May 10, 2020, 11:25 AM IST
ಬೆಂಗಳೂರು(ಮೇ.10): ಲಾಕ್ಡೌನ್ನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದರು. ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಗೆ ಮತ್ತೊಂದು ಬಲಿ: 31ಕ್ಕೇರಿದ ಸಾವಿನ ಸಂಖ್ಯೆ
ಕೆಲ ವರ್ಗಗಳು ಪರಿಹಾರದ ಬಗ್ಗೆ ಇನ್ನೂ ನಿರೀಕ್ಷೆಯಲ್ಲಿವೆ. ಸಿಎಂ ಯಡಿಯೂರಪ್ಪ ಅವರು ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.