Chitradurga: ಎರಡ್ಮೂರು ವರ್ಷಗಳಿಂದ ರೈತರಿಗೆ ತಲುಪದ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆ

Chitradurga: ಎರಡ್ಮೂರು ವರ್ಷಗಳಿಂದ ರೈತರಿಗೆ ತಲುಪದ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆ

Published : Mar 04, 2022, 05:08 PM ISTUpdated : Mar 04, 2022, 05:47 PM IST

ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆಗಳನ್ನ‌ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ  ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ‌ ಕೇಳಿ ಬಂದಿದೆ. 
 

ಚಿತ್ರದುರ್ಗ (ಮಾ. 04):  ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆಗಳನ್ನ‌ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ  ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ‌ ಕೇಳಿ ಬಂದಿದೆ. 

 ಕಳೆದ ಎರಡ್ಮೂರು ವರ್ಷಗಳಿಂದಲೂ ಚಳ್ಳಕೆರೆ ತಾಲ್ಲೂಕಿನ ಗಡಿಭಾಗದಲ್ಲಿರೋ ಸೊಂಡೆಕೆರೆ ಗ್ರಾಮದ ರೈತರಿಗೆ ಯಾವುದೇ ಬೆಳೆ ವಿಮೆ ಜಮಾ ಆಗ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಸುತ್ತಮುತ್ತಲಿನ ಎಲ್ಲಾ ಗ್ರಾಮದ ರೈತರಿಗೆ ಫಸಲ್ ಭೀಮಾ ಯೋಜನೆ ಹಣ ಹಾಗೂ ಬೆಳೆ ವಿಮೆ ತಲುಪಿದೆ. ಆದ್ರೆ ನಮ್ಮ ಗ್ರಾಮದ ಜನರಿಗೆ ಯಾಕೆ ಅಧಿಕಾರಿಗಳು ತಾರತಮ್ಯ ಮಾಡ್ತಿದ್ದಾರೆ, ಹೀಗೆ ಮುಂದುವರೆದ್ರೆ ಮುಂದಿನ‌ ದಿನಗಳಲ್ಲಿ ನಾವು ಡಿಸಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

ಇನ್ನೂ ಈ ಬಗ್ಗೆ ಕೃಷಿ ಸಚಿವರಾದ ಬಿ.ಸಿ ಪಾಟೀಲ್ ಅವರನ್ನೇ ವಿಚಾರಿಸಿದ್ರೆ, ಆ ರೀತಿ ಎಲ್ಲೂ ಆಗಿಲ್ಲ, ಮೀಟಿಂಗ್ ಮಾಡಿದ್ದೇನೆ. 75 ಕೋಟಿ ಈ ತಿಂಗಳು ಬಿದ್ದಿದೆ. ಹಂತ ಹಂತವಾಗಿ ಎಲ್ಲಾ ರೈತರಿಗೂ ಫಸಲ್ ಭೀಮಾ ಯೋಜನೆ ತಲುಪಲಿದೆ. ಆ ರೀತಿ ಒಂದೇ ಗ್ರಾಮಕ್ಕೆ ಸಮಸ್ಯೆ ಆಗ್ತಿದೆ ಅದರ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

 ಒಟ್ನಲ್ಲಿ ರೈತರಿಗೆ ಅನುಕೂಲ ಆಗಲಿಕ್ಕೆ ಸರ್ಕಾರ ಹಲವು ಯೋಜನೆಗಳು ತಂದಿದ್ರೂ ರೈತರಿಗೆ ಸರಿಯಾಗಿ ತಲುಪುತ್ತಿಲ್ಲವಲ್ಲ ಎಂಬ ಬೇಸರ ಎಲ್ಲರಲ್ಲಿ ಮನೆ ಮಾಡಿದೆ. ಕೂಡಲೇ ಇದಕ್ಕೆ ನಾಂದಿ ಹಾಡಿ ರೈತರಿಗೆ ಅನುಕೂಲ‌ ವಾಗುವಂತೆ ಅಧಿಕಾರಿಗಳು ಆಡಳಿತ ನಡೆಸಲಿ ಎಂಬುದು ನಮ್ಮ ಆಶಯ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more