ಬಜೆಟ್‌ನಲ್ಲಿ "ಆರ್ಥಿಕ ಶಿಸ್ತು" ಮೀರಿದ್ರಾ "ನೀತಿ"ರಾಮಯ್ಯ..?: ಬಿಜೆಪಿಯ 17 ಯೋಜನೆ, ಕಾಯ್ದೆಗಳಿಗೆ ಸಿದ್ದು ಬ್ರೇಕ್

ಬಜೆಟ್‌ನಲ್ಲಿ "ಆರ್ಥಿಕ ಶಿಸ್ತು" ಮೀರಿದ್ರಾ "ನೀತಿ"ರಾಮಯ್ಯ..?: ಬಿಜೆಪಿಯ 17 ಯೋಜನೆ, ಕಾಯ್ದೆಗಳಿಗೆ ಸಿದ್ದು ಬ್ರೇಕ್

Published : Jul 09, 2023, 12:33 PM IST

ಚರಿತ್ರೆ ಕಂಡು ಕೇಳರಿಯದ ಬಜೆಟ್‌ನಲ್ಲಿ ರೋಚಕ ಲೆಕ್ಕಾಚಾರ..!
ರಾಜ್ಯವನ್ನು ದಿವಾಳಿಯಾಗಲು ಬಿಡಲಾರೆ ಸಿದ್ದರಾಮಯ್ಯ ಶಪಥ..!
ಬಜೆಟ್ ಮಂಡಿಸಿದ ಮರುದಿನವೇ ಪ್ರತಿಜ್ಞೆ ಮಾಡಿದ ಸಿಎಂ ಸಿದ್ದು

ಕೊಂಕು ಮಾತನ್ನೇ ಚಾಲೆಂಜಾಗಿ ತೆಗೆದುಕೊಂಡಿದ್ದ ಸಿದ್ದರಾಮಯ್ಯನವರೀಗ(Siddaramaiah) ರಾಜ್ಯದಲ್ಲೇ ಅತ್ಯಂತ ಹೆಚ್ಚು ಬಜೆಟ್‌ಗಳನ್ನು ಮಂಡಿಸಿದ ದಾಖಲೆವೀರ. ಶುಕ್ರವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರೋದು ದಾಖಲೆಯ 14ನೇ ಬಜೆಟ್. ಇಷ್ಟೊಂದು ಸಂಖ್ಯೆಯ ಬಜೆಟ್‌ಗಳನ್ನು( budget) ಮಂಡಿಸಿದ ಮತ್ತೊಬ್ಬ ಮಂತ್ರಿ, ಮುಖ್ಯಮಂತ್ರಿ ರಾಜ್ಯದಲ್ಲೇ ಇಲ್ಲ. ಸಿದ್ದರಾಮಯ್ಯ ಅಂದ್ರೆ ಲೆಕ್ಕ, ಲೆಕ್ಕ ಅಂದ್ರೆ ಸಿದ್ದರಾಮಯ್ಯ. ಕಬ್ಬಿಣದ ಕಡಲೆಗಳಂತಿರೋ ಅಂಕಿ ಅಂಶಗಳು ಸಿದ್ದರಾಮಯ್ಯನವರಿಗೆ ಸದಾ ಕರತಲಾಮಲಕ. ಹೀಗಾಗಿ ಅವರನ್ನು ಲೆಕ್ಕರಾಮಯ್ಯ, ನೀತಿರಾಮಯ್ಯ ಅಂತ ಕರೀತಾರೆ. ಕಳೆದ ಫೆಬ್ರವರಿಯಲ್ಲಿ ಆಗಿನ ಬಿಜೆಪಿ(BJP) ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ₹3,09,182  ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ರೆ, ಈಗ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿರೋ ಸಿದ್ದರಾಮಯ್ಯ ₹3,27,747 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ಅಂದ್ರೆ ನಾಲ್ಕೇ ತಿಂಗಳುಗಳ ಅಂತರದಲ್ಲಿ ಮಂಡನೆಯಾದ ರಾಜ್ಯ ಬಜೆಟ್ ಗಾತ್ರದಲ್ಲಿ ಏರಿಕೆಯಾಗಿರುವ ಮೊತ್ತ ₹18,565 ಕೋಟಿ ರೂ.ಆಗಿದೆ. ಅಷ್ಟೇ ಅಲ್ಲ ಕೈ ಸರ್ಕಾರದ 11 ಹಳೇ ಯೋಜನೆಗಳಿಗೆ ಮರುಜೀವ ಕೊಟ್ಟಿದ್ದಾರೆ. ಬಿಜೆಪಿಯ 17 ಯೋಜನೆಗಳಿಗೆ ಬ್ರೇಕ್‌ ಹಾಕಿದ್ದಾರೆ.  

ಇದನ್ನೂ ವೀಕ್ಷಿಸಿ: ಜೈನಮುನಿಗಳಿಗೆ ರಕ್ಷಣೆ ಕೊಡಬೇಕು, ಕೊಲೆಗಡುಕರಿಗೆ ಶಿಕ್ಷೆ ಆಗಬೇಕು: ಗುಣಧರನಂದಿ ಮಹಾರಾಜ್‌ ಸ್ವಾಮೀಜಿ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more