Chitradurga: ಪ್ರಧಾನಿ ಮೋದಿ ಟ್ವೀಟ್‌ ಎಫೆಕ್ಟ್,  ಓಬವ್ವ ಸಮಾಧಿ ಕಾಮಗಾರಿ ಶುರು

Chitradurga: ಪ್ರಧಾನಿ ಮೋದಿ ಟ್ವೀಟ್‌ ಎಫೆಕ್ಟ್, ಓಬವ್ವ ಸಮಾಧಿ ಕಾಮಗಾರಿ ಶುರು

Suvarna News   | Asianet News
Published : Jan 04, 2022, 04:24 PM ISTUpdated : Jan 04, 2022, 04:39 PM IST

 ಕೋಟೆನಾಡು ಅಂದ್ರೆ ಎಲ್ರಿಗೂ ನೆನಪಾಗೋದು ಏಳುಸುತ್ತಿನ ಕಲ್ಲಿನಕೋಟೆ (Chitradurga) ಆ ಕೋಟೆ ರಕ್ಷಿಸಿದ ವೀರವನಿತೆ ಒನಕೆ ಓಬವ್ವ (Onake Obavva) ಆದ್ರೆ ಆ ಮಹಾತಾಯಿಯ ಸಮಾಧಿ ಸ್ಥಳದಲ್ಲಿ ಸ್ಮಾರಕ (Monument) ನಿರ್ಮಾಣ ಕನಸು ನನಸಾಗುವ‌ ದಿನ ಸನಿಹವಾಗಿದೆ. 
 

ಚಿತ್ರದುರ್ಗ (ಜ. 04): ಕೋಟೆನಾಡು ಅಂದ್ರೆ ಎಲ್ರಿಗೂ ನೆನಪಾಗೋದು ಏಳುಸುತ್ತಿನ ಕಲ್ಲಿನಕೋಟೆ (Chitradurga) ಆ ಕೋಟೆ ರಕ್ಷಿಸಿದ ವೀರವನಿತೆ ಒನಕೆ ಓಬವ್ವ (Onake Obavva) ಆದ್ರೆ ಆ ಮಹಾತಾಯಿಯ ಸಮಾಧಿ ಸ್ಥಳದಲ್ಲಿ ಸ್ಮಾರಕ (Monument) ನಿರ್ಮಾಣ ಮಾಡಬೇಕೆನ್ನುವ ಕನಸು ನನಸಾಗುವ‌ ದಿನ ಸನಿಹವಾಗಿದೆ. 

ಚಿತ್ರದುರ್ಗದ ಕಲ್ಲಿನ ಕೋಟೆ., ಸಿಡಿಲಿಗೂ ಬೆಚ್ಚದ ಉಕ್ಕಿನ ಕೋಟೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..! ಮದಿಸಿದ ಆನೆಯ ಮದವನ್ನಡಗಿಸಿ ಕೆಚ್ಚೆದೆಯ ಪಾಳೆಗಾರ ಎನಿಸಿದ್ದ ಮದಕರಿ ನಾಯಕನ ಅಧಿಕಾರದ ಅವಧಿಯಲ್ಲಿ  ಹೈದರಾಲಿಯ ಸೈನಿಕರೊಂದಿಗೆ ಏಕಾಂಗಿಯಾಗಿ ಸೆಣಸಾಡಿ ಕೋಟೆಯನ್ನು ಸಂರಕ್ಷಿಸಿ, ಶತ್ರುಗಳ ಕುತಂತ್ರಕ್ಕೆ ಬಲಿಯಾದ  ವೀರವನಿತೆ ಒನಕೆ ಓಬವ್ವಳ ಸಾಹಸ ಇಡೀ ನಾಡಿಗೆ ಸ್ಪೂರ್ತಿದಾಯಕ. ಹೀಗಾಗಿ ಆ ವೀರನಾರಿಯ ವಂಶಸ್ಥರು ಹಾಗೂ ಅಭಿಮಾನಿಗಳು ಹಲವು ದಶಕಗಳಿಂದ ಗೌರವಪೂರ್ವಕವಾಗಿ ಕೋಟೆಯಲ್ಲಿರುವ ಸಮಾಧಿಯ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡುವಂತೆ ಆಗ್ರಹಿಸಿ ಹೋರಾಟ ನಡೆಸಿದ್ರೂ ಕೂಡ  ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ತಿಂಗಳು ಒನಕೆ ಓಬವ್ವನ ಜಯಂತಿಯಂದು ಶುಭ ಹಾರೈಸಿದ್ದೇ ತಡ, ಹಲವು ದಶಕಗಳ ಹೋರಾಟಕ್ಕೆ ದಿಢೀರ್ ಅಂತ ಫಲ ಸಿಕ್ಕಿದೆ. 

ಆ ಮೂಲಕ ಚಿತ್ರದುರ್ಗದ ಕೋಟೆಯಲ್ಲಿ ಓಬವ್ವ ಸಮಾಧಿಯ ಸ್ಮಾರಕ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಕಳೆದ 15ದಿನಗಳಿಂದ ಸ್ಮಾರಕದ ಕಾಮಗಾರಿ ಭರದಿಂದ ಸಾಗಿದ್ದು, ಕೇಂದ್ರ ಪುರಾತತ್ವ ಇಲಾಖೆ ಹಾಗೂ ರಾಜ್ಯ ಸರ್ಕಾರ ವಿನಾಶದ ಅಂಚಿಗೆ ತಲುಪಿದ್ದ ಸಮಾಧಿಯನ್ನು ಬೃಹತ್ ಸ್ಮಾರಕವಾಗಿ ಅಭಿವೃದ್ಧಿ ಪಡಿಸುತ್ತಿದೆ. ಹೀಗಾಗಿ ಇಷ್ಟು ದಿನ ಹಾಳಾಗಿ ವಿನಾಶದ ಅಂಚಿಗೆ ತಲುಪಿದ್ದ ಓಬವ್ವನ ಸ್ಮಾರಕ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿ ಹೊರಹೊಮ್ಮಲಿದೆ.

ಇನ್ನು ಒನಕೆ ಓಬವ್ವಳ ವಂಶಸ್ಥರು ಹಾಗೂ ಸ್ಥಳೀಯ ಹೋರಾಟಗಾರರು ದಶಕಗಳಿಂದ ನಿರಂತರವಾಗಿ ಹೋರಾಟ ಮಾಡಿದ ಪ್ರತಿಫಲವಾಗಿ ಚಿತ್ರದುರ್ಗದಲ್ಲಿ ಸ್ಮಾರಕ ಅಭಿವೃದ್ಧಿಗೆ ಮುಂದಾಗಿರುವುದಕ್ಕೆ ಕೋಟೆನಾಡಿನಾದ್ಯಂತ ಸಂತಸ ವ್ಯಕ್ತವಾಗಿದೆ. ಜೊತೆಗೆ ನಾಡಿನ ಯುವತಿಯರಿಗೆ‌ ಹಾಗು ಮಹಿಳೆಯರಿಗೆ ಸ್ಪೂರ್ತಿದಾಯಕ ಎನಿಸಿದ್ದೂ ಧೈರ್ಯದ ಪ್ರತೀಕವಾಗಿದ್ದ ಒನಕೆ ಓಬವ್ವಳ ಸ್ಮಾರಕವನ್ನು ಜೀವಂತವಾಗಿಡಲು ಪ್ರಯತ್ನ ನಡೆದಿರುವುದು ಎಲ್ಲರಲ್ಲೂ ಬಾರಿ  ಸಂತಸ ಮೂಡಿಸಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more