Chitradurga: ಎರಡ್ಮೂರು ವರ್ಷಗಳಿಂದ ರೈತರಿಗೆ ತಲುಪದ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆ

Chitradurga: ಎರಡ್ಮೂರು ವರ್ಷಗಳಿಂದ ರೈತರಿಗೆ ತಲುಪದ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆ

Published : Mar 04, 2022, 05:08 PM ISTUpdated : Mar 04, 2022, 05:47 PM IST

ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆಗಳನ್ನ‌ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ  ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ‌ ಕೇಳಿ ಬಂದಿದೆ. 
 

ಚಿತ್ರದುರ್ಗ (ಮಾ. 04):  ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆಗಳನ್ನ‌ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ  ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ‌ ಕೇಳಿ ಬಂದಿದೆ. 

 ಕಳೆದ ಎರಡ್ಮೂರು ವರ್ಷಗಳಿಂದಲೂ ಚಳ್ಳಕೆರೆ ತಾಲ್ಲೂಕಿನ ಗಡಿಭಾಗದಲ್ಲಿರೋ ಸೊಂಡೆಕೆರೆ ಗ್ರಾಮದ ರೈತರಿಗೆ ಯಾವುದೇ ಬೆಳೆ ವಿಮೆ ಜಮಾ ಆಗ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಸುತ್ತಮುತ್ತಲಿನ ಎಲ್ಲಾ ಗ್ರಾಮದ ರೈತರಿಗೆ ಫಸಲ್ ಭೀಮಾ ಯೋಜನೆ ಹಣ ಹಾಗೂ ಬೆಳೆ ವಿಮೆ ತಲುಪಿದೆ. ಆದ್ರೆ ನಮ್ಮ ಗ್ರಾಮದ ಜನರಿಗೆ ಯಾಕೆ ಅಧಿಕಾರಿಗಳು ತಾರತಮ್ಯ ಮಾಡ್ತಿದ್ದಾರೆ, ಹೀಗೆ ಮುಂದುವರೆದ್ರೆ ಮುಂದಿನ‌ ದಿನಗಳಲ್ಲಿ ನಾವು ಡಿಸಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

ಇನ್ನೂ ಈ ಬಗ್ಗೆ ಕೃಷಿ ಸಚಿವರಾದ ಬಿ.ಸಿ ಪಾಟೀಲ್ ಅವರನ್ನೇ ವಿಚಾರಿಸಿದ್ರೆ, ಆ ರೀತಿ ಎಲ್ಲೂ ಆಗಿಲ್ಲ, ಮೀಟಿಂಗ್ ಮಾಡಿದ್ದೇನೆ. 75 ಕೋಟಿ ಈ ತಿಂಗಳು ಬಿದ್ದಿದೆ. ಹಂತ ಹಂತವಾಗಿ ಎಲ್ಲಾ ರೈತರಿಗೂ ಫಸಲ್ ಭೀಮಾ ಯೋಜನೆ ತಲುಪಲಿದೆ. ಆ ರೀತಿ ಒಂದೇ ಗ್ರಾಮಕ್ಕೆ ಸಮಸ್ಯೆ ಆಗ್ತಿದೆ ಅದರ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

 ಒಟ್ನಲ್ಲಿ ರೈತರಿಗೆ ಅನುಕೂಲ ಆಗಲಿಕ್ಕೆ ಸರ್ಕಾರ ಹಲವು ಯೋಜನೆಗಳು ತಂದಿದ್ರೂ ರೈತರಿಗೆ ಸರಿಯಾಗಿ ತಲುಪುತ್ತಿಲ್ಲವಲ್ಲ ಎಂಬ ಬೇಸರ ಎಲ್ಲರಲ್ಲಿ ಮನೆ ಮಾಡಿದೆ. ಕೂಡಲೇ ಇದಕ್ಕೆ ನಾಂದಿ ಹಾಡಿ ರೈತರಿಗೆ ಅನುಕೂಲ‌ ವಾಗುವಂತೆ ಅಧಿಕಾರಿಗಳು ಆಡಳಿತ ನಡೆಸಲಿ ಎಂಬುದು ನಮ್ಮ ಆಶಯ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more