ಹಾವಿನ ಬಾತ್‌ರೂಂ ಮೋಹ...  ಯಾರೂ ಇಲ್ಲದ ವೇಳೆ ಬಾತ್ ರೂಮ್ ಗೆ ಬರುತ್ತಿದ್ದ ನಾಗರ ಹಾವು..!

ಹಾವಿನ ಬಾತ್‌ರೂಂ ಮೋಹ... ಯಾರೂ ಇಲ್ಲದ ವೇಳೆ ಬಾತ್ ರೂಮ್ ಗೆ ಬರುತ್ತಿದ್ದ ನಾಗರ ಹಾವು..!

Contributor Asianet   | Asianet News
Published : Feb 03, 2022, 01:09 PM IST
  • ಯಾರೂ ಇಲ್ಲದ ವೇಳೆ ಬಾತ್ ರೂಮ್ ಗೆ ಬರುತ್ತಿದ್ದ ನಾಗರ ಹಾವು!
  • ಪೈಪ್ ಮೂಲಕ ಬಾತ್‌ರೂಂ ಪ್ರವೇಶಿಸಿ ಪುನಃ ಅದೇ ಪೈಪ್ ಮೂಲಕ ಹೊರಗೆ
  • ಶಿವಮೊಗ್ಗದ ಮದಾರಿಪಾಳ್ಯದ ಮನೆಯೊಂದರಲ್ಲಿ ವಿಚಿತ್ರ ಘಟನೆ

ಶಿವಮೊಗ್ಗ(ಫೆ.3): ನಾಗರ ಹಾವೊಂದರ ಬಾತ್‌ರೂಂ ಮೋಹ ಈಗ ಶಿವಮೊಗ್ಗದಲ್ಲಿ ಚರ್ಚೆಯ ವಿಷಯವಾಗಿದೆ. ಹೌದು,  ಇದೆಂಥಾ  ವಿಚಿತ್ರ ಅಂತಾ ನಿಮಗನಿಸಬಹುದು. ನಗರದ ಮದಾರಿಪಾಳ್ಯದ  ಮೊಹಮ್ಮದ್ ಜಿಯಾವುಲ್ಲಾ ಎಂಬುವರ ಮನೆಯಲ್ಲಿ ಕಳೆದ 3 ತಿಂಗಳಿಂದ ಹಾವೊಂದು ಬಾತ್‌ರೂಂಗೆ ಪದೇ ಪದೇ ವಿಸಿಟ್‌ ಕೊಡುತ್ತಿದೆ. ಯಾರೂ ಇಲ್ಲದ ವೇಳೆ ಪೈಪ್ ಮೂಲಕ ಬಾತ್ ರೂಂ ಪ್ರವೇಶಿಸಿ ಪುನಃ ಅದೇ ಪೈಪ್ ಮೂಲಕ ಹೊರ ಹೋಗುತ್ತಿದೆ. ಹಿಂದೊಮ್ಮೆ ಮನೆಯವರು ಆಕಸ್ಮಿಕವಾಗಿ ಹಾವು ಬಾತ್ ರೂಂ ನಲ್ಲಿ ಬಂದಿದ್ದು ನೋಡಿದ್ದಾರೆ, ಸ್ವಲ್ಪ ಸಮಯದ ನಂತರ ಅದು ಹೊರ ಹೋಗುವುದನ್ನೂ ನೋಡಿದ್ದಾರೆ. ಅಂತೂ ಇಂತೂ ಹೊರ ಹೋಯ್ತಲ್ಲ ಎಂದು ಸುಮ್ಮನಾಗಿದ್ದಾರೆ. 

ಆದರೆ ಅವರ ಲೆಕ್ಕಾಚಾರವನ್ನು ಸುಳ್ಳು ಮಾಡಿದೆ ಆ ಹಾವು! ಹೋದೆಯಾ ಪಿಶಾಚಿ ಎಂದರೆ ಬಂದೆ ಗವಾಕ್ಷಿಯಲ್ಲಿ ಎಂಬಂತೆ ಪುನಃ ಬಾತ್ ರೂಂ ನಲ್ಲಿ ಕಾಣಿಸಿಕೊಂಡಿದೆ.  ಮನೆಯವರಿಗೆ ತಿಳಿಯದಂತೆ ಆಗಾಗ್ಗೆ ಬಾತ್ ರೂಂ ಗೆ ಹಾವು ಬಂದು ಹೋಗುತ್ತಿರುವುದು ಗೊತ್ತಾಗಿದೆ.  ಬಾತ್ ರೂಂನ ನೀರು ಹರಿದು ಹೋಗುವ ಪೈಪ್ ಒಳಗಿಂದ ನಾಗರ ಹಾವೊಂದು ಒಳ ಬಂದು ಹೋಗುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ. ನಿನ್ನೆ ಮತ್ತೆ ಬಾತ್ ರೂಂ ಪೈಪ್ ನಲ್ಲಿ ಹಾವು ಕಾಣಿಸಿಕೊಂಡಿದ್ದು,  ಗಾಬರಿಗೊಳಗಾದ ಮನೆಯವರು ಉರಗ ಸಂರಕ್ಷಕ ಸ್ನೇಕ್ ಕಿರಣ್ ಗೆ ಮಾಹಿತಿ ನೀಡಿದ್ದರು.  ಸ್ಥಳಕ್ಕಾಗಮಿಸಿದ ಕಿರಣ್ , ಸುರಕ್ಷಿತವಾಗಿ ಹಾವನ್ನು ರಕ್ಷಿಸಿದ್ದಾರೆ. 

ಒಂಟಿಯಾಗಿ ಜೀವಿಸುತ್ತಿದ್ದ ವ್ಯಕ್ತಿ ಸಾವು... ಮನೆಯಲ್ಲಿತ್ತು 125 ಕ್ಕೂ ಹೆಚ್ಚು ಬಗೆಯ ಹಾವು

ಹಾಗಾದ್ರೆ ಕಳೆದ ಮೂರು ತಿಂಗಳಿನಿಂದ ಹಾವು ಬಾತ್ ರೂಮ್ ಪೈಪ್ ಅನ್ನೇ ವಾಸ ಸ್ಥಾನ ಮಾಡಿಕೊಂಡಿತ್ತಾ? ಎಂಬ ಅನುಮಾನ ಹುಟ್ಟಿಕೊಂಡಿದೆ.  ಆದರೆ ನಾಗರ ಹಾವಿನ ವಿಚಿತ್ರ ವರ್ತನೆ ಮಾತ್ರ ಯಕ್ಷ ಪ್ರಶ್ನೆ ಯಾಗಿ ಉಳಿದಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more