ಬರ ಘೋಷಣೆಯಾದ್ರೂ ಸಿಕ್ಕಿಲ್ಲ ಪರಿಹಾರ: ಜಾನುವಾರುಗಳೊಂದಿಗೆ ಗುಳೆ ಹೊರಟ ಜನ

ಬರ ಘೋಷಣೆಯಾದ್ರೂ ಸಿಕ್ಕಿಲ್ಲ ಪರಿಹಾರ: ಜಾನುವಾರುಗಳೊಂದಿಗೆ ಗುಳೆ ಹೊರಟ ಜನ

Published : Oct 30, 2023, 11:11 AM IST

ಬರಗಾಲ ಎಂಬುದು ರಾಜ್ಯಾದ್ಯಂತ ತಾಂಡವವಾಡ್ತಿದೆ. ಅದ್ರಲ್ಲಂತೂ ಬರಪೀಡಿತ ಜಿಲ್ಲೆ ಎಂಬ ಕುಖ್ಯಾತಿ ಪಡೆದಿರೋ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರು ಬರಕ್ಕೆ ತತ್ತರಿಸಿ ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋಗುವುದಕ್ಕೆ ಶುರು ಮಾಡಿದ್ದಾರೆ.
 

ಮಳೆಯಿಲ್ಲ.. ಬೆಳೆಯಿಲ್ಲ.. ಜಾನುವಾರುಗಲಿಗೆ ಮೇವೂ ಸಿಕ್ತಿಲ್ಲ.. ಸರ್ಕಾರ ಬರ ಘೋಷಣೆಮಾಡಿದ್ರೂ ಪರಿಹಾರ ಕೊಟ್ಟಿಲ್ಲ.. ಏನ್ ಮಾಡೋದು ಎಂದು ಯೋಚಿಸಿದ ಜನ ಈಗ ಊರನ್ನೇ ತೊರೆಯುತ್ತಿದ್ದಾರೆ.. ಜಾನುವಾರುಗಳ ಸಮೇತ ಜನ ಗುಳೆ ಹೊರಟಿದ್ದಾರೆ. ಇದು ಚಿತ್ರದುರ್ಗದಲ್ಲಿ ಕಂಡು ಬಂದ ದೃಶ್ಯ.. ಜಾನುವಾರುಗಳಿಗೆ ಮೇವಿಲ್ಲ.. ನೀರು ಸಿಗುತ್ತಿಲ್ಲ.. ಹೀಗಾಗಿ ಕುರಿ, ಮೇಕೆಗಳ ಜತೆ ಜನ ಊರು ತೊರೆಯುತ್ತಿದ್ದಾರೆ. ಮೊಳಕಾಲ್ಮೂರು, ಚಳ್ಳಕೆರೆ ತಾಲೂಕಿನ ಗಡಿ ಭಾಗದ ಗ್ರಾಮಗಳಲ್ಲಿ ಊರಿಗೆ ಊರೇ ಖಾಲಿಯಾಗುತ್ತಿದೆ, ಈಗಾಗಲೇ ಸರ್ಕಾರ ಚಿತ್ರದುರ್ಗ(Chitradurga) ಜಿಲ್ಲೆಯನ್ನ ಬರಪೀಡಿತ ಎಂದು  ಘೋಷಿಸಿದೆ.. ಆದ್ರೆ, ಬರಪಟ್ಟಿಗೆ ಜಿಲ್ಲೆ ಘೋಷಣೆ ಮಾಡಿದ ಸರ್ಕಾರ(Government) ಇದುವರೆಗೂ ಪರಿಹಾರ ನೀಡಿಲ್ಲ.. ಹೀಗಾಗಿ ಊರು ಬಿಡೋದು ಬಿಟ್ರೆ ಬೇರೆ ಮಾರ್ಗವೇ ಇಲ್ಲ ಎನ್ನುತ್ತಿದ್ದಾರೆ ಇನ್ನೂ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ರನ್ನ ಕೇಳಿದ್ರೆ, ಜಿಲ್ಲೆಯಲ್ಲಿ ಗುಳೆ ಹೋಗ್ತಿರೋ ರೈತರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಇಂದು ಈ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ ಎನ್ನುತ್ತಿದ್ದಾರೆ. ರಾಜ್ಯದಲ್ಲಿ ಈ ಬಾರಿ ಬರಗಾಲ ರೈತರನ್ನು ಹಿಂಡಿ ಹಿಪ್ಪೆ ಮಾಡಿದೆ.. ತಿನ್ನೋಕೆ ಅನ್ನ ಹೋಗ್ಲಿ ರೈತರಿಗೆ ಆಧಾರವಾಗಿದ್ದ ಜಾನುವಾರುಗಳಿಗೆ ಮೇವು ಕೂಡ ಸಿಕ್ತಿಲ್ಲ. ಬರ ಘೋಷಣೆ ಮಾಡಿದ ಸರ್ಕಾರ ಆದಷ್ಟು ಬೇಗ ಪರಿಹಾರ ನೀಡಿ ರೈತರನ್ನು ಕಾಪಾಡಬೇಕಿದೆ.

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು 2023: ಸಾಧನೆಗೈದ ಹಲವರಿಗೆ ಪ್ರಶಸ್ತಿ ಪ್ರದಾನ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more