ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

Published : Aug 04, 2023, 11:16 AM IST

ಹಿಂದೂಯುವತಿಯರ ವಿಡಿಯೋ ವಿವಾದ ಕರಾವಳಿಯಲ್ಲಿ ದೊಡ್ಡ ಕಿಚ್ಚು ಎಬ್ಬಿಸಿದೆ. ಬಿಜೆಪಿ ಪ್ರತಿಭಟನೆ ಬಳಿಕ ಈಗ ಹಿಂದೂಸಂಘಟನೆಗಳು ಹೋರಾಟಕ್ಕೆ ಇಳಿದಿದ್ದು SIT ತನಿಖೆ ನೀಡುವಂತೆ ಆಗ್ರಹಿಸಿದ್ದಾರೆ. ಇದರ ಮಧ್ಯೆಯೇ ಶರಣುಪಂಪ್‌ವೆಲ್ ಕೊಟ್ಟ ಹೇಳಿಕೆ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ.

ಉಡುಪಿ ನೇತ್ರಾವತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹಿಂದೂ ಯುವತಿಯರ ವಿಡಿಯೋ ವಿವಾದ(Udupi video case) ದೊಡ್ಡ ಕಿಚ್ಚು ಎಬ್ಬಿಸಿದೆ. ABVP, ಬಿಜೆಪಿ ಪ್ರತಿಭಟನೆ(BJP Protest) ಬಳಿಕ ಈಗ ಹಿಂದೂಸಂಘಟನೆಗಳು ಹೋರಾಟಕ್ಕೆ ಧುಮುಕಿವೆ. ವಿಶ್ವಹಿಂದೂ ಪರಿಷತ್, ಭಜರಂಗದಳದ ಸುಮಾರು 4 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಉಡುಪಿಯಲ್ಲಿ ನಿನ್ನೆ  ಪ್ರತಿಭಟನೆ ಕಹಳೆ ಮೊಳಗಿಸಿದ್ರು. ಮೂರು ಕಿಲೋಮೀಟರ್  ಹಿಂದೂ ಸಂಘಟನೆಯ ಕಾರ್ಯಕರ್ತರು ಬೃಹತ್ ಜಾಥಾ  ಮೂಲಕ ಸರ್ಕಾರದ ವಿರುದ್ಧ ಸಿಟ್ಟು ಹೊರಹಾಕಿದ್ರು. ರಶ್ಮಿ ಸಮಂತ್ ಪ್ರತಿಭಟನಾ ಮುಂಚೂಣಿಯಲ್ಲಿದ್ರೆ, ಶಾಸಕ ಸುನೀಲ್ ಕುಮಾರ್, ಉಡುಪಿ ವಿಧಾಸಭಾ ಕ್ಷೇತ್ರದ ಸಂಘಪರಿವಾರ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ಪೊಲೀಸ್ ತನಿಖೆಯಲ್ಲಿ ನ್ಯಾಯ ಸಿಗೋಲ್ಲ ಎಸ್‌ಐಟಿಯಿಂದಲೇ ತನಿಖೆ ಮಾಡುವಂತೆ ಆಗ್ರಹಿಸಿದ್ರು. ಬೃಹತ್ ಮೆರವಣಿಗೆ ಬಳಿಕ ಉಡುಪಿ ಕೃಷ್ಣಾಮಠದ ಪಾರ್ಕಿಂಗ್ ಏರಿಯಾದಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ವಿಎಚ್‌ಪಿ ಮುಖಂಡ ಶರಣು ಪಂಪ್‌ವೆಲ್ (Sharan Pumpwell) ಸೌಟು ಪೊರಕೆ ಹಿಡಿಯುವ ಕೈಗಳು ಮನೆಯ ಮಕ್ಕಳ ರಕ್ಷಣೆಗಾಗಿ ತಲ್ವಾರ್, ಕತ್ತಿಗಳನ್ನ ಹಿಡಿಬೇಕು ಎನ್ನುವ ಮೂಲಕ ಮತ್ತೊಂದು ವಿವಾದ ದೊಡ್ಡ ವಿವಾದ ಹುಟ್ಟುಹಾಕಿದ್ರು.

ಇದನ್ನೂ ವೀಕ್ಷಿಸಿ:  ಶಿವಣ್ಣನಿಗೂ ಇಷ್ಟವಂತೆ ಕಾವಾಲಯ್ಯ ಹಾಡು...ಸಾಂಗ್‌ಗೆ ಹ್ಯಾಟ್ರಿಕ್‌ ಹೀರೋ ಮಸ್ತ್‌ ಡ್ಯಾನ್ಸ್‌

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!