ಮೈಸೂರಿನಲ್ಲಿ ಸಿದ್ಧವಾಗ್ತಿದೆ ಸಿಎಂ ಸಿದ್ದರಾಮಯ್ಯ ಮನೆ: ಹೇಗಿದೆ ಗೊತ್ತಾ ಮೂರು ಅಂತಸ್ತಿನ ಐಷಾರಾಮಿ ಬಂಗಲೆ ?

ಮೈಸೂರಿನಲ್ಲಿ ಸಿದ್ಧವಾಗ್ತಿದೆ ಸಿಎಂ ಸಿದ್ದರಾಮಯ್ಯ ಮನೆ: ಹೇಗಿದೆ ಗೊತ್ತಾ ಮೂರು ಅಂತಸ್ತಿನ ಐಷಾರಾಮಿ ಬಂಗಲೆ ?

Published : Jul 31, 2023, 03:10 PM IST

ಸಿಎಂ ಸಿದ್ದರಾಮಯ್ಯ ಅವರ ಮೊದಲ ಮನೆ ಮೈಸೂರಿನಲ್ಲಿ ರೆಡಿಯಾಗ್ತಿದೆ. ಇದೀಗ ಸಿಎಂ ಬಂಗಲೆ ವೀಕ್ಷಣೆ ಮಾಡಿದ್ದಾರೆ.
 

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಐಷಾರಾಮಿ ಮನೆಯ ನಿರ್ಮಾಣ ಕಾರ್ಯ ಅಂತಿಮ ಹಂತಕ್ಕೆ ಬಂದಿದೆ. ಜಿಲ್ಲೆಯ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿ ಅವರ ಮನೆ(House) ಇದೆ. 85/120 ವಿಸ್ತೀರ್ಣದಲ್ಲಿ ಮನೆ ನಿರ್ಮಾಣ ಆಗುತ್ತಿದೆ. ಬೆಂಗಳೂರು ಮೂಲದ ಕಂಪನಿ ಮನೆಯನ್ನು ನಿರ್ಮಿಸುತ್ತಿದೆ. ಭವ್ಯವಾಗಿ ಮೂರು ಅಂತಸ್ತಿನ ಕಟ್ಟಡ ನಿರ್ಮಾಣವಾಗುತ್ತಿದೆ. ಸೆಲ್ಲಾರ್, ಗ್ರೌಂಡ್ ಫ್ಲೋರ್, ಫಸ್ಟ್ ಹಾಗೂ ಸೆಕೆಂಡ್ ಫ್ಲೋರ್, ಸೆಂಟ್ರಲೈಸ್ಡ್ ಏಸಿ ವ್ಯವಸ್ಥೆಯುಳ್ಳ ಬಂಗಲೆ ಇದಾಗಿದೆ. ಬಂಗಲೆ ಪ್ರವೇಶಕ್ಕೆ ಎರಡು ಮುಖ್ಯ ದ್ವಾರಗಳ ವ್ಯವಸ್ಥೆ ಮಾಡಲಾಗಿದ್ದು, ಕಟ್ಟಡದ ಪ್ಲಾಸ್ಟರಿಂಗ್, ವೈರಿಂಗ್ ಹಾಗೂ ವುಡ್‌ವರ್ಕ್ ಪ್ರಗತಿಯಲ್ಲಿದೆ. ಮಗನ ಪುಣ್ಯತಿಥಿಗೆ ಆಗಮಿಸಿದ್ದ ವೇಳೆ, ಸಿಎಂ ಸಿದ್ದರಾಮಯ್ಯ(CM Siddaramaiah) ಬಂಗಲೆ ವೀಕ್ಷಣೆ ಮಾಡಿದ್ದಾರೆ. ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಮನೆ ಕಾಮಗಾರಿ ವೀಕ್ಷಣೆ ಮಾಡಿದರು. ಈವರೆಗೆ ಮೈಸೂರಿನಲ್ಲಿ(Mysore) ನಾಲ್ಕು ಬಾರಿ ಸಿಎಂ ಸಿದ್ದರಾಮಯ್ಯ ಮನೆ ಬದಲಿಸಿದ್ದಾರೆ. ಬಾಡಿಗೆ, ಬೆಂಬಲಿಗರು, ಸ್ನೇಹಿತರ ಮನೆಯಲ್ಲೇ  ಸಿದ್ದರಾಮಯ್ಯ ವಾಸ ಮಾಡುತ್ತಿದ್ದಾರೆ. ವಿಜಯನಗರ ಎರಡನೇ ಹಂತ ಬಡಾವಣೆಯಲ್ಲಿ ಸಿದ್ದರಾಮಯ್ಯ ಮೊದಲ ಮನೆ ಇತ್ತು. ಉಪ ಮುಖ್ಯಮಂತ್ರಿ ಆಗಿದ್ದ ವೇಳೆ ಆ ಮನೆಯನ್ನು ಸಿದ್ದರಾಮಯ್ಯ ಮಾರಿದ್ದರು. ನಂತರ ಬೇರೆಯವ ಮನೆಯಲ್ಲೇ ಕಾಲ ಕಳೆದುಕೊಂಡು ಸಿದ್ದರಾಮಯ್ಯ ಬಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಪತ್ತೆಯಾದ ಶರತ್‌ ಮೃತದೇಹ: ಕಾರ್ಯಾಚರಣೆ ಬಗ್ಗೆ ಸಾಮಾಜಿಕ ಕಾರ್ಯಕರ್ತ ನಾಗರಾಜ್‌ ಹೇಳಿದ್ದೇನು ?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?