ಚಾಮರಾಜನಗರ ದುರಂತ : ವೈದ್ಯರ ಮೇಲೆ ಕೆಂಡಾಮಂಡಲವಾದ ಸಿದ್ದರಾಮಯ್ಯ

May 4, 2021, 3:16 PM IST

ಚಾಮರಾಜನಗರ (ಮೇ.04): ಚಾಮರಾಜನಗರದಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ  ಜಿಲ್ಲಾಸ್ಪತ್ರೆಗೆ  ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ.  ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ವೈದ್ಯರಿಗೆ ತರಾಟೆ ತೆಗೆದುಕೊಂಡರು. 

ಚಾಮರಾಜನಗರ ದುರಂತದ ಬಳಿಕ ಎಚ್ಚೆತ್ತ ಸರ್ಕಾರ: ಮಹತ್ವದ ನಿರ್ಧಾರ ಕೈಗೊಂಡ ಸಿಎಂ ...

ಆಸ್ಪತ್ರೆಯಲ್ಲಿ ಎಷ್ಟು ಐಸಿಯು ಬೆಡ್ ಗಳಿವೆ. 53 ಐಸಿಯು ಬೆಡ್ ಗಳಿದ್ದ ಮೇಲೆ ಎಲ್ಲಾ ವಾರ್ಡ್ ಗಳಲ್ಲಿ ವೆಂಟಿಲೇಟರ್ ಇರ್ಬೇಕಲ್ಲಾ. ಏಕೆ 34 ಬೆಡ್ ಗಳಲ್ಲಿ ಮಾತ್ರ ವೆಂಟಿಲೇಟರ್ ಇದೆ. ಸಮಸ್ಯೆಗಳನ್ನ‌ ಮುಚ್ಚಿಡಲು‌ ಯತ್ನಿಸಿಬೇಡಿ ಗರಂ ಆದರು. ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಲಾಗದೆ ಆಸ್ಪತ್ರೆ ಡೀನ್ ತಡಬಡಾಯಿಸಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona