ಇಲ್ಲಿ ದುಡ್ಡುಕೊಟ್ರೆ ಪರೀಕ್ಷೆ ಪಾಸ್, ಫುಲ್ ಮಾರ್ಕ್ಸ್! ಇದು ಕರ್ನಾಟಕ ರಾಜ್ಯ ಮುಕ್ತ ವಿವಿ ಕರ್ಮಕಾಂಡ

ಇಲ್ಲಿ ದುಡ್ಡುಕೊಟ್ರೆ ಪರೀಕ್ಷೆ ಪಾಸ್, ಫುಲ್ ಮಾರ್ಕ್ಸ್! ಇದು ಕರ್ನಾಟಕ ರಾಜ್ಯ ಮುಕ್ತ ವಿವಿ ಕರ್ಮಕಾಂಡ

Published : Sep 13, 2023, 09:42 AM IST

ಮೊನ್ನೆ ಮೊನ್ನೆಯಷ್ಟೆ ಬಳ್ಳಾರಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಮೊಬೈಲ್‌ ಹಿಡಿದು ಮಾಸ್ ಕಾಪಿ ಮಾಡುತ್ತಿದ್ದ ವಿಡಿಯೋ ಬಹಿರಂಗ ಆಗಿತ್ತು. ಆದ್ರೆ ಈಗ ದುಡ್ ಕೊಟ್ರೆ ಮಾಸ್ ಕಾಪಿಗೆ ಸಿಬ್ಬಂದಿಯೇ ಅವಕಾಶ ಕೊಡುತ್ತಾರೆ ಅನ್ನೋ ರಹಸ್ಯ ಬೆಳಕಿಗೆ ಬಂದಿದೆ. 
 

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ. ಸದಾ ಒಂದಿಲ್ಲೊಂದು ಕಾಂಟ್ರವರ್ಸಿ, ಕರ್ಮಕಾಂಡಕ್ಕೆ ಸುದ್ದಿಯಾಗುತ್ತಿರುತ್ತೆ. ವಿದ್ಯಾರ್ಥಿಗಳ ಪಾಲಿಗೆ ವರ ಆಗಬೇಕಿದ್ದ ಮೈಸೂರಿನ(Mysore) ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯ ಅವರ ಪಾಲಿನ ಉರುಳಾಗಿ ಬೆಳೆದಿದೆ. ಜ್ಞಾನಾರ್ಜನೆಗೆ ಬರುವ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ನೀಡದೆ, ಅಕ್ರಮಗಳನ್ನು ನಡೆಸಿ ಪ್ರಾಮಾಣಿಕ ವಿದ್ಯಾರ್ಥಿಗಳ ಪಾಲಿಗೆ ಶಾಪವಾಗ್ತಿದೆ. ಇದು ಪ್ರಾಮಾಣಿಕ ವಿದ್ಯಾರ್ಥಿಯೊಬ್ಬ(Student) ವಿವಿ ಪ್ರಾಧ್ಯಾಪಕರಿಗೆ ಪೋನ್ ಮಾಡಿ ಗೋಳಾಡಿದ ಆಡಿಯೋ. ವಿವಿಯ ಸಹಾಯಕ ಪ್ರಾಧ್ಯಾಪಕ ಜಗದೀಶ್ ಬಾಬು ಹಾಗೂ ಚಿತ್ರದುರ್ಗ ಮೂಲದ ವಿದ್ಯಾರ್ಥಿಯ ಸಂಭಾಷಣೆಯಲ್ಲಿ ಮಂಡ್ಯ, ಚಿತ್ರದುರ್ಗ, ದಾವಣಗೆರೆಯ (Davanagere)ಪರೀಕ್ಷಾ ಕೇಂದ್ರಗಳ ಲಂಚಾವತಾರ ಬಿಚ್ಚಿಟ್ಟಿದ್ದಾರೆ . ಕಳೆದ ಸೆಮಿಸ್ಟರ್ ಬಹುತೇಕ ಪರೀಕ್ಷೆಗಳಲ್ಲಿ‌ ಮಾಸ್ ಕಾಫಿ ನಡೆದಿದ್ದು, ಒಂದು ಸಾವಿರ ಕೊಟ್ಟರೆ ಎಂ,ಎ ಹಾಗೂ ಎಂ.ಕಾಂ ಪರೀಕ್ಷೆಗಳಲ್ಲಿ ಹಾಗೂ ಒಂದುವರೆ ಸಾವಿರ ಕೊಟ್ಟರೆ ಎಂ.ಎಸ್ಸಿ ಪರೀಕ್ಷೆಗಳನ್ನು ಕಾಪಿ ಮಾಡಬಹುದಂತೆ. ದುಡ್ಡು ಕೊಡಲಿಲ್ಲ ಅಂದ್ರೆ ಸಪರೇಟ್ ರೂಂ ನಲ್ಲಿ ಸ್ಟ್ರಿಕ್ಟ್ ಆಗಿ ಪರೀಕ್ಷೆ ಬರೆಸ್ತಾರೆ ಎಂದು ವಿದ್ಯಾರ್ಥಿ ಆರೋಪಿಸಿದ್ದಾನೆ. ಕರ್ನಾಟಕ ರಾಜ್ಯ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ವರವಾಗಲಿ ಎಂದು ಸ್ಥಾಪನೆಯಾಗಿದೆ. ಆದ್ರಿಲ್ಲಿ ಸಿಬ್ಬಂದಿಗಳು ತಮ್ಮ ಆರ್ಥಿಕತೆಗೆ ಅನುಕೂಲವಾಗುವಂತೆ ಬಳಸಿಕೊಳ್ಳುವಂತೆ ಕಾಣ್ತಿದೆ. ರಾಜ್ಯ ಸರ್ಕಾರ ಮಧ್ಯ ಪ್ರವೆಶ ಮಾಡಿ ಈ ಕರ್ಮಕಾಂಡಕ್ಕೆ ಬ್ರೇಕ್ ಹಾಕಬೇಕಿದೆ.

ಇದನ್ನೂ ವೀಕ್ಷಿಸಿ:  Today Horoscope: ಮೇಷದಿಂದ ಮೀನ- ಯಾವ ರಾಶಿಯವರಿಗೆ ಏನುಫಲ ? ನೀವು ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳೇನು ?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more