗುತ್ತಿದೆ, ಈಗಾಗಲೇ ಸರ್ಕಾರ ಚಿತ್ರದುರ್ಗ(Chitradurga) ಜಿಲ್ಲೆಯನ್ನ ಬರಪೀಡಿತ ಎಂದು  ಘೋಷಿಸಿದೆ.. ಆದ್ರೆ, ಬರಪಟ್ಟಿಗೆ ಜಿಲ್ಲೆ ಘೋಷಣೆ ಮಾಡಿದ ಸರ್ಕಾರ(Government) ಇದುವರೆಗೂ ಪರಿಹಾರ ನೀಡಿಲ್ಲ.. ಹೀಗಾಗಿ ಊರು ಬಿಡೋದು ಬಿಟ್ರೆ ಬೇರೆ ಮಾರ್ಗವೇ ಇಲ್ಲ ಎನ್ನುತ್ತಿದ್ದಾರೆ ಇನ್ನೂ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ರನ್ನ ಕೇಳಿದ್ರೆ, ಜಿಲ್ಲೆಯಲ್ಲಿ ಗುಳೆ ಹೋಗ್ತಿರೋ ರೈತರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಇಂದು ಈ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ ಎನ್ನುತ್ತಿದ್ದಾರೆ. ರಾಜ್ಯದಲ್ಲಿ ಈ ಬಾರಿ ಬರಗಾಲ ರೈತರನ್ನು ಹಿಂಡಿ ಹಿಪ್ಪೆ ಮಾಡಿದೆ.. ತಿನ್ನೋಕೆ ಅನ್ನ ಹೋಗ್ಲಿ ರೈತರಿಗೆ ಆಧಾರವಾಗಿದ್ದ ಜಾನುವಾರುಗಳಿಗೆ ಮೇವು ಕೂಡ ಸಿಕ್ತಿಲ್ಲ. ಬರ ಘೋಷಣೆ ಮಾಡಿದ ಸರ್ಕಾರ ಆದಷ್ಟು ಬೇಗ ಪರಿಹಾರ ನೀಡಿ ರೈತರನ್ನು ಕಾಪಾಡಬೇಕಿದೆ.

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು 2023: ಸಾಧನೆಗೈದ ಹಲವರಿಗೆ ಪ್ರಶಸ್ತಿ ಪ್ರದಾನ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more