ಚಾಮರಾಜನಗರ ಕಾರಾಗೃಹದಲ್ಲಿ ಖೈದಿಗಳಿಗೆ ಕಂಪ್ಯೂಟರ್ ತರಬೇತಿ: SSLC, ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರು ಆಯ್ಕೆ

ಚಾಮರಾಜನಗರ ಕಾರಾಗೃಹದಲ್ಲಿ ಖೈದಿಗಳಿಗೆ ಕಂಪ್ಯೂಟರ್ ತರಬೇತಿ: SSLC, ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರು ಆಯ್ಕೆ

Published : Nov 20, 2023, 10:06 AM IST

ರಾಜ್ಯದಲ್ಲೇ ಮೊದಲ ಬಾರಿ ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣ ತರಬೇತಿ ನೀಡಲಾಗ್ತಿದೆ. ಚಾಮರಾಜನಗರದಲ್ಲಿ ವಿನೂತನ ಯೋಜನೆಗೆ ಚಾಲನೆ ಸಿಕ್ಕಿದೆ. ಕೈದಿಗಳಿಗೇಕೆ ಕಂಪ್ಯೂಟರ್ ಶಿಕ್ಷಣ? ಚಾಮರಾಜನಗರದಲ್ಲೇ ಈ ಯೋಜನೆಗೆ  ಚಾಲನೆ ಸಿಕ್ಕಿದ್ಯಾಕೆ ಅನ್ನೋದ್ರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
 

ಖೈದಿಗಳು.. ಅಂದ್ರೆ ಯಾವುದೋ ತಪ್ಪು ಮಾಡಿ ಶಿಕ್ಷೆ ಅನುಭವಿಸಲು ಬಂದವರು. ಕೆಲವರು ಉದ್ದೇಶಪೂರ್ವಕವಾಗಿ ತಪ್ಪು ಮಾಡಿದ್ರೆ, ಮತ್ತೆ ಕೆಲವರು ಕೆಟ್ಟ ಗಳಿಗೆಯಲ್ಲಿ ತಪ್ಪುಮಾಡಿ ಜೈಲು ಸೇರಿರ್ತಾರೆ. ಆದ್ರೆ, ಇಂಥ ಖೈದಿಗಳಿಗೆ(prisoners) ಮನರಿವರ್ತನೆ ಮಾಡುವ ಕೆಲಸಗಳು ನಡೆಯುತ್ತವೆ. ಈ ಮಧ್ಯೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ(Chamarajanagar) ಖೈದಿಗಳಿಗೆ ವಿಶೇಷ ಯೋಜನೆಗೆ ಚಾಲನೆ ನೀಡಲಾಗಿದೆ. ಇನ್ಫೋಸಿಸ್ ಜೊತೆ ಕೈಜೋಡಿಸಿದ ಜಿಲ್ಲಾಡಳಿತ ಕಾರಾಗೃಹದಲ್ಲೇ(Jail) ಖೈದಿಗಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಮುಂದಾಗಿದೆ. ಡಿಜಿಟಲ್ ಯುಗದಲ್ಲಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಶಿಕ್ಷಣ ಇದೆ. ಜೈಲಲ್ಲಿರೋ ಖೈದಿಗಳಿಗೂ ಕಂಪ್ಯೂಟರ್ ಶಿಕ್ಷಣ ಸಿಕ್ಕರೆ ಅವರ ಬಾಳಲ್ಲೂ ಬದಲಾವಣೆ ಬರಬಹುದು. ಇದ್ರಿಂದ ಜೈಲು ಶಿಕ್ಷೆ ಮುಗಿದ ಬಳಿಕ ಖೈದಿಗಳು ಜೀವನ ರೂಪಿಸಿಕೊಳ್ಳೋಕೆ ನೆರವಾಗುತ್ತೆ ಅನ್ನೋ ಉದ್ದೇಶಕ್ಕೆ ಕಂಪ್ಯೂಟರ್ ಶಿಕ್ಷಣ(computer education) ಕೊಡಲಾಗ್ತಿದೆ. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ವಿಶೇಷ ಮುತೂವರ್ಜಿಯಿಂದ ಇಂಥದ್ದೊಂದು ಯೋಜನೆಗೆ ಚಾಲನೆ ಸಿಕ್ಕಿದೆ. ಮೈಸೂರಿನ ಇನ್ಫೋಸಿಸ್, ರೋಟರಿ, ಪಂಚಶೀಲ ಸಹಯೋಗದೊಂದಿಗೆ ಕಂಪ್ಯೂಟರ್ ತರಬೇತಿ ನೀಡಲಾಗ್ತಿದೆ. ಸುಸಜ್ಜಿತ ಕಂಪ್ಯೂಟರ್ ಲ್ಯಾಬ್‌ನಲ್ಲಿ 10 ಕಂಪ್ಯೂಟರ್, ಪ್ರಿಂಟರ್ ಮತ್ತು ಸುಲಭವಾಗಿ ಕಂಪ್ಯೂಟರ್ ಅರ್ಥೈಸಿಕೊಳ್ಳಲು ಕನ್ನಡ ಕಿರುಪುಸ್ತಕ ನೀಡಲಾಗಿದೆ. ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಸದ್ಯ 130ಕ್ಕೂ ಹೆಚ್ಚು ಖೈದಿಗಳಿದ್ದಾರೆ. ಆದ್ರೆ ಎಸ್ಎಸ್ಎಲ್‌ಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳ 38 ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಆಯ್ಕೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಏಷ್ಯಾನೆಟ್‌ ಸುವರ್ಣನ್ಯೂಸ್ ರಿಯಾಲಿಟಿ ಚೆಕ್: ಅಂಗನವಾಡಿ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ ಕಳಪೆ !

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more