ಬರ ಘೋಷಣೆಯಾದ್ರೂ ಸಿಕ್ಕಿಲ್ಲ ಪರಿಹಾರ: ಜಾನುವಾರುಗಳೊಂದಿಗೆ ಗುಳೆ ಹೊರಟ ಜನ

ಬರ ಘೋಷಣೆಯಾದ್ರೂ ಸಿಕ್ಕಿಲ್ಲ ಪರಿಹಾರ: ಜಾನುವಾರುಗಳೊಂದಿಗೆ ಗುಳೆ ಹೊರಟ ಜನ

Published : Oct 30, 2023, 11:11 AM IST

ಬರಗಾಲ ಎಂಬುದು ರಾಜ್ಯಾದ್ಯಂತ ತಾಂಡವವಾಡ್ತಿದೆ. ಅದ್ರಲ್ಲಂತೂ ಬರಪೀಡಿತ ಜಿಲ್ಲೆ ಎಂಬ ಕುಖ್ಯಾತಿ ಪಡೆದಿರೋ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರು ಬರಕ್ಕೆ ತತ್ತರಿಸಿ ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋಗುವುದಕ್ಕೆ ಶುರು ಮಾಡಿದ್ದಾರೆ.
 

ಮಳೆಯಿಲ್ಲ.. ಬೆಳೆಯಿಲ್ಲ.. ಜಾನುವಾರುಗಲಿಗೆ ಮೇವೂ ಸಿಕ್ತಿಲ್ಲ.. ಸರ್ಕಾರ ಬರ ಘೋಷಣೆಮಾಡಿದ್ರೂ ಪರಿಹಾರ ಕೊಟ್ಟಿಲ್ಲ.. ಏನ್ ಮಾಡೋದು ಎಂದು ಯೋಚಿಸಿದ ಜನ ಈಗ ಊರನ್ನೇ ತೊರೆಯುತ್ತಿದ್ದಾರೆ.. ಜಾನುವಾರುಗಳ ಸಮೇತ ಜನ ಗುಳೆ ಹೊರಟಿದ್ದಾರೆ. ಇದು ಚಿತ್ರದುರ್ಗದಲ್ಲಿ ಕಂಡು ಬಂದ ದೃಶ್ಯ.. ಜಾನುವಾರುಗಳಿಗೆ ಮೇವಿಲ್ಲ.. ನೀರು ಸಿಗುತ್ತಿಲ್ಲ.. ಹೀಗಾಗಿ ಕುರಿ, ಮೇಕೆಗಳ ಜತೆ ಜನ ಊರು ತೊರೆಯುತ್ತಿದ್ದಾರೆ. ಮೊಳಕಾಲ್ಮೂರು, ಚಳ್ಳಕೆರೆ ತಾಲೂಕಿನ ಗಡಿ ಭಾಗದ ಗ್ರಾಮಗಳಲ್ಲಿ ಊರಿಗೆ ಊರೇ ಖಾಲಿಯಾಗುತ್ತಿದೆ, ಈಗಾಗಲೇ ಸರ್ಕಾರ ಚಿತ್ರದುರ್ಗ(Chitradurga) ಜಿಲ್ಲೆಯನ್ನ ಬರಪೀಡಿತ ಎಂದು  ಘೋಷಿಸಿದೆ.. ಆದ್ರೆ, ಬರಪಟ್ಟಿಗೆ ಜಿಲ್ಲೆ ಘೋಷಣೆ ಮಾಡಿದ ಸರ್ಕಾರ(Government) ಇದುವರೆಗೂ ಪರಿಹಾರ ನೀಡಿಲ್ಲ.. ಹೀಗಾಗಿ ಊರು ಬಿಡೋದು ಬಿಟ್ರೆ ಬೇರೆ ಮಾರ್ಗವೇ ಇಲ್ಲ ಎನ್ನುತ್ತಿದ್ದಾರೆ ಇನ್ನೂ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ರನ್ನ ಕೇಳಿದ್ರೆ, ಜಿಲ್ಲೆಯಲ್ಲಿ ಗುಳೆ ಹೋಗ್ತಿರೋ ರೈತರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಇಂದು ಈ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ ಎನ್ನುತ್ತಿದ್ದಾರೆ. ರಾಜ್ಯದಲ್ಲಿ ಈ ಬಾರಿ ಬರಗಾಲ ರೈತರನ್ನು ಹಿಂಡಿ ಹಿಪ್ಪೆ ಮಾಡಿದೆ.. ತಿನ್ನೋಕೆ ಅನ್ನ ಹೋಗ್ಲಿ ರೈತರಿಗೆ ಆಧಾರವಾಗಿದ್ದ ಜಾನುವಾರುಗಳಿಗೆ ಮೇವು ಕೂಡ ಸಿಕ್ತಿಲ್ಲ. ಬರ ಘೋಷಣೆ ಮಾಡಿದ ಸರ್ಕಾರ ಆದಷ್ಟು ಬೇಗ ಪರಿಹಾರ ನೀಡಿ ರೈತರನ್ನು ಕಾಪಾಡಬೇಕಿದೆ.

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು 2023: ಸಾಧನೆಗೈದ ಹಲವರಿಗೆ ಪ್ರಶಸ್ತಿ ಪ್ರದಾನ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more