ಚಾಮರಾಜನಗರ ಕಾರಾಗೃಹದಲ್ಲಿ ಖೈದಿಗಳಿಗೆ ಕಂಪ್ಯೂಟರ್ ತರಬೇತಿ: SSLC, ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರು ಆಯ್ಕೆ

ಚಾಮರಾಜನಗರ ಕಾರಾಗೃಹದಲ್ಲಿ ಖೈದಿಗಳಿಗೆ ಕಂಪ್ಯೂಟರ್ ತರಬೇತಿ: SSLC, ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರು ಆಯ್ಕೆ

Published : Nov 20, 2023, 10:06 AM IST

ರಾಜ್ಯದಲ್ಲೇ ಮೊದಲ ಬಾರಿ ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣ ತರಬೇತಿ ನೀಡಲಾಗ್ತಿದೆ. ಚಾಮರಾಜನಗರದಲ್ಲಿ ವಿನೂತನ ಯೋಜನೆಗೆ ಚಾಲನೆ ಸಿಕ್ಕಿದೆ. ಕೈದಿಗಳಿಗೇಕೆ ಕಂಪ್ಯೂಟರ್ ಶಿಕ್ಷಣ? ಚಾಮರಾಜನಗರದಲ್ಲೇ ಈ ಯೋಜನೆಗೆ  ಚಾಲನೆ ಸಿಕ್ಕಿದ್ಯಾಕೆ ಅನ್ನೋದ್ರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
 

ಖೈದಿಗಳು.. ಅಂದ್ರೆ ಯಾವುದೋ ತಪ್ಪು ಮಾಡಿ ಶಿಕ್ಷೆ ಅನುಭವಿಸಲು ಬಂದವರು. ಕೆಲವರು ಉದ್ದೇಶಪೂರ್ವಕವಾಗಿ ತಪ್ಪು ಮಾಡಿದ್ರೆ, ಮತ್ತೆ ಕೆಲವರು ಕೆಟ್ಟ ಗಳಿಗೆಯಲ್ಲಿ ತಪ್ಪುಮಾಡಿ ಜೈಲು ಸೇರಿರ್ತಾರೆ. ಆದ್ರೆ, ಇಂಥ ಖೈದಿಗಳಿಗೆ(prisoners) ಮನರಿವರ್ತನೆ ಮಾಡುವ ಕೆಲಸಗಳು ನಡೆಯುತ್ತವೆ. ಈ ಮಧ್ಯೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ(Chamarajanagar) ಖೈದಿಗಳಿಗೆ ವಿಶೇಷ ಯೋಜನೆಗೆ ಚಾಲನೆ ನೀಡಲಾಗಿದೆ. ಇನ್ಫೋಸಿಸ್ ಜೊತೆ ಕೈಜೋಡಿಸಿದ ಜಿಲ್ಲಾಡಳಿತ ಕಾರಾಗೃಹದಲ್ಲೇ(Jail) ಖೈದಿಗಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಮುಂದಾಗಿದೆ. ಡಿಜಿಟಲ್ ಯುಗದಲ್ಲಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಶಿಕ್ಷಣ ಇದೆ. ಜೈಲಲ್ಲಿರೋ ಖೈದಿಗಳಿಗೂ ಕಂಪ್ಯೂಟರ್ ಶಿಕ್ಷಣ ಸಿಕ್ಕರೆ ಅವರ ಬಾಳಲ್ಲೂ ಬದಲಾವಣೆ ಬರಬಹುದು. ಇದ್ರಿಂದ ಜೈಲು ಶಿಕ್ಷೆ ಮುಗಿದ ಬಳಿಕ ಖೈದಿಗಳು ಜೀವನ ರೂಪಿಸಿಕೊಳ್ಳೋಕೆ ನೆರವಾಗುತ್ತೆ ಅನ್ನೋ ಉದ್ದೇಶಕ್ಕೆ ಕಂಪ್ಯೂಟರ್ ಶಿಕ್ಷಣ(computer education) ಕೊಡಲಾಗ್ತಿದೆ. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ವಿಶೇಷ ಮುತೂವರ್ಜಿಯಿಂದ ಇಂಥದ್ದೊಂದು ಯೋಜನೆಗೆ ಚಾಲನೆ ಸಿಕ್ಕಿದೆ. ಮೈಸೂರಿನ ಇನ್ಫೋಸಿಸ್, ರೋಟರಿ, ಪಂಚಶೀಲ ಸಹಯೋಗದೊಂದಿಗೆ ಕಂಪ್ಯೂಟರ್ ತರಬೇತಿ ನೀಡಲಾಗ್ತಿದೆ. ಸುಸಜ್ಜಿತ ಕಂಪ್ಯೂಟರ್ ಲ್ಯಾಬ್‌ನಲ್ಲಿ 10 ಕಂಪ್ಯೂಟರ್, ಪ್ರಿಂಟರ್ ಮತ್ತು ಸುಲಭವಾಗಿ ಕಂಪ್ಯೂಟರ್ ಅರ್ಥೈಸಿಕೊಳ್ಳಲು ಕನ್ನಡ ಕಿರುಪುಸ್ತಕ ನೀಡಲಾಗಿದೆ. ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಸದ್ಯ 130ಕ್ಕೂ ಹೆಚ್ಚು ಖೈದಿಗಳಿದ್ದಾರೆ. ಆದ್ರೆ ಎಸ್ಎಸ್ಎಲ್‌ಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳ 38 ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಆಯ್ಕೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಏಷ್ಯಾನೆಟ್‌ ಸುವರ್ಣನ್ಯೂಸ್ ರಿಯಾಲಿಟಿ ಚೆಕ್: ಅಂಗನವಾಡಿ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ ಕಳಪೆ !

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more