ಬರ ಘೋಷಣೆಯಾದ್ರೂ ಸಿಕ್ಕಿಲ್ಲ ಪರಿಹಾರ: ಜಾನುವಾರುಗಳೊಂದಿಗೆ ಗುಳೆ ಹೊರಟ ಜನ

ಬರ ಘೋಷಣೆಯಾದ್ರೂ ಸಿಕ್ಕಿಲ್ಲ ಪರಿಹಾರ: ಜಾನುವಾರುಗಳೊಂದಿಗೆ ಗುಳೆ ಹೊರಟ ಜನ

Published : Oct 30, 2023, 11:11 AM IST

ಬರಗಾಲ ಎಂಬುದು ರಾಜ್ಯಾದ್ಯಂತ ತಾಂಡವವಾಡ್ತಿದೆ. ಅದ್ರಲ್ಲಂತೂ ಬರಪೀಡಿತ ಜಿಲ್ಲೆ ಎಂಬ ಕುಖ್ಯಾತಿ ಪಡೆದಿರೋ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರು ಬರಕ್ಕೆ ತತ್ತರಿಸಿ ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋಗುವುದಕ್ಕೆ ಶುರು ಮಾಡಿದ್ದಾರೆ.
 

ಮಳೆಯಿಲ್ಲ.. ಬೆಳೆಯಿಲ್ಲ.. ಜಾನುವಾರುಗಲಿಗೆ ಮೇವೂ ಸಿಕ್ತಿಲ್ಲ.. ಸರ್ಕಾರ ಬರ ಘೋಷಣೆಮಾಡಿದ್ರೂ ಪರಿಹಾರ ಕೊಟ್ಟಿಲ್ಲ.. ಏನ್ ಮಾಡೋದು ಎಂದು ಯೋಚಿಸಿದ ಜನ ಈಗ ಊರನ್ನೇ ತೊರೆಯುತ್ತಿದ್ದಾರೆ.. ಜಾನುವಾರುಗಳ ಸಮೇತ ಜನ ಗುಳೆ ಹೊರಟಿದ್ದಾರೆ. ಇದು ಚಿತ್ರದುರ್ಗದಲ್ಲಿ ಕಂಡು ಬಂದ ದೃಶ್ಯ.. ಜಾನುವಾರುಗಳಿಗೆ ಮೇವಿಲ್ಲ.. ನೀರು ಸಿಗುತ್ತಿಲ್ಲ.. ಹೀಗಾಗಿ ಕುರಿ, ಮೇಕೆಗಳ ಜತೆ ಜನ ಊರು ತೊರೆಯುತ್ತಿದ್ದಾರೆ. ಮೊಳಕಾಲ್ಮೂರು, ಚಳ್ಳಕೆರೆ ತಾಲೂಕಿನ ಗಡಿ ಭಾಗದ ಗ್ರಾಮಗಳಲ್ಲಿ ಊರಿಗೆ ಊರೇ ಖಾಲಿಯಾಗುತ್ತಿದೆ, ಈಗಾಗಲೇ ಸರ್ಕಾರ ಚಿತ್ರದುರ್ಗ(Chitradurga) ಜಿಲ್ಲೆಯನ್ನ ಬರಪೀಡಿತ ಎಂದು  ಘೋಷಿಸಿದೆ.. ಆದ್ರೆ, ಬರಪಟ್ಟಿಗೆ ಜಿಲ್ಲೆ ಘೋಷಣೆ ಮಾಡಿದ ಸರ್ಕಾರ(Government) ಇದುವರೆಗೂ ಪರಿಹಾರ ನೀಡಿಲ್ಲ.. ಹೀಗಾಗಿ ಊರು ಬಿಡೋದು ಬಿಟ್ರೆ ಬೇರೆ ಮಾರ್ಗವೇ ಇಲ್ಲ ಎನ್ನುತ್ತಿದ್ದಾರೆ ಇನ್ನೂ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ರನ್ನ ಕೇಳಿದ್ರೆ, ಜಿಲ್ಲೆಯಲ್ಲಿ ಗುಳೆ ಹೋಗ್ತಿರೋ ರೈತರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಇಂದು ಈ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ ಎನ್ನುತ್ತಿದ್ದಾರೆ. ರಾಜ್ಯದಲ್ಲಿ ಈ ಬಾರಿ ಬರಗಾಲ ರೈತರನ್ನು ಹಿಂಡಿ ಹಿಪ್ಪೆ ಮಾಡಿದೆ.. ತಿನ್ನೋಕೆ ಅನ್ನ ಹೋಗ್ಲಿ ರೈತರಿಗೆ ಆಧಾರವಾಗಿದ್ದ ಜಾನುವಾರುಗಳಿಗೆ ಮೇವು ಕೂಡ ಸಿಕ್ತಿಲ್ಲ. ಬರ ಘೋಷಣೆ ಮಾಡಿದ ಸರ್ಕಾರ ಆದಷ್ಟು ಬೇಗ ಪರಿಹಾರ ನೀಡಿ ರೈತರನ್ನು ಕಾಪಾಡಬೇಕಿದೆ.

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು 2023: ಸಾಧನೆಗೈದ ಹಲವರಿಗೆ ಪ್ರಶಸ್ತಿ ಪ್ರದಾನ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more