Chitradurga: ಎರಡ್ಮೂರು ವರ್ಷಗಳಿಂದ ರೈತರಿಗೆ ತಲುಪದ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆ

Chitradurga: ಎರಡ್ಮೂರು ವರ್ಷಗಳಿಂದ ರೈತರಿಗೆ ತಲುಪದ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆ

Published : Mar 04, 2022, 05:08 PM ISTUpdated : Mar 04, 2022, 05:47 PM IST

ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆಗಳನ್ನ‌ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ  ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ‌ ಕೇಳಿ ಬಂದಿದೆ. 
 

ಚಿತ್ರದುರ್ಗ (ಮಾ. 04):  ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆಗಳನ್ನ‌ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ  ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ‌ ಕೇಳಿ ಬಂದಿದೆ. 

 ಕಳೆದ ಎರಡ್ಮೂರು ವರ್ಷಗಳಿಂದಲೂ ಚಳ್ಳಕೆರೆ ತಾಲ್ಲೂಕಿನ ಗಡಿಭಾಗದಲ್ಲಿರೋ ಸೊಂಡೆಕೆರೆ ಗ್ರಾಮದ ರೈತರಿಗೆ ಯಾವುದೇ ಬೆಳೆ ವಿಮೆ ಜಮಾ ಆಗ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಸುತ್ತಮುತ್ತಲಿನ ಎಲ್ಲಾ ಗ್ರಾಮದ ರೈತರಿಗೆ ಫಸಲ್ ಭೀಮಾ ಯೋಜನೆ ಹಣ ಹಾಗೂ ಬೆಳೆ ವಿಮೆ ತಲುಪಿದೆ. ಆದ್ರೆ ನಮ್ಮ ಗ್ರಾಮದ ಜನರಿಗೆ ಯಾಕೆ ಅಧಿಕಾರಿಗಳು ತಾರತಮ್ಯ ಮಾಡ್ತಿದ್ದಾರೆ, ಹೀಗೆ ಮುಂದುವರೆದ್ರೆ ಮುಂದಿನ‌ ದಿನಗಳಲ್ಲಿ ನಾವು ಡಿಸಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

ಇನ್ನೂ ಈ ಬಗ್ಗೆ ಕೃಷಿ ಸಚಿವರಾದ ಬಿ.ಸಿ ಪಾಟೀಲ್ ಅವರನ್ನೇ ವಿಚಾರಿಸಿದ್ರೆ, ಆ ರೀತಿ ಎಲ್ಲೂ ಆಗಿಲ್ಲ, ಮೀಟಿಂಗ್ ಮಾಡಿದ್ದೇನೆ. 75 ಕೋಟಿ ಈ ತಿಂಗಳು ಬಿದ್ದಿದೆ. ಹಂತ ಹಂತವಾಗಿ ಎಲ್ಲಾ ರೈತರಿಗೂ ಫಸಲ್ ಭೀಮಾ ಯೋಜನೆ ತಲುಪಲಿದೆ. ಆ ರೀತಿ ಒಂದೇ ಗ್ರಾಮಕ್ಕೆ ಸಮಸ್ಯೆ ಆಗ್ತಿದೆ ಅದರ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

 ಒಟ್ನಲ್ಲಿ ರೈತರಿಗೆ ಅನುಕೂಲ ಆಗಲಿಕ್ಕೆ ಸರ್ಕಾರ ಹಲವು ಯೋಜನೆಗಳು ತಂದಿದ್ರೂ ರೈತರಿಗೆ ಸರಿಯಾಗಿ ತಲುಪುತ್ತಿಲ್ಲವಲ್ಲ ಎಂಬ ಬೇಸರ ಎಲ್ಲರಲ್ಲಿ ಮನೆ ಮಾಡಿದೆ. ಕೂಡಲೇ ಇದಕ್ಕೆ ನಾಂದಿ ಹಾಡಿ ರೈತರಿಗೆ ಅನುಕೂಲ‌ ವಾಗುವಂತೆ ಅಧಿಕಾರಿಗಳು ಆಡಳಿತ ನಡೆಸಲಿ ಎಂಬುದು ನಮ್ಮ ಆಶಯ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more