ಚಾಮರಾಜನಗರ ಕಾರಾಗೃಹದಲ್ಲಿ ಖೈದಿಗಳಿಗೆ ಕಂಪ್ಯೂಟರ್ ತರಬೇತಿ: SSLC, ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರು ಆಯ್ಕೆ

ಚಾಮರಾಜನಗರ ಕಾರಾಗೃಹದಲ್ಲಿ ಖೈದಿಗಳಿಗೆ ಕಂಪ್ಯೂಟರ್ ತರಬೇತಿ: SSLC, ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರು ಆಯ್ಕೆ

Published : Nov 20, 2023, 10:06 AM IST

ರಾಜ್ಯದಲ್ಲೇ ಮೊದಲ ಬಾರಿ ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣ ತರಬೇತಿ ನೀಡಲಾಗ್ತಿದೆ. ಚಾಮರಾಜನಗರದಲ್ಲಿ ವಿನೂತನ ಯೋಜನೆಗೆ ಚಾಲನೆ ಸಿಕ್ಕಿದೆ. ಕೈದಿಗಳಿಗೇಕೆ ಕಂಪ್ಯೂಟರ್ ಶಿಕ್ಷಣ? ಚಾಮರಾಜನಗರದಲ್ಲೇ ಈ ಯೋಜನೆಗೆ  ಚಾಲನೆ ಸಿಕ್ಕಿದ್ಯಾಕೆ ಅನ್ನೋದ್ರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
 

ಖೈದಿಗಳು.. ಅಂದ್ರೆ ಯಾವುದೋ ತಪ್ಪು ಮಾಡಿ ಶಿಕ್ಷೆ ಅನುಭವಿಸಲು ಬಂದವರು. ಕೆಲವರು ಉದ್ದೇಶಪೂರ್ವಕವಾಗಿ ತಪ್ಪು ಮಾಡಿದ್ರೆ, ಮತ್ತೆ ಕೆಲವರು ಕೆಟ್ಟ ಗಳಿಗೆಯಲ್ಲಿ ತಪ್ಪುಮಾಡಿ ಜೈಲು ಸೇರಿರ್ತಾರೆ. ಆದ್ರೆ, ಇಂಥ ಖೈದಿಗಳಿಗೆ(prisoners) ಮನರಿವರ್ತನೆ ಮಾಡುವ ಕೆಲಸಗಳು ನಡೆಯುತ್ತವೆ. ಈ ಮಧ್ಯೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ(Chamarajanagar) ಖೈದಿಗಳಿಗೆ ವಿಶೇಷ ಯೋಜನೆಗೆ ಚಾಲನೆ ನೀಡಲಾಗಿದೆ. ಇನ್ಫೋಸಿಸ್ ಜೊತೆ ಕೈಜೋಡಿಸಿದ ಜಿಲ್ಲಾಡಳಿತ ಕಾರಾಗೃಹದಲ್ಲೇ(Jail) ಖೈದಿಗಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಮುಂದಾಗಿದೆ. ಡಿಜಿಟಲ್ ಯುಗದಲ್ಲಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಶಿಕ್ಷಣ ಇದೆ. ಜೈಲಲ್ಲಿರೋ ಖೈದಿಗಳಿಗೂ ಕಂಪ್ಯೂಟರ್ ಶಿಕ್ಷಣ ಸಿಕ್ಕರೆ ಅವರ ಬಾಳಲ್ಲೂ ಬದಲಾವಣೆ ಬರಬಹುದು. ಇದ್ರಿಂದ ಜೈಲು ಶಿಕ್ಷೆ ಮುಗಿದ ಬಳಿಕ ಖೈದಿಗಳು ಜೀವನ ರೂಪಿಸಿಕೊಳ್ಳೋಕೆ ನೆರವಾಗುತ್ತೆ ಅನ್ನೋ ಉದ್ದೇಶಕ್ಕೆ ಕಂಪ್ಯೂಟರ್ ಶಿಕ್ಷಣ(computer education) ಕೊಡಲಾಗ್ತಿದೆ. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ವಿಶೇಷ ಮುತೂವರ್ಜಿಯಿಂದ ಇಂಥದ್ದೊಂದು ಯೋಜನೆಗೆ ಚಾಲನೆ ಸಿಕ್ಕಿದೆ. ಮೈಸೂರಿನ ಇನ್ಫೋಸಿಸ್, ರೋಟರಿ, ಪಂಚಶೀಲ ಸಹಯೋಗದೊಂದಿಗೆ ಕಂಪ್ಯೂಟರ್ ತರಬೇತಿ ನೀಡಲಾಗ್ತಿದೆ. ಸುಸಜ್ಜಿತ ಕಂಪ್ಯೂಟರ್ ಲ್ಯಾಬ್‌ನಲ್ಲಿ 10 ಕಂಪ್ಯೂಟರ್, ಪ್ರಿಂಟರ್ ಮತ್ತು ಸುಲಭವಾಗಿ ಕಂಪ್ಯೂಟರ್ ಅರ್ಥೈಸಿಕೊಳ್ಳಲು ಕನ್ನಡ ಕಿರುಪುಸ್ತಕ ನೀಡಲಾಗಿದೆ. ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಸದ್ಯ 130ಕ್ಕೂ ಹೆಚ್ಚು ಖೈದಿಗಳಿದ್ದಾರೆ. ಆದ್ರೆ ಎಸ್ಎಸ್ಎಲ್‌ಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳ 38 ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಆಯ್ಕೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಏಷ್ಯಾನೆಟ್‌ ಸುವರ್ಣನ್ಯೂಸ್ ರಿಯಾಲಿಟಿ ಚೆಕ್: ಅಂಗನವಾಡಿ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ ಕಳಪೆ !

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more