Chitradurga: ಎರಡ್ಮೂರು ವರ್ಷಗಳಿಂದ ರೈತರಿಗೆ ತಲುಪದ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆ

Chitradurga: ಎರಡ್ಮೂರು ವರ್ಷಗಳಿಂದ ರೈತರಿಗೆ ತಲುಪದ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆ

Published : Mar 04, 2022, 05:08 PM ISTUpdated : Mar 04, 2022, 05:47 PM IST

ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆಗಳನ್ನ‌ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ  ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ‌ ಕೇಳಿ ಬಂದಿದೆ. 
 

ಚಿತ್ರದುರ್ಗ (ಮಾ. 04):  ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆಗಳನ್ನ‌ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ  ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ‌ ಕೇಳಿ ಬಂದಿದೆ. 

 ಕಳೆದ ಎರಡ್ಮೂರು ವರ್ಷಗಳಿಂದಲೂ ಚಳ್ಳಕೆರೆ ತಾಲ್ಲೂಕಿನ ಗಡಿಭಾಗದಲ್ಲಿರೋ ಸೊಂಡೆಕೆರೆ ಗ್ರಾಮದ ರೈತರಿಗೆ ಯಾವುದೇ ಬೆಳೆ ವಿಮೆ ಜಮಾ ಆಗ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಸುತ್ತಮುತ್ತಲಿನ ಎಲ್ಲಾ ಗ್ರಾಮದ ರೈತರಿಗೆ ಫಸಲ್ ಭೀಮಾ ಯೋಜನೆ ಹಣ ಹಾಗೂ ಬೆಳೆ ವಿಮೆ ತಲುಪಿದೆ. ಆದ್ರೆ ನಮ್ಮ ಗ್ರಾಮದ ಜನರಿಗೆ ಯಾಕೆ ಅಧಿಕಾರಿಗಳು ತಾರತಮ್ಯ ಮಾಡ್ತಿದ್ದಾರೆ, ಹೀಗೆ ಮುಂದುವರೆದ್ರೆ ಮುಂದಿನ‌ ದಿನಗಳಲ್ಲಿ ನಾವು ಡಿಸಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

ಇನ್ನೂ ಈ ಬಗ್ಗೆ ಕೃಷಿ ಸಚಿವರಾದ ಬಿ.ಸಿ ಪಾಟೀಲ್ ಅವರನ್ನೇ ವಿಚಾರಿಸಿದ್ರೆ, ಆ ರೀತಿ ಎಲ್ಲೂ ಆಗಿಲ್ಲ, ಮೀಟಿಂಗ್ ಮಾಡಿದ್ದೇನೆ. 75 ಕೋಟಿ ಈ ತಿಂಗಳು ಬಿದ್ದಿದೆ. ಹಂತ ಹಂತವಾಗಿ ಎಲ್ಲಾ ರೈತರಿಗೂ ಫಸಲ್ ಭೀಮಾ ಯೋಜನೆ ತಲುಪಲಿದೆ. ಆ ರೀತಿ ಒಂದೇ ಗ್ರಾಮಕ್ಕೆ ಸಮಸ್ಯೆ ಆಗ್ತಿದೆ ಅದರ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

 ಒಟ್ನಲ್ಲಿ ರೈತರಿಗೆ ಅನುಕೂಲ ಆಗಲಿಕ್ಕೆ ಸರ್ಕಾರ ಹಲವು ಯೋಜನೆಗಳು ತಂದಿದ್ರೂ ರೈತರಿಗೆ ಸರಿಯಾಗಿ ತಲುಪುತ್ತಿಲ್ಲವಲ್ಲ ಎಂಬ ಬೇಸರ ಎಲ್ಲರಲ್ಲಿ ಮನೆ ಮಾಡಿದೆ. ಕೂಡಲೇ ಇದಕ್ಕೆ ನಾಂದಿ ಹಾಡಿ ರೈತರಿಗೆ ಅನುಕೂಲ‌ ವಾಗುವಂತೆ ಅಧಿಕಾರಿಗಳು ಆಡಳಿತ ನಡೆಸಲಿ ಎಂಬುದು ನಮ್ಮ ಆಶಯ.
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more