Chitradurga: ಎರಡ್ಮೂರು ವರ್ಷಗಳಿಂದ ರೈತರಿಗೆ ತಲುಪದ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆ

Chitradurga: ಎರಡ್ಮೂರು ವರ್ಷಗಳಿಂದ ರೈತರಿಗೆ ತಲುಪದ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆ

Published : Mar 04, 2022, 05:08 PM ISTUpdated : Mar 04, 2022, 05:47 PM IST

ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆಗಳನ್ನ‌ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ  ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ‌ ಕೇಳಿ ಬಂದಿದೆ. 
 

ಚಿತ್ರದುರ್ಗ (ಮಾ. 04):  ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ‌ ಯೋಜನೆಗಳನ್ನ‌ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ  ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ‌ ಕೇಳಿ ಬಂದಿದೆ. 

 ಕಳೆದ ಎರಡ್ಮೂರು ವರ್ಷಗಳಿಂದಲೂ ಚಳ್ಳಕೆರೆ ತಾಲ್ಲೂಕಿನ ಗಡಿಭಾಗದಲ್ಲಿರೋ ಸೊಂಡೆಕೆರೆ ಗ್ರಾಮದ ರೈತರಿಗೆ ಯಾವುದೇ ಬೆಳೆ ವಿಮೆ ಜಮಾ ಆಗ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಸುತ್ತಮುತ್ತಲಿನ ಎಲ್ಲಾ ಗ್ರಾಮದ ರೈತರಿಗೆ ಫಸಲ್ ಭೀಮಾ ಯೋಜನೆ ಹಣ ಹಾಗೂ ಬೆಳೆ ವಿಮೆ ತಲುಪಿದೆ. ಆದ್ರೆ ನಮ್ಮ ಗ್ರಾಮದ ಜನರಿಗೆ ಯಾಕೆ ಅಧಿಕಾರಿಗಳು ತಾರತಮ್ಯ ಮಾಡ್ತಿದ್ದಾರೆ, ಹೀಗೆ ಮುಂದುವರೆದ್ರೆ ಮುಂದಿನ‌ ದಿನಗಳಲ್ಲಿ ನಾವು ಡಿಸಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

ಇನ್ನೂ ಈ ಬಗ್ಗೆ ಕೃಷಿ ಸಚಿವರಾದ ಬಿ.ಸಿ ಪಾಟೀಲ್ ಅವರನ್ನೇ ವಿಚಾರಿಸಿದ್ರೆ, ಆ ರೀತಿ ಎಲ್ಲೂ ಆಗಿಲ್ಲ, ಮೀಟಿಂಗ್ ಮಾಡಿದ್ದೇನೆ. 75 ಕೋಟಿ ಈ ತಿಂಗಳು ಬಿದ್ದಿದೆ. ಹಂತ ಹಂತವಾಗಿ ಎಲ್ಲಾ ರೈತರಿಗೂ ಫಸಲ್ ಭೀಮಾ ಯೋಜನೆ ತಲುಪಲಿದೆ. ಆ ರೀತಿ ಒಂದೇ ಗ್ರಾಮಕ್ಕೆ ಸಮಸ್ಯೆ ಆಗ್ತಿದೆ ಅದರ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

 ಒಟ್ನಲ್ಲಿ ರೈತರಿಗೆ ಅನುಕೂಲ ಆಗಲಿಕ್ಕೆ ಸರ್ಕಾರ ಹಲವು ಯೋಜನೆಗಳು ತಂದಿದ್ರೂ ರೈತರಿಗೆ ಸರಿಯಾಗಿ ತಲುಪುತ್ತಿಲ್ಲವಲ್ಲ ಎಂಬ ಬೇಸರ ಎಲ್ಲರಲ್ಲಿ ಮನೆ ಮಾಡಿದೆ. ಕೂಡಲೇ ಇದಕ್ಕೆ ನಾಂದಿ ಹಾಡಿ ರೈತರಿಗೆ ಅನುಕೂಲ‌ ವಾಗುವಂತೆ ಅಧಿಕಾರಿಗಳು ಆಡಳಿತ ನಡೆಸಲಿ ಎಂಬುದು ನಮ್ಮ ಆಶಯ.
 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more