Chitradurga: ಎರಡ್ಮೂರು ವರ್ಷಗಳಿಂದ ರೈತರಿಗೆ ತಲುಪದ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆ

Chitradurga: ಎರಡ್ಮೂರು ವರ್ಷಗಳಿಂದ ರೈತರಿಗೆ ತಲುಪದ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆ

Published : Mar 04, 2022, 05:08 PM ISTUpdated : Mar 04, 2022, 05:47 PM IST

ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆಗಳನ್ನ‌ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ  ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ‌ ಕೇಳಿ ಬಂದಿದೆ. 
 

ಚಿತ್ರದುರ್ಗ (ಮಾ. 04):  ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆಗಳನ್ನ‌ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ  ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ‌ ಕೇಳಿ ಬಂದಿದೆ. 

 ಕಳೆದ ಎರಡ್ಮೂರು ವರ್ಷಗಳಿಂದಲೂ ಚಳ್ಳಕೆರೆ ತಾಲ್ಲೂಕಿನ ಗಡಿಭಾಗದಲ್ಲಿರೋ ಸೊಂಡೆಕೆರೆ ಗ್ರಾಮದ ರೈತರಿಗೆ ಯಾವುದೇ ಬೆಳೆ ವಿಮೆ ಜಮಾ ಆಗ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಸುತ್ತಮುತ್ತಲಿನ ಎಲ್ಲಾ ಗ್ರಾಮದ ರೈತರಿಗೆ ಫಸಲ್ ಭೀಮಾ ಯೋಜನೆ ಹಣ ಹಾಗೂ ಬೆಳೆ ವಿಮೆ ತಲುಪಿದೆ. ಆದ್ರೆ ನಮ್ಮ ಗ್ರಾಮದ ಜನರಿಗೆ ಯಾಕೆ ಅಧಿಕಾರಿಗಳು ತಾರತಮ್ಯ ಮಾಡ್ತಿದ್ದಾರೆ, ಹೀಗೆ ಮುಂದುವರೆದ್ರೆ ಮುಂದಿನ‌ ದಿನಗಳಲ್ಲಿ ನಾವು ಡಿಸಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

ಇನ್ನೂ ಈ ಬಗ್ಗೆ ಕೃಷಿ ಸಚಿವರಾದ ಬಿ.ಸಿ ಪಾಟೀಲ್ ಅವರನ್ನೇ ವಿಚಾರಿಸಿದ್ರೆ, ಆ ರೀತಿ ಎಲ್ಲೂ ಆಗಿಲ್ಲ, ಮೀಟಿಂಗ್ ಮಾಡಿದ್ದೇನೆ. 75 ಕೋಟಿ ಈ ತಿಂಗಳು ಬಿದ್ದಿದೆ. ಹಂತ ಹಂತವಾಗಿ ಎಲ್ಲಾ ರೈತರಿಗೂ ಫಸಲ್ ಭೀಮಾ ಯೋಜನೆ ತಲುಪಲಿದೆ. ಆ ರೀತಿ ಒಂದೇ ಗ್ರಾಮಕ್ಕೆ ಸಮಸ್ಯೆ ಆಗ್ತಿದೆ ಅದರ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

 ಒಟ್ನಲ್ಲಿ ರೈತರಿಗೆ ಅನುಕೂಲ ಆಗಲಿಕ್ಕೆ ಸರ್ಕಾರ ಹಲವು ಯೋಜನೆಗಳು ತಂದಿದ್ರೂ ರೈತರಿಗೆ ಸರಿಯಾಗಿ ತಲುಪುತ್ತಿಲ್ಲವಲ್ಲ ಎಂಬ ಬೇಸರ ಎಲ್ಲರಲ್ಲಿ ಮನೆ ಮಾಡಿದೆ. ಕೂಡಲೇ ಇದಕ್ಕೆ ನಾಂದಿ ಹಾಡಿ ರೈತರಿಗೆ ಅನುಕೂಲ‌ ವಾಗುವಂತೆ ಅಧಿಕಾರಿಗಳು ಆಡಳಿತ ನಡೆಸಲಿ ಎಂಬುದು ನಮ್ಮ ಆಶಯ.
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more